ಕೋಲಾರ ಟೊಮೆಟೊಗೆ ಭಾರೀ ಬೇಡಿಕೆ: ಬಾಂಗ್ಲಾದೇಶಕ್ಕೆ ರಫ್ತು

ಒಡಿಶಾ, ಛತ್ತೀಸ್‌ಗಡ, ಕೋಲ್ಕತಾ ಸಹಿತ ಉತ್ತರ ಭಾರತದ ರಾಜ್ಯಗಳಲ್ಲಿ ಹೆಚ್ಚಿದ ಬೇಡಿಕೆ, ಬೆಲೆ ಏರಿಕೆ

Team Udayavani, Jun 26, 2023, 6:21 AM IST

TOMATO

ಬೆಂಗಳೂರು: ನೆರೆಯ ಬಾಂಗ್ಲಾದೇಶ, ಒಡಿಶಾ, ಛತ್ತೀಸ್‌ಗಡ, ಕೋಲ್ಕತಾ ಸಹಿತ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಟೊಮೆಟೊಗೆ ಬೇಡಿಕೆ ಸೃಷ್ಟಿಯಾಗಿದ್ದು, ಆ ಹಿನ್ನೆಲೆಯಲ್ಲಿ ರಾಜ್ಯದ ಮಾರುಕಟ್ಟೆಗಳಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ.

ಕೋಲಾರದ ಹೋಲ್‌ಸೇಲ್‌ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ 15 ಕೆ.ಜಿ. ಬಾಕ್ಸ್‌ನ ಟೊಮೆಟೊ 900ರೂ.ದಿಂದ 1100 ರೂ. ವರೆಗೂ ಮಾರಾಟವಾಗುತ್ತಿದೆ. ಹೊರ ದೇಶ ಮತ್ತು ಹೊರ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟದ ಟೊಮೆಟೊಗೆ ಸಾಕಷ್ಟು ಬೇಡಿಕೆಯಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಟೊಮೆಟೊ ಮತ್ತಷ್ಟು ದುಬಾರಿಯಾಗುವ ನಿರೀಕ್ಷೆಯಿದೆ.

ಕೆ.ಆರ್‌.ಮಾರುಕಟ್ಟೆ ಸಹಿತ ನಗರದ ಹಲವು ಮಾರುಕಟ್ಟೆಯಲ್ಲಿ ಚೆಲ್ಲರೆ ಮಾರಾಟದಲ್ಲಿ ಪ್ರತಿ ಕೆ.ಜಿಗೆ.30 ರೂ.ಗೆ ಖರೀದಿಯಾಗುತ್ತಿದ್ದ ಟೊಮೆಟೊ ಈಗ 50ರಿಂದ 55 ರೂ.ಗೆ ಮಾರಾಟವಾಗುತ್ತಿದೆ.

ಸಕಾಲಕ್ಕೆ ಮಳೆ ಬಾರದಿರುವುದು, ಬೆಳೆಗಳಿಗೆ ನುಸಿರೋಗ ಕಾಣಿಸಿಕೊಂಡಿರುವುದು ಮತ್ತು ತಮಿಳುನಾಡು ಸಹಿತ ಕೆಲವು ರಾಜ್ಯಗಳಲ್ಲಿ ಟೊಮೆಟೊ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈಗ ಬೇಡಿಕೆಗೆ ತಕ್ಕಷ್ಟು ಟೊಮೆಟೊ ಸಿಗುತ್ತಿಲ್ಲ. ಆ ಹಿನ್ನೆಲೆಯಲ್ಲಿ ಬೆಲೆಯಲ್ಲಿ ಹೆಚ್ಚಳವಾಗಿದೆ ಎಂದು ಜಾಲಹಳ್ಳಿಯ ಟೊಮೆಟೊ ವ್ಯಾಪಾರಿ ಜಯಣ್ಣ ಹೇಳುತ್ತಾರೆ.

ಬಾಂಗ್ಲಾದೇಶಕ್ಕೆ ರಫ್ತು
ತಮಿಳುನಾಡಿನಲ್ಲಿ ಹೇರಳ ಪ್ರಮಾಣದಲ್ಲಿ ಟೊಮೆಟೊ ಬೆಳೆಯಲಾಗುತ್ತಿದ್ದು, ಈ ಬಾರಿ ಅಲ್ಲೂ ಬೆಳೆ ನಾಶವಾಗಿದೆ. ಕೋಲ್ಕತಾ ಭಾಗದಲ್ಲಿ ಬೆಳೆಯಲಾಗುತ್ತಿದ್ದ ಟೊಮೆಟೊ ಬಾಂಗ್ಲಾದೇಶಕ್ಕೆ ರಫ್ತಾಗುತ್ತಿತ್ತು. ಆದರೆ ಈ ಬಾರಿ ಅಲ್ಲೂ ಬೆಳೆ ಕಡಿಮೆಯಾಗಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ಕೋಲಾರ ಮಾರುಕಟ್ಟೆಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಹೊರ ಜಿಲ್ಲೆಗಳಿಂದ ವರ್ತಕರು ಇಲ್ಲಿಗೆ ಬಂದು ಖರೀದಿಸುತ್ತಿದ್ದಾರೆ ಎಂದು ಕೋಲಾರದ ವರ್ತಕ ಪುಟ್ಟರಾಜು ಮಾಹಿತಿ ನೀಡುತ್ತಾರೆ.

ಕೆಲವು ದಿನಗಳ ಹಿಂದೆ ಕೋಲಾರ ಮಾರುಕಟ್ಟೆಯಲ್ಲಿ 15 ಕೆ.ಜಿ. ಬಾಕ್ಸ್‌ ಟೊಮೆಟೊ 300-400 ರೂ.ಗೆ ಖರೀದಿಯಾಗುತ್ತಿತ್ತು. ಇತ್ತೀಚೆಗಷ್ಟೇ ಅದು 700ರಿಂದ 800 ರೂ.ಗೆ ಏರಿತ್ತು¤. ಈಗ ಅದು 900-1100 ರೂ.ಗೆ ಹೆಚ್ಚಾಗಿದೆ. ಬಾಂಗ್ಲಾದೇಶ ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಟೊಮೆ ಟೊಗೆ ಬೇಡಿಕೆಯಿದ್ದು, ಬೆಲೆ ಮತ್ತಷ್ಟು ಏರಿದೆ.

ಮಹಾರಾಷ್ಟ್ರದಿಂದ ಕ್ಯಾರೆಟ್‌ ಪೂರೈಕೆ
ಸಿಲಿಕಾನ್‌ ಸಿಟಿ ಬೆಂಗಳೂರಿಗೆ ರಾಜಧಾನಿಯ ಸುತ್ತಮುತ್ತಲಿನ ಪ್ರದೇಶಗಳಿಂದ ಕ್ಯಾರೆಟ್‌ ಪೂರೈಕೆ ಆಗುತ್ತಿತ್ತು. ಆದರೆ ಬೇಡಿಕೆಯಿರುವಷ್ಟು ಬೆಳೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಮಾರುಕಟ್ಟೆಗೆ ಮಹಾರಾಷ್ಟ್ರದಿಂದ ಕ್ಯಾರೆಟ್‌ ಪೂರೈಕೆ ಆಗುತ್ತಿದೆ. ಪ್ರತಿ ದಿನ 600ರಿಂದ 700 ಚೀಲ ಕ್ಯಾರೆಟ್‌ ಮಹಾರಾಷ್ಟ್ರದಿಂದ ರಾಜಧಾನಿಗೆ ಪೂರೈಕೆ ಆಗುತ್ತಿದೆ ಎಂದು ಕಲಾಸಿಪಾಳ್ಯದ ಹೋಲ್‌ಸೇಲ್‌ ವ್ಯಾಪಾರಿ ರವಿರಾಜ್‌ ಹೇಳುತ್ತಾರೆ. ಜತೆಗೆ ಉತ್ತಮ ಗುಣಮಟ್ಟದ ಕ್ಯಾರೆಟ್‌ ಊಟಿಯಿಂದಲೂ ಪ್ರತಿ ದಿನ ಪೂರೈಕೆ ಆಗುತ್ತಿದೆ. ಪ್ರತಿ ಕೆ.ಜಿ 60ರಿಂದ 70 ರೂ.ಗೆ ಚಿಲ್ಲರೆ ಮಾರುಕಟ್ಟೆಯಲ್ಲಿ ಖರೀದಿಯಾಗುತ್ತಿದೆ. ಮಳೆ ಕೊರತೆ, ಬೆಳೆರೋಗ, ಕೆಲವು ರಾಜ್ಯಗಳಲ್ಲಿ ಬೆಳೆ ಹಾನಿಯಾಗಿರುವುದು ತರಕಾರಿಗಳ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದೆ ಎನ್ನುತ್ತಾರೆ.
– ಪುಟ್ಟರಾಜು, ಟೊಮೆಟೊ ವರ್ತಕರು ಕೋಲಾರ

-ದೇವೇಶ ಸೂರಗುಪ್ತ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.