ಜಮೀನಿನ ಬೇಲಿಗೆ ಹಾಕಿದ್ದ ಉರುಳಿಗೆ ಸಿಕ್ಕಿಬಿದ್ದ ಹುಲಿ; ಕೊಳೆತ ಸ್ಥಿತಿಯಲ್ಲಿ ಪತ್ತೆ


Team Udayavani, Nov 13, 2022, 11:55 AM IST

6

ಸಾಂದರ್ಭಿಕ ಚಿತ್ರ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯ ವ್ಯಾಪ್ತಿಯ ಕಾಡಂಚಿನಲ್ಲಿ ಜಮೀನಿನ ಬೇಲಿಗೆ ಅಳವಡಿಸಿದ್ದ ಉರುಳಿಗೆ ಸಿಕ್ಕಿಬಿದ್ದು ಹುಲಿ ಮೃತಪಟ್ಟಿದೆ.

ಸುಮಾರು 12 ವರ್ಷದ ಹೆಣ್ಣು ಹುಲಿ ಇದಾಗಿದ್ದು, 8 -10 ದಿನಗಳ ಹಿಂದೆ ಹುಲಿ ಉರುಳಿಗೆ ಸಿಲುಕಿ ಮೃತ ಪಟ್ಟಿದೆ. ಹುಲಿಯ ತಲೆ ಮತ್ತು ದೇಹದ ಕೆಲವು ಭಾಗ ಮಾತ್ರ ಉಳಿದಿದ್ದು, ಭಾಗಶಃ ಕೊಳೆತು ಹೋಗಿರುವ ಸ್ವಲ್ಪ ಭಾಗದ ದೇಹವನ್ನು ಅರಣ್ಯಕ್ಕೆ ತಂದು ದಹನ ಮಾಡಲಾಗಿದೆ.

ಘಟನೆ ವಿವರ: ಎಚ್.ಡಿ. ಕೋಟೆ ತಾಲೂಕಿನ ತಾರಕ ಗ್ರಾಮದಿಂದ ದಮ್ಮನಕಟ್ಟೆಗೆ ಹೋಗುವ ರಸ್ತೆಯಿಂದ ಸುಮಾರು 300 ಮೀಟರ್ ದೂರದಲ್ಲಿ ಕಾಡಿನಂಚಿನ ಜಮೀನನ ನಡುವೆ ಇದ್ದ ಹಳ್ಳದಲ್ಲಿ ಕೊಳೆತು ಹೋಗಿರುವ ಹುಲಿಯ ಶವದ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಅಂತರ ಸಂತೆ ಗ್ರಾ.‌ಪಂ. ಅಧ್ಯಕ್ಷ ಸುಬ್ರಮಣ್ಯ ಜಮೀನೊಂದರಲ್ಲಿ ಹುಲಿ ದೇಹ ಕೊಳೆತು ಹೋಗಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ ಮೇರೆಗೆ ಅಂತರಸಂತೆ ವನ್ಯ ಜೀವಿ ವಲಯದ ಅರಣ್ಯಾಧಿಕಾರಿ ಸಿದ್ದರಾಜು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕರನ್ನು ವಿಚಾರಣೆಗೆ ಒಳಪಡಿಸಿದ್ದು, ಜಮೀನಿನಲ್ಲಿ ಬೆಳೆ ಇಲ್ಲದಿರುವುದರಿಂದ ಜಮೀನಿಗೆ ಬಂದಿರಲಿಲ್ಲ. ಹಾಗಾಗಿ ತಮಗೆ ಈ ಬಗ್ಗೆ ಗೊತ್ತಿಲ್ಲ, ಜಮೀನಿನ ಬೇಲಿಗೆ ಉರುಳು ಅಳವಡಿಸಿರುವುದು ಕೂಡ ತಮಗೆ ಗೊತ್ತಿಲ್ಲ ಎಂದು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಮೃತಪಟ್ಟಿರುವ ಹುಲಿ ತನ್ನ ಮೂರು ಮರಿಗಳೊಂದಿಗೆ ಆಗಿಂದಾಗ್ಗೆ ಕಾಡಿನಿಂದ ಆಚೆಗೆ ಬರುತ್ತಿದ್ದನ್ನು ಅಕ್ಕ ಪಕ್ಕದ ಜಮೀನಿನ ಮಾಲೀಕರು ನೋಡಿದ್ದಾರೆ. ಗ್ರಾಮಸ್ಥರು ಕೊಟ್ಟ ಮನವಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ, ನಾಲ್ಕಕ್ಕೂ ಹೆಚ್ಚು ಬಾರಿ ಹುಲಿ ಪತ್ತೆಗೆ ಕೂಂಬಿಂಗ್ ನಡೆಸಿದ್ದರು. ಆದರೇ ಏನೂ ಪ್ರಯೋಜನ ಆಗಿರಲಿಲ್ಲ. ಆದರೆ ಅಳವಡಿಸಿದ್ದ ಕ್ಯಾಮರಾಗಳಲ್ಲಿ ಹುಲಿ ಓಡಾಡಿದ್ದ ಚಿತ್ರಗಳು ಕಂಡಿದ್ದವು.

ಈ ಹೆಣ್ಣು ಹುಲಿ ಎರಡು ಬಾರಿ ಮೂರು ಮರಿಗಳಂತೆ ತಲಾ ಎರಡು ಬಾರಿ ಹಾಕಿದ್ದನ್ನು ನೋಡಿದ್ದೆವು ಎಂದು ವನ್ಯ ಜೀವಿ ಪ್ರೇಮಿ ಸತೀಶ್ ಉದಯವಾಣಿಗೆ ತಿಳಿಸಿದ್ದಾರೆ.

ವನ್ಯ ಜೀವಿ ಪರಿಪಾಲಕಿ ಕೃತಿಕಾ ಆಲನಹಳ್ಳಿ, ಡಿಸಿಎಪ್ ಹರ್ಷಕುಮಾರ್ ನರಗುಂದ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಂಗಸ್ವಾಮಿ, ಹುಣಸೂರು ವನ್ಯ ಜೀವಿ ವಲಯದ ಡಾ. ರಮೇಶ್, ಎಚ್.ಡಿ.ಕೋಟೆ ತಾಲೂಕಿನ ಪಶು ಇಲಾಖೆಯ ವೈದ್ಯ ಡಾ. ಪ್ರಸನ್ನ, ಅರಣ್ಯಾಧಿಕಾರಿ ಸಿದ್ದರಾಜು(ಅಂತರಸಂತೆ), ಮಧು (ಡಿ.ಬಿ.ಕುಪ್ಪೆ), ಹರ್ಷ ಗೌಡ(ಮೇಟಿಕುಪ್ಪೆ) ಮತ್ತು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.