ಪ್ರಜ್ವಲ್ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್
ಮುಖ್ಯಮಂತ್ರಿ ನನಗೆ ಕೆಲವು ಸೂಚನೆ ನೀಡಿದ್ದಾರೆ, ಬಹಿರಂಗಪಡಿಸಲ್ಲ
Team Udayavani, May 15, 2024, 10:54 PM IST
ಬೆಂಗಳೂರು: ಪ್ರಜ್ವಲ್ ಎಲ್ಲಿದ್ದಾನೆ ಅಂತ ನಮಗೆ ಗೊತ್ತಿಲ್ಲ. ನಿಮಗೇನಾದರೂ ಮಾಹಿತಿ ಇದೆಯೇ? ಗೊತ್ತಿದ್ದರೆ ಹೇಳಿ, ನಮಗೂ ಸಹಾಯ ಆಗುತ್ತದೆ.ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆ ಬಗ್ಗೆ ಸ್ವತಃ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅವರು ಅಲವತ್ತುಕೊಂಡ ರೀತಿ ಇದು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ಎಲ್ಲಿದ್ದಾನೆ ಎಂಬುದು ಎಸ್ಐಟಿಗೆ ಗೊತ್ತಿದೆ. ನಮಗೆ ಗೊತ್ತಿಲ್ಲ. ನಿಮಗೇನಾದರೂ ಮಾಹಿತಿ ಇದೆಯಾ? ಪ್ರಜ್ವಲ್ ಎಲ್ಲಿದ್ದಾನೆಂದು ನಿಮಗೇನಾದ್ರೂ ಗೊತ್ತಾ? ಗೊತ್ತಿದ್ದರೆ ನೀವೇ ಹೇಳಿ, ನಮಗೂ ಸಹಾಯ ಆಗುತ್ತದೆ ಎಂದರು. ಬುಧವಾರ ನಡೆದ ಸಭೆಯಲ್ಲಿ ಸಿಎಂ ನನಗೆ ಕೆಲವು ಸೂಚನೆ ನೀಡಿದ್ದಾರೆ. ಅವುಗಳನ್ನು ಬಹಿರಂಗಪಡಿಸುವಂತಿಲ್ಲ ಎಂದರು.
ಸತೀಶ್ ಜಾರಕಿಹೊಳಿ ಅವರ ಮನೆಗೆ ಹೋಗಿದ್ದೆ . ಅವರ ಮಗಳು ಚುನಾವಣೆಗೆ ಸ್ಪರ್ಧಿಸಿದ್ದರು. ಅದರ ಬಗ್ಗೆ ಚರ್ಚೆ ಮಾಡಿ ಬಂದಿದ್ದೆ . ಸಮುದಾಯವಾರು ಡಿಸಿಎಂ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ತಿಮಿಂಗಿಲ ಯಾರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಹೀಗೆ ಗೊತ್ತಿದ್ದು ಹೇಳದೆ ಇರುವುದು ತಪ್ಪು ಅಲ್ಲವೇ? ತಿಮಿಂಗಿಲ ಯಾರು ಅಂತ ಹೇಳಿಬಿಡಲಿ, ಅಲ್ಲಿಗೆ ಎಲ್ಲವೂ ಮುಗಿದು ಹೋಗುತ್ತದೆ ಎಂದಷ್ಟೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.