![1-crick](https://www.udayavani.com/wp-content/uploads/2024/07/1-crick-415x233.jpg)
ತಾಕತ್ತಿದ್ದರೆ ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಲಿ: ಅಶೋಕ್
Team Udayavani, Jun 19, 2023, 8:10 AM IST
![ತಾಕತ್ತಿದ್ದರೆ ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಲಿ: ಅಶೋಕ್](https://www.udayavani.com/wp-content/uploads/2023/06/ashok-a-620x349.jpg)
ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ನಡೆದಿರುವ ಒಪ್ಪಂದದ ಬಗ್ಗೆ ಸಿಎಂ ಸಿದ್ದರಾಮಯ್ಯ ಧೈರ್ಯವಾಗಿ ಮಾತನಾಡಲಿ ನೋಡೋಣ ಎಂದು ಮಾಜಿ ಸಚಿವ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಅಧಿಕಾರದಲ್ಲಿರುವುದು ಎರಡು ವರ್ಷ ಮಾತ್ರ ಎಂದು ಧೈರ್ಯವಿದ್ದರೆ ಸಿದ್ದರಾಮಯ್ಯ ಹೇಳಲಿ ನೋಡೋಣ. ಆದರೆ ಅವರು ಯಾವುದೇ ಕಾರಣಕ್ಕೂ ಆ ಮಾತು ಹೇಳುವುದಿಲ್ಲ. ಅವರೊಬ್ಬ ಚಾಣಾಕ್ಷ ರಾಜಕಾರಣಿ. ರಾಜಕಾರಣದಲ್ಲಿ ದೇವೇಗೌಡರ ಬಗ್ಗೆ ಎಲ್ಲರೂ ಹೆದರುತ್ತಾರೆ. ಆದರೆ ಸಿದ್ದರಾಮಯ್ಯ ದೇವೇಗೌಡರಿಗೆ ಆಟ ಆಡಿಸಿದ್ದರು. ಸಿಎಂ ಸ್ಥಾನವನ್ನು ಅವರು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ. ಭವಿಷ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ಬೀದಿ ರಂಪಾಟ ನಿಶ್ಚಿತ ಎಂದು ಭವಿಷ್ಯ ನುಡಿದರು.
ಮುಖ್ಯಮಂತ್ರಿ ಸ್ಥಾನದ ವಿಚಾರಕ್ಕೆ ಸಂಬಂಧಪಟ್ಟಂತೆ ಡಿ.ಕೆ.ಶಿವಕುಮಾರ್ ತಿರುಕನ ಕನಸು ಕಾಣುತ್ತಿದ್ದಾರೆ. ಮಹದೇವಪ್ಪ, ಕೃಷ್ಣ ಭೈರೇಗೌಡ, ಜಮೀರ್ ಅಹ್ಮದ್ ಖಾನ್ ಎಲ್ಲರೂ ಸಿದ್ದರಾಮಯ್ಯ ಪರವೇ ಇದ್ದಾರೆ. ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರಕ್ಕೆ ಬಂದಿದೆಯೋ ಅಲ್ಲೆಲ್ಲ ಗೊಂದಲ ಸೃಷ್ಟಿಯಾಗಿದೆ. ಆದರೂ ಸಿದ್ದರಾಮಯ್ಯನವರಿಗೆ ಧೈರ್ಯವಿದ್ದರೆ ನಾನೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಎಂದು ಹೇಳಲಿ ಎಂದರು.
ಸಿದ್ದರಾಮಯ್ಯ ಅವರನ್ನು ಡಿ.ಕೆ.ಶಿವಕುಮಾರ್ ಓವರ್ಟೇಕ್ ಮಾಡುತ್ತಿದ್ದಾರೆ. ಶಿವಕುಮಾರ್ ವರ್ತನೆಯಿಂದ ಬೇಸತ್ತು ಸಿದ್ದರಾಮಯ್ಯನವರ ಕೋಪ ಯಾವಾಗ ಸ್ಫೋಟಗೊಳ್ಳುತ್ತದೋ ಗೊತ್ತಿಲ್ಲ. ಹನಿಮೂನ್ ಅವಧಿ ಮುಗಿದ ಕೂಡಲೇ ಒಡಕು ಹೊರಬರುತ್ತದೆ. ಈಗ ಸಿದ್ದರಾಮಯ್ಯ ಬಣದವರು ಮಾತನಾಡಿದಂತೆ, ಮುಂದೆ ಶಿವಕುಮಾರ್ ಬಣದವರೂ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಾರೆ. ಇದರಿಂದ ಭವಿಷ್ಯದಲ್ಲಿ ಸರ್ಕಾರದ ಕತೆ ಏನಾಗುತ್ತದೆಯೋ ಗೊತ್ತಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಈ ಸರ್ಕಾರದ ಸ್ಥಿತಿ ಏನು ಬೇಕಾದರೂ ಆಗಬಹುದು ಎಂದು ಭವಿಷ್ಯ ನುಡಿದರು.
ಡಿ.ಕೆ.ಸುರೇಶ್ ಅವರ ರಾಜಕೀಯ ವೈರಾಗ್ಯದ ಮಾತುಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸುರೇಶ್ ಅವರ ಬಗ್ಗೆ ನನಗೆ ಸಿಂಪಥಿ ಇದೆ. ಈಗಾಗಲೇ ರಾಜಸ್ಥಾನದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅವರು ನೋಡಿದ್ದಾರೆ. ಮುಂದೆ ನಮ್ಮಣ್ಣನಿಗೆ ಅದೇ ಪರಿಸ್ಥಿತಿ ಬರಬಹುದೆಂಬ ಬೇಸರಕ್ಕೆ ಈ ಮಾತುಗಳನ್ನು ಹೇಳಿರಬಹುದು ಎಂದು ತಿಳಿಸಿದರು.
ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರಿಗೆ ಈ ಮಾತನ್ನು ಹೇಳುವ ನೈತಿಕತೆ ಇಲ್ಲ. ಇಷ್ಟು ದೊಡ್ಡ ಯೋಜನೆಯ ಬಗ್ಗೆ ತಯಾರಿಯೇ ಇಲ್ಲದೇ ಘೋಷಣೆ ಮಾಡಿದ್ದಾರೆ. ಕೇಂದ್ರದ ವಿರುದ್ಧ ಮಾತನಾಡುವುದಕ್ಕೆ ಮುನ್ನ ನೀವು 10 ಕೆಜಿ ಅಕ್ಕಿ ಕೊಡುತ್ತೋರೋ, 5 ಕೆಜಿ ಅಕ್ಕಿ ಕೊಡುತ್ತೀರೋ ಎಂಬುದನ್ನು ಮೊದಲು ಹೇಳಿ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
![1-crick](https://www.udayavani.com/wp-content/uploads/2024/07/1-crick-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.