HSRP ನೋಂದಣಿ ಫ‌ಲಕ ಅಳವಡಿಕೆ: ಗಡುವು ವಿಸ್ತರಣೆ ಸಾಧ್ಯತೆ


Team Udayavani, Nov 8, 2023, 12:48 AM IST

HSRP ನೋಂದಣಿ ಫ‌ಲಕ ಅಳವಡಿಕೆ: ಗಡುವು ವಿಸ್ತರಣೆ ಸಾಧ್ಯತೆHSRP ನೋಂದಣಿ ಫ‌ಲಕ ಅಳವಡಿಕೆ: ಗಡುವು ವಿಸ್ತರಣೆ ಸಾಧ್ಯತೆ

ಬೆಂಗಳೂರು: ನಿತ್ಯ ಕನಿಷ್ಠ ಎರಡು ಲಕ್ಷ ವಾಹನಗಳ ನೋಂದಣಿ ಫ‌ಲಕಗಳು ಎಚ್‌ಎಸ್‌ಆರ್‌ಪಿಗೆ ಮಾರ್ಪಾಡು ಆಗಬೇಕು. ಆದರೆ, ಇದುವರೆಗೆ ಅಳವಡಿಕೆ ಆಗಿದ್ದೇ ಎರಡು ಲಕ್ಷ ವಾಹನಗಳು. ಈ ಮಂದಗತಿಯ ಸ್ಪಂದನೆ ಹಿನ್ನೆಲೆಯಲ್ಲಿ ಗಡುವು ವಿಸ್ತರಣೆಗೆ ಸಾರಿಗೆ ಇಲಾಖೆ ಚಿಂತನೆ ನಡೆಸಿದ್ದು, ಈ ಸಂಬಂಧ ಶೀಘ್ರ ಆದೇಶ ಹೊರಬೀಳುವ ಸಾಧ್ಯತೆ ಇದೆ.

ವಾಹನಗಳ ಹಳೆಯ ನಂಬರ್‌ ಪ್ಲೇಟ್‌ ಬದಲಾಯಿಸಿ ಅತಿಸುರಕ್ಷಿತ ನೋಂದಣಿ ಫ‌ಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆ ಕಡ್ಡಾಯಗೊಳಿಸಲಾಗಿದ್ದು, ಇದೇ ನ. 17ರ ಗಡುವು ವಿಧಿಸಲಾಗಿದೆ. ಆದರೆ, ಈ ಬಗ್ಗೆ ಅರಿವಿನ ಕೊರತೆಯಿಂದ ನಿರೀಕ್ಷಿತ ಮಟ್ಟದಲ್ಲಿ ಅಳವಡಿಕೆ ಕಾರ್ಯ ಚುರುಕುಗೊಂಡಿಲ್ಲ. ಆದ್ದರಿಂದ ಈ ಗಡುವನ್ನು ಕನಿಷ್ಠ ಇನ್ನೂ ಎರಡು-ಮೂರು ತಿಂಗಳು ವಿಸ್ತರಿಸಲು ಸಾರಿಗೆ ಇಲಾಖೆ ಉದ್ದೇಶಿಸಿದೆ.

ಸಾಮಾನ್ಯ ನೋಂದಣಿ ಫ‌ಲಕಗಳನ್ನು ಬದಲಾಯಿಸಿ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡ ವಾಹನಗಳ ಸಂಖ್ಯೆ ರಾಜ್ಯದಲ್ಲಿ ಅಂದಾಜು 2ರಿಂದ 2.5 ಲಕ್ಷ ಆಗಿದೆ. ಆದರೆ, ಇನ್ನೂ 1.70 ಕೋಟಿ ವಾಹನಗಳ ಫ‌ಲಕಗಳು ಎಚ್‌ಎಸ್‌ಆರ್‌ಪಿಗೆ ಪರಿವರ್ತನೆ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆ ಮಾಡಬೇಕು ಎಂಬ ಚಿಂತನೆ ಇದೆ. ಆದರೆ, ಎಷ್ಟು ದಿನಗಳು ಎಂಬುದು ಇನ್ನೂ ನಿರ್ಧಾರ ಆಗಿಲ್ಲ. ಶೀಘ್ರ ಈ ನಿಟ್ಟಿನಲ್ಲಿ ಸ್ಪಷ್ಟ ಚಿತ್ರಣ ನೀಡಲಾಗುವುದು ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ (ಪ್ರವರ್ತನ) ಸಿ. ಮಲ್ಲಿಕಾರ್ಜುನ “ಉದಯವಾಣಿ’ಗೆ ತಿಳಿಸಿದರು.

ಅವಧಿ ವಿಸ್ತರಣೆಯೊಂದಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ವ್ಯಾಪಕ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗುವುದು. ವಾಹನ ಸವಾರರ ಸಹಕಾರ ಕೂಡ ಈ ನಿಟ್ಟಿನಲ್ಲಿ ಮುಖ್ಯವಾಗಿದೆ. ಹಾಗಾಗಿ, ಈ ಅಭಿಯಾನಕ್ಕೆ ಕೈಜೋಡಿಸಬೇಕು. ಒಇಎಂ (ಒರಿಜಿನಲ್‌ ಇಕ್ವಿಪ್‌ಮೆಂಟ್‌ ಮ್ಯಾನ್ಯುಫ್ಯಾಕ್ಚರರ್‌)ಗಳಿಂದ ಅನುಮೋದಿಸಲ್ಪಟ್ಟ ಮಾರಾಟಗಾರರು ಮತ್ತು ವಿತರಕರು (ಡೀಲರ್‌) ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡುತ್ತಾರೆ. ಅದೂ ಆನ್‌ಲೈನ್‌ ಮೂಲಕವೇ ಕೋರಿಕೆ ಸಲ್ಲಿಸುವುದು ಅಗತ್ಯ ಮತ್ತು ಅನಿವಾರ್ಯ ಎಂದು ಮಲ್ಲಿಕಾರ್ಜುನ ಹೇಳಿದರು.

ವೆಬ್‌ಸೈಟ್‌ನಲ್ಲಿ ನೋಂದಣಿಗೆ ಅವಕಾಶ
ಇದಕ್ಕಾಗಿ ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ಎಚ್‌ಎಸ್‌ಆರ್‌ಪಿಗೆ ಕೋರಿಕೆ ಸಲ್ಲಿಸಬೇಕು. ಅನಂತರ ನೋಂದಣಿ ಪತ್ರ ಒಳಗೊಂಡಂತೆ ಅಗತ್ಯ ದಾಖಲೆಗಳನ್ನು ದಾಖಲಿಸಬೇಕು. ಅದು ಸಂಬಂಧಪಟ್ಟ ಒಇಎಂಗೆ ಹೋಗುತ್ತದೆ. ಅಲ್ಲಿ ಹತ್ತಿರದ ಡೀಲರ್‌ ಅಥವಾ ಮಾರಾಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕು. ಅನಂತರ ದಿನಾಂಕ ಮತ್ತು ಸಮಯ ನಿಗದಿಯಾಗುತ್ತದೆ. ಜತೆಗೆ ಆಯಾ ಸಮೀಪದ ಡೀಲರ್‌ಗೂ ಸಂದೇಶ ತಲುಪುತ್ತದೆ. ನಿಗದಿಪಡಿಸಿದ ಅವಧಿಯಲ್ಲಿ ಖುದ್ದು ವಾಹನದೊಂದಿಗೆ ಭೇಟಿ ನೀಡಿ ಅಳವಡಿಕೊಳ್ಳಬೇಕಾಗುತ್ತದೆ. ಮೂಲಗಳ ಪ್ರಕಾರ ದೇಶದಲ್ಲಿ 23 ಜನ ಒಇಎಂಗಳಿದ್ದು, ರಾಜ್ಯದಲ್ಲಿ ಸುಮಾರು 300-400 ಮಾರಾಟಗಾರರು ಅಥವಾ ವಿತರಕರು ಇರಬಹುದು ಎನ್ನಲಾಗಿದೆ.

 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.