![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 31, 2024, 11:20 PM IST
ಬೆಂಗಳೂರು: ಪಾಪ ಡಿಸಿಎಂ ಡಿ.ಕೆ.ಶಿವಕುಮಾರ್ ನನಗೆ ವೈರಿಯಲ್ಲ. ಅವರು ನನ್ನ ದೊಡ್ಡಮಟ್ಟದ ಹಿತೈಷಿ, ಅವರಷ್ಟು ಹಿತೈಷಿ ನನಗೆ ಯಾರೂ ಇಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಅಮೃತ ಕೊಟ್ಟವರಿಗೆ ವಿಷವೇ ಎಂದು ಪ್ರಶ್ನಿಸಿದ್ದ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಐದು ವರ್ಷ ಕಾಲ ಸರಕಾರ ನಡೆಸಲಿ ಎಂದು 38 ಶಾಸಕರಿರುವ ಪಕ್ಷಕ್ಕೆ ಸಿಎಂ ಸ್ಥಾನ ಕೊಟ್ಟೆವು ಎಂದು ಅವರು ಪದೇಪದೆ ಹೇಳುತ್ತಿದ್ದಾರೆ. ಐದು ವರ್ಷ ನಾಮಕಾವಾಸ್ತೆಯಾಗಿ ನಮಗೆ ಅಧಿಕಾರ ಕೊಟ್ಟರು. ಒಂದು ದಿನವೂ ನೆಮ್ಮದಿಯಾಗಿ ಸರಕಾರ ನಡೆಸಲು ಬಿಡಲಿಲ್ಲ. ಎಷ್ಟು ಚಿತ್ರಹಿಂಸೆ ಕೊಟ್ಟರು ಎಂಬುದು ನನಗಷ್ಟೇ ಗೊತ್ತು. ಅದಕ್ಕೇ ಸಮ್ಮಿಶ್ರ ಸರಕಾರ ಬಿದ್ದಿತೇ ಹೊರತು ಅದಕ್ಕೆ ನಾನು ಕಾರಣವಲ್ಲ ಎಂದು ತಿರುಗೇಟು ಕೊಟ್ಟರು.
ನನ್ನನ್ನು ಮುಖ್ಯಮಂತ್ರಿ ಮಾಡಿಕೊಂಡು ಯಾವ ರೀತಿ ನಡೆಸಿಕೊಂಡರು, ಎಷ್ಟು ಅಪಮಾನ ಮಾಡಿದರು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಚಳಿ, ಮಳೆ, ಗಾಳಿ ಯಾವುದನ್ನೂ ಲೆಕ್ಕಿಸದೇ ನನ್ನ ಜತೆ ನಿಂತುಕೊಂಡರು ನೋಡಿ. ಪಾಪ, ಅವರು ನನಗೆ ಸಹಕಾರ ನೀಡಿದ್ದರಲ್ಲ, ಅದಕ್ಕೆ ಹದಿನಾಲ್ಕೇ ತಿಂಗಳಿಗೆ ಸರಕಾರ ಹೋಗಿದ್ದು. ಸರಕಾರ ಬಂದ ಆರಂಭದಲ್ಲಿಯೇ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೋಳಿ ಘರ್ಷಣೆ ಮಾಡಿಕೊಂಡರಲ್ಲ, ಅದೇನು ಸರಕಾರವನ್ನು ಉಳಿಸಲು ಮಾಡಿದ್ದೇ? ಯಾರು ಶತ್ರು, ಯಾರು ಹಿತೈಷಿ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದು ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.