![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 16, 2020, 3:02 AM IST
ಮೈಸೂರು: ನಾನೇನು ಸನ್ಯಾಸಿಯಲ್ಲ. ಮುಖ್ಯಮಂತ್ರಿ ಸ್ಥಾನ ಸಿಕ್ಕರೆ ಅದನ್ನು ಸಂತೋಷದಿಂದ ಸ್ವೀಕರಿಸುವೆ. ಆದರೆ, ವಾಮಮಾರ್ಗದ ಮೂಲಕ ಆ ಸ್ಥಾನ ಅಲಂಕರಿಸುವುದಿಲ್ಲ ಎಂದು ಸಚಿವ ಸಿ.ಟಿ.ರವಿ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಹುರೂಪಿ ನಾಟಕೋತ್ಸವ ಉದ್ಘಾಟನೆ ವೇಳೆ ನಟ ಮುಖ್ಯಮಂತ್ರಿ ಚಂದ್ರು ಅವರಿಗೆ, ನನಗೂ ಒಮ್ಮೆ ಮಾಜಿ ಮುಖ್ಯಮಂತ್ರಿ ಸ್ಥಾನ ಕೊಡಿಸಿ ಎಂದು ತಮಾಷೆ ಮಾಡಿದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.
ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಏನಾಗಲಿದೆ ಎಂಬುದು ಗೊತ್ತಾಗುವುದಿಲ್ಲ. ಬಾರದು ಬಪ್ಪದು, ಬಪ್ಪದು ತಪ್ಪದು. ಹೀಗಾಗಿ, ರಾಜಕೀಯದಲ್ಲಿ ಬದಲಾವಣೆ ಎಂಬುದು ಸಹಜ ಪ್ರಕ್ರಿಯೆ. ಹಾಗಾಗಿ, ಮುಂದೊಂದು ದಿನ ನನಗೆ ಮುಖ್ಯಮಂತ್ರಿ ಸ್ಥಾನ ಸಿಕ್ಕರೆ ಅದನ್ನು ಸಂತೋಷದಿಂದ ಸ್ವೀಕರಿಸುವೆ. ಆದರೆ, ಅದಕ್ಕಾಗಿ ವಾಮಮಾರ್ಗ ಅನುಸರಿಸಲಾರೆ ಎಂದರು.
You seem to have an Ad Blocker on.
To continue reading, please turn it off or whitelist Udayavani.