PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Team Udayavani, Oct 5, 2024, 1:41 AM IST
ಬೆಂಗಳೂರು: ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ರಾಜ್ ಅಧಿಕಾರಿಗಳ ಹಾಗೂ ನೌಕರರ ನ್ಯಾಯ
ಯುತ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ, ರಾಜ್ಯಾದ್ಯಂತ ಸೇವೆಯನ್ನು ಸ್ಥಗಿತಗೊಳಿಸಿ ಶುಕ್ರವಾರ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಹಾಗೂ ಸಂಬಂಧಪಟ್ಟ ಸಂಘಟನೆಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿವೆ.
ಪಂಚಾಯತ್ಗಳ ಜನಸಂಖ್ಯೆ ಎರಡರಿಂದ ಮೂರು ಪಟ್ಟು ಹೆಚ್ಚಾಗಿದೆ. ಆದರೆ ಸಿಬಂದಿ ಸಂಖ್ಯೆ ಮಾತ್ರ 30 ವರ್ಷಗಳ ಹಿಂದಿನ ಜನಸಂಖ್ಯೆಯ ಅನುಪಾತದಲ್ಲಿದೆ. ಸಿಬಂದಿ ಕೊರತೆಯಿಂದ ಹೆಚ್ಚುವರಿ ಹೊರೆ ಬೀಳುತ್ತಿದೆ. ದಿನದಿಂದ ದಿನಕ್ಕೆ ಕೆಲಸದ ಒತ್ತಡ ತೀವ್ರಗೊಳ್ಳುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಕಾರ್ಯದರ್ಶಿ ಮತ್ತು ಲೆಕ್ಕ ಪರಿಶೋಧಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸುವಾಗ ಪಿಡಿಒಗಳ ಸಲಹೆ ಗಳನ್ನು ಪರಿಗಣಿ ಸದೆ ಅಳವಡಿಸ ಲಾದ ಅವೈಜ್ಞಾನಿಕ ನಿಯಮ ಕೈಬಿಡ ಬೇಕು. ಕುಂದುಕೊರತೆ ಪ್ರಾಧಿಕಾರ ವನ್ನು ಚುರುಕುಗೊಳಿಸಬೇಕು. ಪಂಚಾ
ಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರಕಾರ ವಿಫಲವಾ ದರೆ ಹೋರಾಟ ತೀವ್ರ ಗೊಳಿಸುವುದಾಗಿ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.