Congress; ಬಂಜಾರ ಮತ ಕೇಳಲು ಹೋದರೆ ಕಲ್ಲಲ್ಲಿ ಹೊಡೀತಾರೆ: ಮುಖಂಡರಿಂದ ಆಕ್ರೋಶ


Team Udayavani, Apr 5, 2024, 11:27 PM IST

Congress; ಬಂಜಾರ ಮತ ಕೇಳಲು ಹೋದರೆ ಕಲ್ಲಲ್ಲಿ ಹೊಡೀತಾರೆ: ಮುಖಂಡರಿಂದ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ ಸರಕಾರದಲ್ಲಿ 1972ರ ಬಳಿಕ ಇದೇ ಮೊದಲ ಬಾರಿಗೆ ಬಂಜಾರ ಸಮುದಾಯಕ್ಕೆ ಸಚಿವ ಸ್ಥಾನ ನೀಡಿಲ್ಲ. ಜತೆಗೆ ಈ ಸಲದ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಕೂಡ ನೀಡಿಲ್ಲ. ಇಂಥ ಪರಿಸ್ಥಿತಿಯಲ್ಲಿ ಸಮುದಾಯದ ಮತ ಕೇಳಲು ಹೋದರೆ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಸಮಾಜದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ 2ನೇ ಹಂತದಲ್ಲಿ ನಡೆಯುವ ಲೋಕಸಭಾ ಕ್ಷೇತ್ರಗಳ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲೇ ಬಂಜಾರ ಸಮುದಾಯದ ಮುಖಂಡರು ಅಸಮಾಧಾನ ಹೊರ ಹಾಕಿದರು.

ಚುನಾವಣೆಯಲ್ಲಿ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಯಾವುದೇ ಸಮುದಾಯವನ್ನು ನಿರ್ಲಕ್ಷಿಸಬೇಡಿ. ಸಣ್ಣಪುಟ್ಟ ಜಾತಿ, ಜನಾಂಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕೆಂದು ಸಿಎಂ ಸಭೆಯಲ್ಲಿ ಹೇಳುತ್ತಿದ್ದಂತೆ ಎದ್ದುನಿಂತ ವಿಧಾನ ಪರಿಷತ್ತಿನ ಸದಸ್ಯ ಹಾಗೂ ಬಂಜಾರ ಸಮುದಾಯದ ಮುಖಂಡ ಪ್ರಕಾಶ್‌ ರಾಥೋಡ್‌, ನಮ್ಮ ಸಮಾಜ ಬಹಳ ನೊಂದಿದೆ. 5 ದಶಕಗಳ ಬಳಿಕ ಇದೇ ಮೊದಲ ಬಾರಿಗೆ ಸರಕಾರದಲ್ಲಿ ಸಚಿವ ಸ್ಥಾನ ನೀಡಿಲ್ಲ. ಲೋಕಸಭೆಗೆ ಟಿಕೆಟ್‌ ಕೂಡ ನೀಡಿಲ್ಲ. ಪರಿಸ್ಥಿತಿ ಹೀಗಿರುವಾಗ ಮತ ಕೇಳಲು ಹೋದರೆ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ತತ್‌ಕ್ಷಣವೇ ಮಧ್ಯಪ್ರವೇಶಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಈ ರೀತಿ ಮಾತನಾಡಬಾರದು ಎಂದು ಹೇಳಿದ ಬಳಿಕವೂ ತಮ್ಮ ಮಾತು ಮುಂದುವರಿಸಿದ ರಾಥೋಡ್‌ ಅವರು ನಾವೇನು ಮಾಧ್ಯಮಗಳ ಮುಂದೆ ಹೋಗಿಲ್ಲ, ಪಕ್ಷದ ವೇದಿಕೆಯಲ್ಲೇ ಮಾತನಾಡುತ್ತಿದ್ದೇನೆ. ನಮ್ಮ ಸಮಾಜದ ನೋವನ್ನು ಸಿಎಂ ಸಿದ್ದರಾಮಯ್ಯ, ಡಾ| ಜಿ.ಪರಮೇಶ್ವರ್‌, ಶಿವರಾಜ್‌ ತಂಗಡಗಿ ಮಾತ್ರವಲ್ಲದೆ ನಿಮಗೂ ಹೇಳಿಕೊಂಡಿದ್ದೇವೆ. ಸಮಾಜದ ಮುಖಂಡರ ಸಭೆ ಕರೆಯಿರಿ ಎಂದು ಹಲವು ಸಲ ಹೇಳಿದ್ದರೂ ಗಣನೆಗೆ ತೆಗೆದುಕೊಳ್ಳದೆ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.

ಇದಕ್ಕೆ ಪೂರಕವಾಗಿ ಪ್ರಕಾಶ್‌ ರಾಥೋಡ್‌ ಅವರನ್ನು ಬೆಂಬಲಿಸಿ ಮಾತನಾಡಿದ ಮಾಜಿ ಸಚಿವ ಬಿ.ಟಿ.ಪರಮೇಶ್ವರ್‌ ನಾಯಕ್‌, ಸಮಾಜಕ್ಕೆ ಮಂತ್ರಿ ಸ್ಥಾನ, ಲೋಕಸಭೆ ಟಿಕೆಟ್‌ ಕೊಟ್ಟಿಲ್ಲ, ಈಗ ಪದಾಧಿಕಾರಿಗಳ ನೇಮಕದಲ್ಲೂ ನಿರ್ಲಕ್ಷಿಸಲಾಗಿದೆ. ಇದನ್ನು ಇಲ್ಲಿ ಹೇಳಿಕೊಳ್ಳದೆ ಯಾರ ಮುಂದೆ ಹೇಳಿಕೊಳ್ಳಬೇಕಿತ್ತು. ನೀವು ಕೂಡ ನಮಗೆ ಸಮಯ ಕೊಡುತ್ತಿಲ್ಲ. ಪಕ್ಷಕ್ಕಾಗಿಯೇ ದುಡಿಯುತ್ತಿದ್ದರೂ ಆಗಿರುವ ಲೋಪಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿಲ್ಲ ಎಂದು ನೇರವಾಗಿಯೇ ಹೇಳಿದರೆಂದು ಗೊತ್ತಾಗಿದೆ. ಬಳಿಕ ಮನೋಹರ ಐನಾಪುರ, ರೇವೂನಾಯಕ್‌ ಬೆಳಮಗಿ ಮತ್ತಿತರರು ಮಾತನಾಡಲು ಪ್ರಯತ್ನಿಸಿದರೂ ಅವಕಾಶ ಕೊಡಲಿಲ್ಲ.

ಉಪ ಸಭಾದ್ಯಕ್ಷ,
ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಟ್ಟಿಲ್ವಾ?
ಈ ಹಂತದಲ್ಲಿ ಮಧ್ಯ ಪ್ರವೇಶಿಸಿದ ಸಿಎಂ, ಈ ವೇದಿಕೆಯಲ್ಲಿ ಮಾತನಾಡುವುದು ಸರಿಯಲ್ಲ. ಆ ಮೇಲೆ ಬನ್ನಿ ಮಾತನಾಡೋಣ ಎಂದು ಹೇಳಿದ್ದಾರೆ. ಜತೆಗೆ ಡಿಸಿಎಂ ಕೂಡ ಮಾತನಾಡಿ, ಭೀಮಾ ನಾಯಕ್‌ಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡಿಲ್ಲವಾ?, ರುದ್ರಪ್ಪ ಲಮಾಣಿಗೆ ಡೆಪ್ಯುಟಿ ಸ್ಪೀಕರ್‌ ಹುದ್ದೆ ಕೊಟ್ಟಿಲ್ಲವೇ ಎಂದು ಪ್ರಶ್ನಿಸಿ ಅತೃಪ್ತರನ್ನು ಸಮಾಧಾನಿಸಿದರು ಎನ್ನಲಾಗಿದೆ.

ಟಾಪ್ ನ್ಯೂಸ್

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

court

Fact check ಘಟಕ ಸ್ಥಾಪಿಸುವ ಐಟಿ ನಿಯಮ ರದ್ದು: ಹೈಕೋರ್ಟ್‌ ಆದೇಶ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.