Indi; ನಗ್ನ ರೂಪದ ದೇವಿಮೂರ್ತಿ ಕೂರಿಸಿ ಮಲಮೂತ್ರ ವಿಸರ್ಜಿಸಿ ವಿಕೃತಿ: ವ್ಯಾಪಕ ಆಕ್ರೋಶ
ಕೃತ್ಯ ಎಸಗಿದ ಶೌಕತಲಿ ನೈನಸಾಬ ಮಕಾಂದಾರ ಎಂಬ ಯುವಕನ ಬಂಧನ
Team Udayavani, Oct 25, 2023, 5:10 PM IST
ಇಂಡಿ: ದೇವಿಮೂರ್ತಿಯನ್ನು ನಗ್ನ ಮಾಡಿದ ರೀತಿಯಲ್ಲಿ ಕೂರಿಸಿ, ಅಲ್ಲೇ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದು ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಘಟನೆ ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಕೃತ್ಯ ಎಸಗಿದ ಆರೋಪಿ ಶೌಕತಲಿ ನೈನಸಾಬ ಮಕಾಂದಾರ ಎಂಬ ಯುವಕನನ್ನು ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆಕ್ರೋಶ
ಗೂಂಡಾ ಕಾಯ್ದೆ ಅಡಿ ಯುವಕನ ಮೇಲೆ ಪ್ರಕರಣ ದಾಖಲಿಸಬೇಕು.ಇಂತಹ ನೀಚ ಕೆಲಸ ಮಾಡಲು ಯಾರು ಪ್ರೇರೇಪಿಸಿದ್ದಾರೆ? ಈ ಕುರಿತು ತನಿಖೆ ನಡೆಸಬೇಕು. ಇಂತಹ ಧರ್ಮ ವಿರೋಧಿ ಕೆಲಸ ಮಾಡುವವರಿಗೆ ಕಾನೂನು ಅಡಿಯಲ್ಲಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿ ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ.
ವಿಶ್ವ ಹಿಂದೂ ಪರಿಷತ್, ಬಜರಂಗದಳದ ಜಿಲ್ಲಾ ಪ್ರಮುಖ ಪ್ರಕಾಶ ಬಿರಾದಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ತಹಶೀಲ್ದಾರ್ ಮತ್ತು ಸಿಪಿಐ ಅವರಿಗೆ ಮನವಿ ಸಲ್ಲಿಸಿದರು. ಶಂಕರ ಹಲವಾಯಿ, ಅಯ್ಯಪ್ಪಗೌಡ ಬಿರಾದಾರ, ಮಹೇಶ ಬೊಮ್ಮನಹಳ್ಳಿ, ಶಾಂತಪ್ಪ ಸೋಲಾಪೂರ, ಈರಣ್ಣ ಸಿಂದಗಿ, ಸುಭಾಶ ಪೂಜಾರಿ, ಪ್ರವಿಣ ಮಠ, ಶಶಿಕಾಂತ ಕೋಳೆಕರ, ಮಲ್ಲಿಕಾರ್ಜುನ ಪೂಜಾರಿ, ಮಳಸಿದ್ದ ಡಂಗಿ, ಬಾಬುಶಾ ಸೋಲಾಪೂರ, ಕಾರ್ತಿಗೌಡ ಪೋಲಿಸ ಪಾಟೀಲ, ಶಿವಾಜಿ ಜಾಧವ, ವಿಶ್ವನಾಥ ಪಾತಾಳೆ, ಮಂಜುನಾಥ ಜಮಾದಾರ, ರಮೇಶ ಬೊಮ್ಮನಹಳ್ಳಿ, ಅಕ್ಷಯ ಇಬಾರೆ, ಸಂಜೀವ ಜಾಧವ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.