![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 25, 2024, 3:11 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿ ರಾಷ್ಟ್ರೀಯ ಅಹಿಂದ ಒಕ್ಕೂಟದಿಂದ ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಬೆಂಗಳೂರುವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ರಾಜ್ಯಾದ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.
ಬುಧವಾರ(ಸೆ 25) ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಹಿಂದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟವರು, ಅಂತಹ ನಾಯಕರ ಮೇಲೆ ಸಂಕಷ್ಟ ತರುವಂತಹ ಕಾರ್ಯವನ್ನು ಬಿಜೆಪಿ ಮಾಡಿದ್ದು, ಎಲ್ಲೆಲ್ಲಿ ಬಿಜೆಪಿ ಆಡಳಿತವಿಲ್ಲವೋ ಅಲ್ಲಿ ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಸರ್ಕಾರ ಕೆಡವಲು ಮುಂದಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಅ.3 ರಂದು ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಿಂದ ಜಾಥಾ ಆರಂಭವಾಗಿ ಕಿತ್ತೂರ ಚನ್ನಮ್ಮ , ಸಂಗೊಳ್ಳಿ ರಾಯಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪನೆ ಮಾಡಿ ಕುಂದಗೋಳ ಮೂಲಕ ಶಿಗ್ಗಾಂವಿ, ಹಾವೇರಿ, ಚಿತ್ರದುರ್ಗದ ಮೂಲಕ ಬೆಂಗಳೂರ ವಿಧಾನಸೌಧದ ವರೆಗೆ ಜಾಥಾ ತೆರಳಲಿದೆ ಎಂದರು.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 136 ಶಾಸಕರು ಸೇರಿದಂತೆ, ಸಿದ್ದರಾಮಯ್ಯ ಅಭಿಮಾನಿಗಳು, ದಲಿತ ಸಂಘಟನೆಗಳು ಸೇರಿದಂತೆ ಎಲ್ಲರೂ ನೈತಿಕ ಬೆಂಬಲ ನೀಡುತ್ತಿದ್ದು, ಜಾಥಾದಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ. ಸಿಎಂ ಅವರು ರಾಜೀನಾಮೆ ನೀಡದೆ ಆಡಳಿತ ಮುಂದುವರೆಸಬೇಕು ಎಂದರು.
ರಾಜಶೇಖರ ಮೆಣಸಿನಕಾಯಿ, ಬಾಬಾಜಾನ್ ಮುಧೋಳ, ವೀರನಗೌಡ ಪಾಟೀಲ್, ವಿಶಾಲ ವಾಘಮೋಡೆ, ಶ್ರೀಧರ ದೊಡ್ಡಮನಿ, ಸಂಗೀತಾ ಚಾವ ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.