ನನ್ನ ಮತ ಯಾರಿಗೆ ಎಂದು ಇನ್ನೂ ನಿರ್ಣಯ ಆಗಿಲ್ಲ: ಜೆಡಿಎಸ್ ಗೆ ಶ್ರೀನಿವಾಸ್ ಶಾಕ್
ನಾನು ಕುಮಾರಸ್ವಾಮಿ ಹಾಗೂ ನಿಖಿಲ್ ಗೆ ಬೆನ್ನಿಗೆ ಚೂರಿ ಹಾಕಿದ್ದೇನಂತೆ
Team Udayavani, Jun 9, 2022, 5:23 PM IST
ತುಮಕೂರು : ರಾಜ್ಯಸಭೆ ಚುನಾವಣೆ ಯಲ್ಲಿ ನನ್ನ ಮತ ಯಾರಿಗೆ ಎಂದು ಇನ್ನೂ ನಿರ್ಣಯ ಆಗಿಲ್ಲ ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಅತೃಪ್ತ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿಕೆ ನೀಡಿ ಬಂಡಾಯ ಮುಂದುವರೆಸಿದ್ದಾರೆ.
ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಮತ ಹಾಕುವಂತೆ ನನಗೆ ಪಕ್ಷದಿಂದ ಕರೆ ಬಂದಿಲ್ಲ. ಕುಪೇಂದ್ರ ರೆಡ್ಡಿ ಮನೆಗೆ ಬಂದಿದ್ದರು, ಸಹಾಯ ಕೇಳಿದರು.ನಾನು ಮಾತಾಡುತ್ತೇನೆ ಅಂದಿದ್ದೇನೆ. ಕುಮಾರಸ್ವಾಮಿ ನನ್ನ ಬಳಿ ರಾಜ್ಯಸಭೆ ಚುನಾವಣೆ ಕುರಿತು ಮಾತಾಡಿಲ್ಲ. ಅದಕ್ಕಿಂತ ಮೊದಲು ಮಾತಾಡಿದ್ದರು. ಅವರು ಮತ ಹಾಕುವಂತೆ ಕೇಳುವುದಿಲ್ಲ ಅಂದುಕೊಂಡಿದ್ದೇನೆ. ನನ್ನ ಪರ್ಯಾಯ ನಾಯಕರನ್ನು ಈಗಾಗಲೇ ಅವರು ಹುಡುಕಿದ್ದಾರೆ. ಹಾಗಾಗಿ ಅವರಿಗೆ ನನ್ನ ಅವಶ್ಯಕತೆ ಇಲ್ಲ ಎಂದು ಆಕ್ರೋಶದ ನುಡಿಗಳನ್ನಾಡಿದ್ದಾರೆ.
ನಾನು ಜೆಡಿಎಸ್ ಗೇ ಮತ ಹಾಕಬೇಕು ಅಂದುಕೊಂಡಿದ್ದೇನೆ. ಆದರೆ 40ಗಂಟೆಗಳಲ್ಲಿ ಏನುಬೇಕಾದರೂ ಆಗಬಹುದು. ಸಿದ್ದರಾಮಯ್ಯ ಅವರು ವಿಶ್ಲೇಷಣೆ ಮಾಡಿದ ರೀತಿ ನನ್ನ ಆತ್ಮಸಾಕ್ಷಿ ಮತ ಇಲ್ಲ.ನಾನು ಕುಮಾರಸ್ವಾಮಿ ಹಾಗೂ ನಿಖಿಲ್ ಗೆ ಬೆನ್ನಿಗೆ ಚೂರಿ ಹಾಕಿದ್ದೇನಂತೆ. ನನ್ನ ಮತ ಯಾರಿಗೆ ಎಂದು ಇನ್ನೂ ನಿರ್ಣಯ ಆಗಿಲ್ಲ. ಡಿಸೆಂಬರ್ ವರೆಗೆ ಕಾದು ನೋಡುತ್ತೇನೆ ಎಂದರು.
ಇದನ್ನೂ ಓದಿ : ರಾಜ್ಯಸಭಾ ಚುನಾವಣೆ ಮತದಾನ: ಸ್ಪಷ್ಟನೆ ನೀಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ
ರೇಸಾರ್ಟ್ ಗೆ ನಾನು ಹೋಗುವುದಿಲ್ಲ. ರೇಸಾರ್ಟ್ ಗೆ ಹೋಗಬೇಕಂತಿಲ್ಲ.ವಿಪ್ ಜಾರಿಯಾಗಿದೆ.ನಾಡಗೌಡರು ಜಾರಿ ಮಾಡಿದ್ದಾರೆ, ವಿಪ್ ಉಲ್ಲಂಘನೆ ಮಾಡಿದವರಿಗೆ ಶಿಕ್ಷೆ ಏನಾಗಿದೆ. ಮತ ಹಾಕಿದ್ದನ್ನು ತೋರಿಸಿಯೇ ಹಾಕಬೇಕಲ್ಲವಾ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
ಕನ್ನಡದಲ್ಲಿ ಎಂಜಿನಿಯರಿಂಗ್ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ
MUST WATCH
ಹೊಸ ಸೇರ್ಪಡೆ
Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ
Nayanthara: ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್ ಸ್ಟಾರ್?
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.