HSRP ಗಡುವು ವಿಸ್ತರಣೆ:ಸಚಿವ ರಾಮಲಿಂಗಾರೆಡ್ಡಿ
Team Udayavani, Jun 20, 2024, 1:05 AM IST
ಬೆಂಗಳೂರು:ಅತೀ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಕೆಯ ಅಂತಿಮ ಗಡುವನ್ನು ಸೆ. 15ರ ವರೆಗೆ ವಿಸ್ತರಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಈಗಾಗಲೇ ಎಚ್ಎಸ್ಆರ್ಪಿ ಅಳವಡಿಕೆಗೆ ಸಂಬಂಧಿಸಿ ಹಲವು ಬಾರಿ ಕಾಲಾವಕಾಶ ವಿಸ್ತರಿಸಲಾಗಿದೆ.
ನ್ಯಾಯಾಲಯ ಕೂಡ ಜು. 4ರ ವರೆಗೆ ಯಾವುದೇ ಒತ್ತಡ ಹೇರುವಂತಿಲ್ಲ ಎಂದು ಸೂಚಿಸಿತ್ತು. ಇದೆಲ್ಲದರ ಹಿನ್ನೆಲೆಯಲ್ಲಿ ವಾಹನ ಮಾಲಕರಿಗೆ ಸೆ. 15ರ ವರೆಗೆ ಅಂತಿಮ ಗಡುವು ನೀಡ ಲಾಗಿದೆ ಎಂದರು. ಸುಮಾರು ಎರಡು ಕೋಟಿ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕಿದ್ದು, ಇದುವರೆಗೆ ಶೇ. 25ರಷ್ಟು ಅಂದರೆ 45 ಲಕ್ಷ ವಾಹನ ಗಳು ಈ ವ್ಯವಸ್ಥೆಯನ್ನು ಹೊಂದಿವೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.