Minister Krishna Byre Gowda: ತೆರಿಗೆ ನ್ಯಾಯ ಕೇಳಿದರೆ ಆತಂಕವಾದಿಗಳಾಗಿ ಬಿಂಬಿಸುತ್ತಾರೆ

 ರಾಜ್ಯಕ್ಕೆ ಬರುತ್ತಿದ್ದ ಶೇ. 23 ತೆರಿಗೆ ಅನುದಾನ ಕಡಿತ  ದೇಶದ ಆರ್ಥಿಕತೆಯಲ್ಲಿ ಕರ್ನಾಟಕದ ಕೊಡುಗೆ ಶೇ.35: ಕೃಷ್ಣಬೈರೇಗೌಡ

Team Udayavani, Oct 29, 2024, 6:45 AM IST

Minister Krishna Byre Gowda: ತೆರಿಗೆ ನ್ಯಾಯ ಕೇಳಿದರೆ ಆತಂಕವಾದಿಗಳಾಗಿ ಬಿಂಬಿಸುತ್ತಾರೆ

ಬೆಂಗಳೂರು: ತೆರಿಗೆ ಹಾಕುವ ಹಕ್ಕು ಮತ್ತು ತೆರಿಗೆ ಹಂಚಿಕೆಗಳೇ ಪ್ರಜಾಪ್ರಭುತ್ವ ಉಗಮಕ್ಕೆ ಕಾರಣ. ಆದರೆ, ಅನ್ಯಾಯವಾಗುತ್ತಿದೆ ಎಂದು ನ್ಯಾಯ ಕೇಳಿದವರನ್ನು ಆತಂಕವಾದಿಗಳನ್ನಾಗಿ ಪ್ರತಿಬಿಂಬಿಸುತ್ತಿರುವುದು ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ. ಬ್ರಿಟಿಷರು ಇದೇ ಕೆಲಸ ಮಾಡುತ್ತಿದ್ದರು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.

ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿ ನಲ್ಲಿ ರವಿವಾರ ಹಮ್ಮಿಕೊಂಡಿದ್ದ ಕಾರ್ಯ ಕ್ರಮದಲ್ಲಿ ಕಾನೆRàವ್‌ ಮಾಧ್ಯಮ ಮತ್ತು ಪ್ರಕಾಶನವು ಹೊರ ತಂದಿರುವ ದಕ್ಷಿಣ ವರ್ಸಸ್‌ ಉತ್ತರ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಾವು ಸ್ವಾತಂತ್ರ್ಯ ಹೋರಾಟಗಾರರು ಎಂದು ಅನುಸರಣೆ ಮಾಡುವವರನ್ನೆಲ್ಲ ಬ್ರಿಟಿಷರು ಭಯೋತ್ಪಾದಕರು, ರಾಜಪ್ರಭುತ್ವ ವಿರೋಧಿ ಗಳು ಎಂದು ಕರೆದಿದ್ದರು. ಅದೇ ಮಾದರಿಯಲ್ಲಿ ಇವತ್ತು ನ್ಯಾಯ ಕೇಳುವುದೇ ಒಂದು ಅಪರಾಧ ಆಗುವಂತಹ ಕಾಲ ಬಂದಿರುವುದು ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ ಎಂಬುದನ್ನು ನಾವೆಲ್ಲರೂ ಗಮನಿಸಬೇಕು ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಡುವಿನ ತಿಕ್ಕಾಟ ಇವತ್ತಿನದ್ದಲ್ಲ, ಆರಂಭದಿಂದಲೂ ಇದೆ. ಆದರೆ ತಿಕ್ಕಾಟದ ನಡುವೆಯೂ ಆವತ್ತಿನ ಸರಕಾರಗಳು ಸಮಸ್ಯೆಗಳನ್ನು ಒಪ್ಪಿಕೊಳ್ಳುತ್ತಿದ್ದವು. ಅದನ್ನು ಪರಿಹರಿಸುವ ವ್ಯವಧಾನವಿತ್ತು. ಆದರೆ ಈಗ ನಾವು ನಮಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದರೆ ದೇಶದ್ರೋಹಿಗಳಾಗುತ್ತೇವೆ.

ದೇಶದಲ್ಲಿ ಕಳೆದ 40 ವರ್ಷಗಳಿಂದ ವಿಕೇಂದ್ರೀಕರಣದ ಕಡೆಗೆ ಹೆಜ್ಜೆಯಿಟ್ಟುಕೊಂಡು ಬಂದಿದ್ದೇವೆ. ಒಕ್ಕೂಟ ವ್ಯವಸ್ಥೆ ಸುಭದ್ರವಾಗಿರಬೇಕಾದರೆ ಯಾವುದೇ ಸಮಸ್ಯೆ ಬಂದಾಗ ಕುಳಿತು ಮಾತ ನಾಡಿ ಬಗೆಹರಿಸಕೊಳ್ಳಬೇಕು. ತೆರಿಗೆ ಹಾಕುವ ಹಕ್ಕು ಮತ್ತು ತೆರಿಗೆ ಹಂಚಿಕೆಗಳೇ ಪ್ರಜಾ ಪ್ರಭುತ್ವ ಉಗಮ ಆಗಲು ಕಾರಣ. ನಮಗೆ ಬರುತ್ತಿದ್ದ ಶೇ. 23 ಅನುದಾನವನ್ನು ಕಡಿತ ಗೊಳಿಸಿ ಬೇರೆ ರಾಜ್ಯಗಳಿಗೆ ಕೊಟ್ಟಿದ್ದಾರೆ. ದೇಶದ ಆರ್ಥಿಕತೆಯಲ್ಲಿ ಶೇ. 35ರಷ್ಟು ನಮ್ಮ ರಾಜ್ಯದ ಕೊಡುಗೆ ಇದೆ. ಆದರೆ, ಇವತ್ತು ಪಾರ್ಲಿಮೆಂಟ್‌ನಲ್ಲಿ ನಮ್ಮ ಪಾಲಿರುವುದು ಶೇ. 20 ಮಾತ್ರ ಎಂದು ತಿಳಿಸಿದರು.

ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು
ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರ ಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಮಾತ ನಾಡಿ, ಕೇಂದ್ರ ಸರಕಾರದಲ್ಲಿ ಲೋಕಸಭಾ ಸೀಟು ಗಳನ್ನು ಹೆಚ್ಚಿಸಬೇಕು ಎಂದು ಪ್ರಧಾನಿಗಳು ಹೇಳಿಕೆ ನೀಡಿದ್ದರು. ಜನಸಂಖ್ಯೆ ಆಧಾರದ ಮೇಲೆ ಆದರೂ ಸಹಜವಾಗಿ ರಾಜಕೀಯ, ಸಾಮಾ ಜಿಕ, ಆರ್ಥಿಕವಾಗಿ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ವಾಗುತ್ತದೆ. ಇದರ ವಿರುದ್ಧ ಧ್ವನಿ ಎತ್ತಬೇಕು. ಒಕ್ಕೂಟ ವ್ಯವಸ್ಥೆಯಲ್ಲಿ ಉತ್ತರ ಭಾರತೀಯರಿಗೆ ಕೊಡುವುದರಲ್ಲಿ ನಮಗೇನೂ ತಕರಾರಿಲ್ಲ. ಆದರೆ ನ್ಯಾಯಯುತವಾಗಿ, ಸಮಾನತೆಯಿಂದ ಕೊಡಬೇಕು ಎಂದರು.

ಪ್ರಾದೇಶಿಕ ವೈವಿಧ್ಯತೆ ನಿರ್ನಾಮಕ್ಕೆ ಯತ್ನ
ಬಹುತ್ವವವೇ ನಮ್ಮ ಮೂಲ ಅಸ್ತಿತ್ವ. ಆದರೆ, ಇಂದು ಪ್ರಾದೇಶಿಕ ವೈವಿದ್ಯತೆಯ ಮೇಲೆ ಸಮರೋಪಾದಿಯಲ್ಲಿ ಯುದ್ದ ನಡೆಯುತ್ತಿದೆ. ಇದನ್ನು ನಿರ್ನಾಮ ಮಾಡುವ ಪ್ರಯತ್ನಗಳು ದೇಶದಲ್ಲಿ ನಡೆಯುತ್ತಿದೆ. ಆ ಸಂದರ್ಭದಲ್ಲಿ ನಾವು ನಮ್ಮತನವನ್ನು ಕಳೆದುಕೊಂಡರೆ ಸ್ವಾಭಿಮಾನಿ ಯಾಗಿ ಬದುಕಲು ಸಾಧ್ಯವಿಲ್ಲ. ನಮ್ಮ ಅಕ್ಕ-ಪಕ್ಕದ ರಾಜ್ಯಗಳಲ್ಲಿ ಜಾಗೃತಿಯ ಇತಿಹಾಸ ಪ್ರಬಲ ವಾಗಿದೆ. ಆದರೆ, ನಮ್ಮಲ್ಲಿ ಜಾಗೃತಿ ಕಡಿಮೆಯಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.