Siddaramaiah ಬೆಂಬಲಿಸಿ ಅಹಿಂದದಿಂದ ಹುಬ್ಬಳ್ಳಿ-ಬೆಂಗಳೂರು ಜಾಗೃತಿ ಜಾಥಾ
Team Udayavani, Sep 25, 2024, 3:11 PM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿ ರಾಷ್ಟ್ರೀಯ ಅಹಿಂದ ಒಕ್ಕೂಟದಿಂದ ಅಕ್ಟೋಬರ್ 3 ರಂದು ಹುಬ್ಬಳ್ಳಿಯಿಂದ ಬೆಂಗಳೂರುವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ರಾಜ್ಯಾದ್ಯಕ್ಷ ಮುತ್ತಣ್ಣ ಶಿವಳ್ಳಿ ಹೇಳಿದರು.
ಬುಧವಾರ(ಸೆ 25) ಇಲ್ಲಿನ ಪ್ರವಾಸಿ ಮಂದಿರದಲ್ಲಿ ಅಹಿಂದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟವರು, ಅಂತಹ ನಾಯಕರ ಮೇಲೆ ಸಂಕಷ್ಟ ತರುವಂತಹ ಕಾರ್ಯವನ್ನು ಬಿಜೆಪಿ ಮಾಡಿದ್ದು, ಎಲ್ಲೆಲ್ಲಿ ಬಿಜೆಪಿ ಆಡಳಿತವಿಲ್ಲವೋ ಅಲ್ಲಿ ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಸರ್ಕಾರ ಕೆಡವಲು ಮುಂದಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಅ.3 ರಂದು ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಿಂದ ಜಾಥಾ ಆರಂಭವಾಗಿ ಕಿತ್ತೂರ ಚನ್ನಮ್ಮ , ಸಂಗೊಳ್ಳಿ ರಾಯಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪನೆ ಮಾಡಿ ಕುಂದಗೋಳ ಮೂಲಕ ಶಿಗ್ಗಾಂವಿ, ಹಾವೇರಿ, ಚಿತ್ರದುರ್ಗದ ಮೂಲಕ ಬೆಂಗಳೂರ ವಿಧಾನಸೌಧದ ವರೆಗೆ ಜಾಥಾ ತೆರಳಲಿದೆ ಎಂದರು.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 136 ಶಾಸಕರು ಸೇರಿದಂತೆ, ಸಿದ್ದರಾಮಯ್ಯ ಅಭಿಮಾನಿಗಳು, ದಲಿತ ಸಂಘಟನೆಗಳು ಸೇರಿದಂತೆ ಎಲ್ಲರೂ ನೈತಿಕ ಬೆಂಬಲ ನೀಡುತ್ತಿದ್ದು, ಜಾಥಾದಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ. ಸಿಎಂ ಅವರು ರಾಜೀನಾಮೆ ನೀಡದೆ ಆಡಳಿತ ಮುಂದುವರೆಸಬೇಕು ಎಂದರು.
ರಾಜಶೇಖರ ಮೆಣಸಿನಕಾಯಿ, ಬಾಬಾಜಾನ್ ಮುಧೋಳ, ವೀರನಗೌಡ ಪಾಟೀಲ್, ವಿಶಾಲ ವಾಘಮೋಡೆ, ಶ್ರೀಧರ ದೊಡ್ಡಮನಿ, ಸಂಗೀತಾ ಚಾವ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
High Court Order: ಕೋರ್ಟ್ ಕಲಾಪ ವೀಡಿಯೋ ಬಳಕೆಗೆ ನಿಷೇಧ
Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ ಇದ್ದಾರೆ… ಸಚಿವ ಮಧು ಬಂಗಾರಪ್ಪ
Scandal: ಸಚಿವರಾದ ಪ್ರಿಯಾಂಕ್, ಕೆ.ಎನ್.ರಾಜಣ್ಣ ಮೇಲೆ ಹಗರಣದ ತೂಗುಗತ್ತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.