ಅವಕಾಶವಿದ್ದರೆ ರಾಜ್ಯದಲ್ಲಿ ನಾನೇ ಮೊದಲು ಕೋವಿಡ್ ಲಸಿಕೆ ಪಡೆಯುವೆ: ಡಾ.ಕೆ. ಸುಧಾಕರ್
Team Udayavani, Jan 10, 2021, 1:07 PM IST
ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಅವಕಾಶವಿದ್ದರೆ ರಾಜ್ಯದಲ್ಲಿ ಕೋವಿಡ್ ಲಸಿಕೆಯನ್ನು ಮೊದಲು ನಾನೇ ಪಡೆಯುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನಗರದಲ್ಲಿರುವ ರಾಜ್ಯಮಟ್ಟದ ಲಸಿಕೆ ಸಂಗ್ರಹ ಕೇಂದ್ರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸೋಮವಾರ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ. ಅದರಲ್ಲಿ ಯಾರಿಗೆ ಹೇಗೆ ಯಾವಾಗ ಲಸಿಕೆ ನೀಡಬೇಕು ಎಂಬ ಅಂಶವನ್ನು ತಿಳಿಸಲಾಗಿರುತ್ತದೆ. ಜನಪ್ರತಿನಿಧಿಗಳು ಪಡೆಯಬಹುದು ಎಂಬ ಅವಕಾಶವಿದ್ದರೆ ನಾನೇ ಮೊದಲ ಲಸಿಕೆ ಪಡೆದು ಆರೋಗ್ಯ ಕಾರ್ಯಕರ್ತರ, ಜನಸಾಮಾನ್ಯರ ಆತ್ಮವಿಶ್ವಾಸ ಹೆಚ್ಚಿಸುತ್ತೇನೆ. ಲಸಿಕೆ ಕುರಿತು ಯಾವುದೇ ಅನುಮಾನವಿಲ್ಲ, ಯಾವುದೇ ಆತಂಕವೂ ಇಲ್ಲ ಎಂದರು.
ಇದನ್ನೂ ಓದಿ:ಏಳು ರಾಜ್ಯಗಳಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ: ಶನಿವಾರ 1200 ಕ್ಕೂ ಹೆಚ್ಚು ಹಕ್ಕಿಗಳ ಸಾವು!
ಮೊದಲ ಹಂತದಲ್ಲಿ ರಾಜ್ಯದ ಪಾಲಿಗೆ ಸಿಗಲಿರುವ ಕೊರೊನಾ ಲಸಿಕೆಯನ್ನು ಸಂಗ್ರಹಿಸಲು ನಗರದ ಆನಂದ್ ರಾವ್ ವೃತ್ತದ ಆರೋಗ್ಯ ಇಲಾಖೆ ಹಳೇ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.
ಬೆಳಗಾವಿ ಹೊರತು ಪಡಿಸಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ವಿತರಣೆಯಾಗುವ 11 ಲಕ್ಷ ಡೋಸ್ ಲಸಿಕೆಯ ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ ಬೃಹತ್ ವಾಕ್ ಇನ್ ಕೂಲರ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೇ 24 ಲಕ್ಷ ಸಿರಿಂಜ್ ಗಳನ್ನು ಸಂಗ್ರಹಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.