ಅಕ್ರಮ ಆಸ್ತಿ ಗಳಿಕೆ: ಶಾಸಕ ಜಮೀರ್ ಅಹಮದ್ ಎಸಿಬಿ ವಿಚಾರಣೆಗೆ ಹಾಜರು
Team Udayavani, Aug 6, 2022, 10:52 PM IST
ಬೆಂಗಳೂರು: ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಶಾಸಕ ಜಮೀರ್ ಅಹಮದ್ ಖಾನ್ ಅವರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮುಂದೆ ವಿಚಾರಣೆಗೆ ಹಾಜರಾದರು.
ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಈ ಹಿಂದೆ ಸಮನ್ಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಜಮೀರ್ ವಿಚಾರಣೆ ಎದುರಿಸಿದ್ದು, ಆಸ್ತಿಯ ಮೂಲದ ಕುರಿತು ಲಿಖಿತ ರೂಪದಲ್ಲಿ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಇದಕ್ಕೆ ಪೂರಕವಾದ ದಾಖಲೆ ಸಲ್ಲಿಸಲು ಜಮೀರ್ಗೆ ಎಸಿಬಿ ಅಧಿಕಾರಿಗಳು ಕಾಲಾವಕಾಶ ನೀಡಿದ್ದಾರೆ. ಜಮೀರ್ ಕೆಲವು ದಾಖಲೆಗಳನ್ನಷ್ಟೆ ಸಲ್ಲಿಸಿದ್ದು, ತನಿಖೆ ಭಾಗವಾಗಿ ಪ್ರಮುಖ ದಾಖಲೆ ಸಲ್ಲಿಸುವಂತೆ ಎಸಿಬಿ ಸೂಚಿಸಿದೆ ಎಂದು ತಿಳಿದು ಬಂದಿದೆ.
ಡಿಕೆಶಿ, ಜಮೀರ್ ಮಾತ್ರ ಕಾಣಿಸೋದಾ?
ವಿಚಾರಣೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಜಮೀರ್, ರಾಜ್ಯದಲ್ಲಿ ಡಿ.ಕೆ ಶಿವಕುಮಾರ್ ಹಾಗೂ ನಾನು ಮಾತ್ರ ಅವರ ಕಣ್ಣಿಗೆ ಕಾಣಿಸುತ್ತಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಮನ್ಸ್ ಮೂಲಕ ಕೇಳಿದ ಕೆಲ ದಾಖಲೆಗಳನ್ನು ಎಸಿಬಿ ಅಧಿಕಾರಿಗಳಿಗೆ ಒದಗಿಸಿದ್ದೇನೆ. ಇ.ಡಿ. ಅಧಿಕಾರಿಗಳು ಈ ಹಿಂದೆ ಮನೆ ಖರೀದಿ ಹಾಗೂ ಇನ್ನಿತರ ವ್ಯವಹಾರಗಳ ಬಗ್ಗೆ ದಾಖಲೆ ಕೇಳಿದ್ದರು. ಅವರಿಗೆ ಕೊಟ್ಟಿರುವ ದಾಖಲೆಗಳನ್ನೇ ಎಸಿಬಿಗೂ ಕೊಟ್ಟಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ
J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
Panaji: ಮಲ್ಪೆಯ 2 ಮೀನುಗಾರಿಕಾ ಬೋಟ್ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.