“ಆತ್ಮಸಾಕ್ಷಿಯಾಗಿ ನಾನು ನಡೆಯುತ್ತಿರುವ ದಾರಿ ಸರಿಯಾಗಿದೆ’


Team Udayavani, Feb 15, 2017, 3:45 AM IST

cm.jpg

ವಿಧಾನಸಭೆ: “ಒಂದು ಕೋಟಿ ಎಂಟು ಲಕ್ಷ ಕುಟುಂಬಗಳಿಗೆ ಅನ್ನಭಾಗ್ಯ, ಒಂದು ಕೋಟಿ ಎಂಟು ಲಕ್ಷ ಮಕ್ಕಳಿಗೆ ಕ್ಷೀರಭಾಗ್ಯ, ಹತ್ತೂವರೆ ಲಕ್ಷ ಬಡವರಿಗೆ ನೆತ್ತಿ ಮೇಲೆ ಸೂರು ಒದಗಿಸಿರುವ ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಜನಪರ. ನಮ್ಮ ಸಾಧನೆ ನನಗೆ ಸಮಾಧಾನ ತಂದಿದೆ’ ಎಂದು ಸಿದ್ದರಾಮಯ್ಯ ಸರ್ಕಾರದ ಕಾರ್ಯ ವೈಖರಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಸದನದಲ್ಲಿ ಮಂಗಳವಾರ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಅವರು ಉತ್ತರ ನೀಡಿದರು. ಪ್ರತಿಪಕ್ಷ ನಾಯಕ ಜಗದೀಶ್‌ ಶೆಟ್ಟರ್‌ ಅವರು ನಮ್ಮದು ಜಡತ್ವ ಸರ್ಕಾರ, ನಿಷ್ಕ್ರಿಯ ಸರ್ಕಾರ, ಕ್ರಿಯಾಶೀಲವಲ್ಲದ ಸರ್ಕಾರ ಎಂದು ಟೀಕಿಸಿದ್ದಾರೆ. ಆದರೆ, ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಮುನ್ನ ನೀಡಿದ್ದ 165 ಆಶ್ವಾಸನೆಗಳ ಪೈಕಿ 3 ವರ್ಷ 9 ತಿಂಗಳಲ್ಲಿ 125 ಆಶ್ವಾಸನೆಗಳನ್ನು ಈಡೇರಿಸಿದೆ. ನೀರಾವರಿಗೆ 43 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ. ಎಸ್ಸಿ/ಎಸ್ಟಿ ಅಭಿವೃದ್ಧಿಗೆ ಜನಸಂಖ್ಯೆಗೆ ಅನುಗುಣವಾಗಿ 60 ಸಾವಿರ ಕೋಟಿ ರೂ.ಬಿಡುಗಡೆಗೊಳಿಸಿ 44 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ. ನಮ್ಮದು ನಿಷ್ಕ್ರಿಯ ಸರ್ಕಾರವೇ ಎಂದು ಪ್ರಶ್ನಿಸಿದರು.

ಇಲಾಖಾವಾರು ಸಾಧನೆಯ ಅಂಕಿ-ಅಂಶಗಳೊಂದಿಗೆ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ, 1.08
ಕೋಟಿ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ಕೊಟ್ಟು, 1.08 ಲಕ್ಷ ಕೋಟಿ ಮಕ್ಕಳಿಗೆ ಹಾಲು ಮತ್ತು ಮಧ್ಯಾಹ್ನದ ಬಿಸಿಯೂಟ ಕೊಟ್ಟು, ಶಾಲೆಗೆ ಬರುವ ಹೆಣ್ಣು ಮಕ್ಕಳಿಗೆ ಎರಡು ರೂ.ಪ್ರೋತ್ಸಾಹಧನ ಕೊಡುತ್ತಿದ್ದೇವೆ. ಅಪೌಷ್ಠಿಕತೆ
ಮಕ್ಕಳ ಸಂಖ್ಯೆ ಕಡಿಮೆ ಮಾಡಿದ್ದೇವೆ. ಇದು ಸಾಧನೆಯಲ್ಲವಾ? ಎಂದರು.

ಸಾಲಮನ್ನಾ ವಿಚಾರದಲ್ಲಿ ಮುಕ್ತ: ಸಾಲಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರ ಮುಕ್ತವಾಗಿದೆ. ರಾಜ್ಯದಲ್ಲಿ ಸಹಕಾರ ಸಂಘಗಳಿಂದ ರೈತರು ಮಾಡಿರುವ ಸಾಲ 10,500 ಸಾವಿರ ಕೋಟಿ ರೂ. ಆದರೆ, ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವುದು 42 ಸಾವಿರ ಕೋಟಿ ರೂ. ಹೀಗಾಗಿ, ಕೇಂದ್ರ ಸರ್ಕಾರ ಅದರಲ್ಲಿ ಅರ್ಧ ಮೊತ್ತ ಮನ್ನಾ ಮಾಡಿದರೆ ರಾಜ್ಯ ಸರ್ಕಾರ ಅರ್ಧದಷ್ಟು ಮನ್ನಾ ಮಾಡಲಿದೆ. ಈ ಬಗ್ಗೆ ಮತ್ತೂಮ್ಮೆ ಪ್ರಧಾನಿಗೆ ಪತ್ರ ಬರೆಯುವುದಾಗಿ ಪುನರುಚ್ಚರಿಸಿದರು. ರಾಜ್ಯ ಸರ್ಕಾರ ಬರಗಾಲವನ್ನು ಸಮರ್ಪಕವಾಗಿ ನಿಭಾಯಿಸಿದ್ದು, ಬರ ಪರಿಹಾರ ಕಾಮಗಾರಿಗಳಿಗಾಗಿ ಇದುವರೆಗೂ 1,144 ಕೋಟಿ ರೂ.ವೆಚ್ಚ ಮಾಡಲಾಗಿದೆ. ಬೆಳೆ ಪರಿಹಾರವಾಗಿ ಕೇಂದ್ರ ಸರ್ಕಾರ ಕೊಟ್ಟಿರುವ ನೆರವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲು ಹೊಸ ಸಾಫ್ಟ್ವೇರ್‌ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

“ಸರ್ಕಾರದಲ್ಲಿ ದೂರುಗಳೇ ಇಲ್ಲ, ಎಲ್ಲವೂ ಸರಿಯಿದೆ ಎಂದು ನಾನು ಹೇಳುವುದಿಲ್ಲ. ಕೆಲವು ಲೋಪಗಳು ಇರಬಹುದು. ಆದರೂ ಜನರಿಗೆ ಕೊಟ್ಟ ಮಾತಿನಂತೆ ಉತ್ತಮ ಆಡಳಿತ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ’ ಎಂದು
ತಿಳಿಸಿದರು.”ನನ್ನನ್ನು ಆಹಿಂದ ಬ್ರ್ಯಾಂಡ್‌ ಮಾಡಲಾಗಿದೆ. ಆದರೆ, ಸರ್ಕಾರದ ಯೋಜನೆಗಳು ಎಲ್ಲ ವರ್ಗಕ್ಕೂ ತಲುಪುವುದಿಲ್ಲವೇ’ ಎಂದು ಪ್ರಶ್ನಿಸಿ, “ನಮ್ಮ ಸರ್ಕಾರ ಎಲ್ಲ ಸಮುದಾಯದ ಹಿತಾಸಕ್ತಿ ಬಯಸುತ್ತದೆ. ನಮ್ಮ ಸಾಧನೆಗಳೇ ನಮಗೆ ಶ್ರೀರಕ್ಷೆ. ಒಂದು ವರ್ಷದ ನಂತರ ಜನರ ಮುಂದೆ ಹೋಗುತ್ತೇವೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.