ಅಕ್ರಮ ಗಣಿಗಾರಿಕೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಚಿವರಲ್ಲಿ ಒತ್ತಾಯ ಮಾಡಿದ್ದೇನೆ : ಸುಮಲತಾ
Team Udayavani, Jul 12, 2021, 5:54 PM IST
ಬೆಂಗಳೂರು : ಸಚಿವರ ಭೇಟಿ ವೇಳೆ ಹಲವಾರು ವಿಚಾರಗಳ ಬಗ್ಗೆ ಚರ್ಚಿಸಿದ್ದೇನೆ. ಗಣಿ ಸಚಿವರು ಅಧಿಕಾರ ಸ್ವೀಕರಿಸಿದ ಮೊದಲ ವಾರದಲ್ಲೇ ಅಕ್ರಮ ಗಣಿಗಾರಿಕೆ ತಡೆಗೆ ಸೂಚಿಸಿದ್ದರು. ಅಕ್ರಮ ತಡಗೆ ಟಾಸ್ಕ್ ಫೋರ್ಸ್ ನ್ನ ಸಹ ರಚಿಸಿದ್ದರು. ನೂರು ಕೋಟಿ ದಂಡವನ್ನ ವಿಧಿಸಿದ್ದರು. ಶ್ರೀರಂಗಪಟ್ಟಣಕ್ಕೆ ಭೇಟಿ ಕೊಟ್ಟಾಗ ಏನೆಲ್ಲಾ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದನ್ನ ವಿವರಿಸಿದ್ದೇನೆ ಎಂದು ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿಯಾದ ಬಳಿಕ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿದ್ದಾರೆ.
ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮದ ಕುರಿತೂ ಹೇಳಿದ್ದೇನೆ. ಯಾವುದೇ ರೀತಿಯಲ್ಲಿ ಅಕ್ರಮಕ್ಕೆ ಅವಕಾಶ ಕೊಡಬಾರದು ಅಂತಾ ಸಚಿವರಿಗೆ ಹೇಳಿದ್ದೇನೆ. ಸರ್ಕಾರಕ್ಕೆ ಸರಿಯಾಗಿ ರಾಜಧನ ನೀಡದೆ ನಷ್ಟ ಮಾಡುತ್ತಿದ್ದಾರೆ. ಅದನ್ನ ವಸೂಲಿ ಮಾಡಿ ಕಠಿಣ ಕ್ರಮಕ್ಕೆ ಒತ್ತಾಯ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು.
ಬೇಬಿ ಬೆಟ್ಟಕ್ಕೂ ಭೇಟಿ ನೀಡುತ್ತೇನೆ ಅಂತಾ ಸಚಿವರು ಹೇಳಿದ್ದಾರೆ. ನಾನು ಕೆ ಆರ್ ಎಸ್ ಜಲಾಶಯ ವೀಕ್ಷಣೆಗೆ ತೆರಳಲಿದ್ದೇನೆ. ಜನರಿಗಿಂತ, ರೈತರಿಗಿಂತ ಯಾರೂ ದೊಡ್ಡವರಲ್ಲಾ. ಎರಡು ದಿನಗಳ ಕಾಲ ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತೇನೆ. ಅದನ್ನ ನೀವೆ ಪ್ರತ್ಯಕ್ಷವಾಗಿ ನೋಡುತ್ತೀರಿ. ಬೇಬಿ ಬೆಟ್ಟಕ್ಕೆ ಹೋಗಿ ನೋಡಿ ನಿಮಗೆ ಗೊತ್ತಾಗಲಿದೆ. ಅಲ್ಲಿ ಏನು ನಡೆಯುತ್ತಿದೆ ಎಂಬುದು ನಿಮಗೆ ಗೊತ್ತಾಗಲಿದೆ ಎಂದರು.
ಕೆ ಆರ್ಎಸ್ ಅಧಿಕಾರಿಗಳ ಜೊತೆ ಏಪ್ರಿಲ್ ನಲ್ಲೇ ಸಭೆ ನಿಗದಿಯಾಗಿತ್ತು. ಕೊರೊನಾ ಕಾರಣ ಲಾಕ್ ಡೌನ್ ನಿಂದ ಅದನ್ನ ಮುಂದೂಡಲಾಗಿತ್ತು. ಈಗ ಅದು ಮತ್ತೆ ಸಭೆ ನಿಗದಿಯಾಗಿದೆ. ಜುಲೈ 14 ರಂದು ಸಭೆ ನಡೆಯಲಿದೆ. ಕೆ ಆರ್ ಎಸ್ ಸುರಕ್ಷಿತೆ, ಏನು ಕ್ರಮಕೈಗೊಳ್ಳಲಾಗುತ್ತಿದೆ, ನಿರ್ವಹಣೆ ಬಗ್ಗೆ ಚರ್ಚೆ ಮಾಡಲಾಗುತ್ತೆ.
ತಾಂತ್ರಿಕ ಸಮಿತಿ ಬೇರೆನೇ ಇದೆ. ಕಾವೇರಿ ನಿಗಮ ಅಲ್ಲಿ ನಿರ್ವಹಣೆ ಮಾಡುತ್ತದೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಡೆಯುತ್ತಿದೆಯೋ ಇಲ್ಲವೋ ಎಂಬುದು ನಿಮಗೆ ಗೊತ್ತಾಗಲಿದೆ. ಸರ್ಕಾರ ಒಂದು ಕಡೆ ಇರಲಿ, ನಾನು ಒಂದು ಕಡೆ ಇರುತ್ತೇನೆ. ಪ್ರತಿಪಕ್ಷಗಳು ಒಂದು ಕಡೆ ಇರಲಿ. ಮಧ್ಯಮಗಳ ನೀವು ಇದ್ದೀರಾ ನಾನು ನಿಮಗೆ ಒಂದು ಸವಾಲ್ ಹಾಕುತ್ತೇನೆ ಅಲ್ಲಿ ನೀವೆ ಹೋಗಿ ಇನ್ವೆಸ್ಟಿಕೇಷನ್ ಮಾಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.