ನಾನು ರಾಜೀನಾಮೆ ನೀಡಿ ಚಿರತೆ ಸೆರೆಯಾಗುವುದಾದರೆ ಈಗಲೇ ರಾಜೀನಾಮೆ ನೀಡುತ್ತೇನೆ: ಸಚಿವ ಕತ್ತಿ

ಮುರುಘಾ ಶ್ರೀಗಳ ವಿರುದ್ಧ ಆರೋಪ ಮಠದೊಳಗಿನ ಸಂಘರ್ಷದಿಂದ ಆದದ್ದು

Team Udayavani, Aug 29, 2022, 10:03 AM IST

1-umesh-katti

ವಿಜಯಪುರ: ಬೆಳಗಾವಿ ಪಟ್ಟಣದಲ್ಲಿ ಪತ್ತೆಯಾಗಿರುವ ಚಿರತೆಯನ್ನು ಸೆರೆ ಹಿಡಿಯಲಾಗದ ಕಾರಣಕ್ಕೆ ವಿರೋಧಿಗಳು ನನ್ನ ರಾಜೀನಾಮೆ ಕೇಳುತ್ತಾರೆ. ನಾನು ರಾಜೀನಾಮೆ ನೀಡಿದರೆ ಚಿರತೆ ಸೆರೆ ಆಗುತ್ತದೆ ಎಂದಾದರೆ ಈಗಲೇ ರಾಜಿನಾಮೆ ನೀಡುತ್ತೇನೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿರತೆ ಸೆರೆ ಹಿಡಿಯಲು‌ ಉತ್ತರ ಕರ್ನಾಟಕ ‌ಭಾಗದ ಸಿಬ್ಬಂದಿಯನ್ನು ಹಾಕಿದ್ದೇವೆ. ಪಳಗಿದ ಆನೆಗಳನ್ನು‌ ತಂದಿದ್ದೇವೆ, ಆದರೂ ಚಿರತೆ ಸೆರೆ ಸಾಧ್ಯವಾಗಿಲ್ಲ. ಎರಡು ದಿನಗಳಿಂದ ಚಿರತೆ ಬೆಳಗಾವಿ ಪಟ್ಟಣದಲ್ಲಿ ಎಲ್ಲೂ ಕಂಡು ಬಂದಿಲ್ಲ. ಬೆಟ್ಟಕ್ಕೆ ಹೋಗಿರುವ ಸಾಧ್ಯತೆ ಇದೆ. ಸುದೈವಶಾತ್ ಈ ವರೆಗೆ ಯಾರಿಗೂ ಅಪಾಯ ಮಾಡಿಲ್ಲ ಎಂಬುದೇ ಸಮಾಧಾನದ ಸಂಗತಿ ಎಂದರು.

ಚಿರತೆ ಗೋಲ್ಫ್ ಕೋರ್ಟ್ ಸುತ್ತಮುತ್ತ ತಿರುಗಾಡುತ್ತಿದೆ ಎನ್ನಲಾಗಿದೆ. ಆದರೆ ಮೂರು ದಿನಗಳಿಂದ ಚಿರತೆ ಕಂಡು ಬಂದಿಲ್ಲ. ನಿಮಗೆ ಕಂಡರೆ ನಿಮ್ಮನ್ನೂ ಚಿರತೆ ಹಿಡಿಯಲು ಹಚ್ಚೋಣ ಎಂದು ಪತ್ರಕರ್ತರನ್ನು ಕಿಚಾಯಿಸಿದರು.

ಮುರುಘಾ ಶ್ರೀಗಳ ವಿರುದ್ಧ ಆರೋಪ ಮಠದೊಳಗಿನ ಸಂಘರ್ಷದಿಂದ ಆದದ್ದು

ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಚಿತ್ರದುರ್ಗ ಮುರುಘಾ ಶ್ರೀಗಳ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಕುರಿತು ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ನನಗೆ ನಿಖರ ಮಾಹಿತಿ ಇಲ್ಲ. ಆದರೆ ಶ್ರೀಗಳು ಹಾಗೂ ಮಾಜಿ ಶಾಸಕ ಬಸವರಾಜ ಮಧ್ಯದ ಆಂತರಿಕ ಸಂಘರ್ಷದ ಪ್ರತಿಷ್ಠೆ, ದ್ವೇಷ ಇಲ್ಲಿಗೆ ಬಂದು ತಲುಪಿದೆ ಎಂದರು.

ಇದನ್ನೂ ಓದಿ:ಮುರುಘಾ ಶರಣರ ವಿರುದ್ಧದ ದೂರಿನ ವಿಚಾರಣೆ ಆರಂಭ

ಸಂತ್ರಸ್ಥರೆನ್ನಲಾದ ಅಪ್ರಾಪ್ತ ವಿದ್ಯಾರ್ಥಿನಿಯರು ಬಾಲಕಿಯರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ. ನ್ಯಾಯಾಲಯ ಏನು ತೀರ್ಮಾನ ಮಾಡುತ್ತದೆ ಎಂದು ನೋಡೋಣ. ಈ ಬಗ್ಗೆ ನನ್ನಲ್ಲಿ ಹೆಚ್ಚಿನ ಮಾಹಿತಿ ಇಲ್ಲ ಎಂದರು.

ಸ್ವಾಮೀಜಿ ವಿರುದ್ಧ ಆರೋಪ ಮಾಡಿದ್ದು ತಪ್ಪು, ರಾಜ್ಯದಲ್ಲಿ ನೈತಿಕ‌ ಮೌಲ್ಯಗಳೊಂದಿಗೆ ಸಮಾಜ ತಿದ್ದಲು ಒಂದಿಬ್ಬರು ಸ್ವಾಮೀಜಿಗಳು ಉಳಿದುಕೊಂಡಿದ್ದಾರೆ. ಅವರ ಪ್ರಯತ್ನಗಳಿಗೆ ಇಂತಹ ಸಲ್ಲದ ಆರೋಪ ಮಾಡಿ ತೊಂದರೆಗೆ ಸಿಲುಕಿಸುವ ಕೆಲಸ ಆಗ ಬಾರದು. ಇದು ಸಮಾಜವನ್ನು ಬೇರೆ ದಿಕ್ಕಿನಲ್ಲಿ ಒಯ್ಯುವ ಕೆಲಸವಷ್ಟೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.