90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
Team Udayavani, Apr 24, 2024, 6:06 PM IST
ಹುಬ್ಬಳ್ಳಿ: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
ಇದನ್ನೂ ಓದಿ: LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.