ದೇಶಕ್ಕೆ ಸಿಗಲಿದೆ ವಿಮಾನ ಬಲ; ಸಿ-295 ವಿಮಾನ ಉತ್ಪಾದನಾ ಘಟಕಕ್ಕೆ ಶಂಕು


Team Udayavani, Oct 31, 2022, 7:15 AM IST

ದೇಶಕ್ಕೆ ಸಿಗಲಿದೆ ವಿಮಾನ ಬಲ; ಸಿ-295 ವಿಮಾನ ಉತ್ಪಾದನಾ ಘಟಕಕ್ಕೆ ಶಂಕು

ವಡೋದರಾ: ಮುಂದಿನ ಹಲವು ವರ್ಷಗಳ ಅವಧಿಯಲ್ಲಿ ಭಾರತ ಸರಕು ಸಾಗಣೆಯ ವಿಮಾನಗಳ ನಿರ್ಮಾಣ ಕ್ಷೇತ್ರದಲ್ಲಿ ಪ್ರಮುಖ ರಾಷ್ಟ್ರವಾಗಲಿದೆ.

ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ಟಾಟಾ ಗ್ರೂಪ್‌ ಮತ್ತು ಏರ್‌ಬಸ್‌ ಸಹಭಾಗಿತ್ವದಲ್ಲಿ ಸಿ-295 ಸರಕು ಸಾಗಣೆಯ ವಿಮಾನಗಳ ನಿರ್ಮಾಣ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಸ್ಥಿರ, ಮುಂದಿನ ದಿನಗಳನ್ನು ಕೇಂದ್ರೀಕರಿಸಿ ಮತ್ತು ದೃಢವಾಗಿರುವ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಹೀಗಾಗಿಯೇ ದೇಶದಲ್ಲಿ ಆರ್ಥಿಕ ಸುಧಾರಣೆಯ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆಯಲಾಗುತ್ತಿದೆ. ಜತೆಗೆ ಉತ್ಪಾದನಾ ಕ್ಷೇತ್ರದಲ್ಲಿ ಭಾರತ ಪ್ರಮುಖ ರಾಷ್ಟ್ರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಭಾರತ ಹೊಸ ಮನಸ್ಥಿತಿ, ಹೊಸ ರೀತಿಯಲ್ಲಿ ಕೆಲಸ ಮಾಡುವ ಮನೋಭಾವದಲ್ಲಿ ಇದೆ. ಇದೇ ಕಾರಣದಿಂದಾಗಿ ಮುಂದಿನ ಹಲವು ವರ್ಷಗಳ ಅವಧಿಯಲ್ಲಿ ಸರಕು ಸಾಗಣೆ ವಿಮಾನ ನಿರ್ಮಾಣ ಕ್ಷೇತ್ರದಲ್ಲಿ ಪ್ರಮುಖ ರಾಷ್ಟ್ರವಾಗಿ ಪರಿವರ್ತನೆಯಾಗಲಿದೆ. ಜತೆಗೆ ಈ ನಿರ್ಧಾರ ದೊಡ್ಡ ಪ್ರಮಾಣದಲ್ಲಿ ವಾಣಿಜ್ಯಿಕ ವಿಮಾನಗಳನ್ನು ಉತ್ಪಾದನೆ ಮಾಡಲೂ ಅವಕಾಶ ಸಿಗಲಿದೆ’ ಎಂದು ಪ್ರತಿಪಾದಿಸಿದ್ದಾರೆ.

ಜಗತ್ತೇ ಗುರಿ:
ಮೇಕ್‌ ಇನ್‌ ಇಂಡಿಯಾ ಎಂಬ ಧ್ಯೇಯವಾಕ್ಯದ ಅಡಿ ಜಗತ್ತನ್ನೇ ಗುರಿಯಾಗಿಸಿ ಇಲ್ಲಿ ವಿವಿಧ ವಸ್ತುಗಳನ್ನು ಉತ್ಪಾದನೆ ಮಾಡಲಾಗುತ್ತಿದೆ. ಇದುವೇ ದೇಶಕ್ಕೆ ಉತ್ಪಾದನಾ ಕ್ಷೇತ್ರದಲ್ಲಿ ಉತ್ತಮ ಹೆಸರು ತಂದುಕೊಡಲಿದೆ ಎಂದರು ಪ್ರಧಾನಿ ಮೋದಿ. ಭಾರತೀಯ ವಾಯುಪಡೆಗಾಗಿ ವಡೋದರಾ ಘಟಕದಲ್ಲಿ ಸರಕು ಸಾಗಣೆಯ ವಿಮಾನಗಳನ್ನು ಉತ್ಪಾದನೆ ಮಾಡುವ ಅಂಶ ದೇಶದ ಸೇನಾ ವ್ಯವಸ್ಥೆಗೆ ಹೆಚ್ಚಿನ ಬಲತಂದು ಕೊಡಲಿದೆ. ಇದರಿಂದಾಗಿ ವೈಮಾನಿತ ಉತ್ಪಾದನಾ ಕ್ಷೇತ್ರದಲ್ಲಿ ದೇಶಕ್ಕೆ ಪ್ರಸಿದ್ಧಿಯನ್ನೂ ತಂದುಕೊಡಲಿದೆ ಎಂದು ಹೇಳಿದ್ದಾರೆ.
“ಮುಂದಿನ ವರ್ಷಗಳಲ್ಲಿ ರಕ್ಷಣೆ ಮತ್ತು ವೈಮಾನಿತ ಉತ್ಪಾದನಾ ಕ್ಷೇತ್ರಗಳೆರಡೂ ದೇಶಕ್ಕೆ ಪ್ರಮುಖವಾಗಲಿದೆ. 2025ರ ವೇಳೆಗೆ ದೇಶದ ರಕ್ಷಣಾ ಉತ್ಪಾದನೆಯ ಮೌಲ್ಯ 25 ಬಿಲಿಯನ್‌ ಡಾಲರ್‌ ಮೊತ್ತವನ್ನು ದಾಟಲಿದೆ. ಉತ್ತರ ಪ್ರದೇಶ, ತಮಿಳುನಾಡಿನಲ್ಲಿ ಕೂಡ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಉದ್ದಿಮೆಗಳನ್ನು ಸ್ಥಾಪಿಸಲಾಗುತ್ತಿದೆ’ ಎಂದರು.

ಯೋಜನೆಯ ಹೈಲೈಟ್‌ ಏನು?
21, 935 ಕೋಟಿ- ಒಪ್ಪಂದ ಮೊತ್ತ

ಏನು ಉತ್ಪಾದನೆ
ಏರ್‌ಬಸ್‌ನ ಸಿ-295 ಸರಕು ಸಾಗಣೆ ವಿಮಾನ
56- ಒಟ್ಟು ವಿಮಾನಗಳು
16- ಏರ್‌ಬಸ್‌ನಿಂದ ಸಿಗಲಿರುವ ಅವೇ ಹಂತದಲ್ಲಿ ಸಿಗಲಿರುವ ವಿಮಾನ
39- ಆಗಸ್ಟ್‌ 2031ರ ಒಳಗೆ ವಡೋದರಾದಲ್ಲಿ ಉತ್ಪಾದನೆಯಾಗಲಿರುವ ವಿಮಾನಗಳು

ಸಹಭಾಗಿತ್ವ ಯಾರದ್ದು?
ಏರ್‌ಬಸ್‌ ಮತ್ತು ಟಾಟಾ ಗ್ರೂಪ್‌

ಹೆಗ್ಗಳಿಕೆ ಏನು?
– ದೇಶದ ಮಿಲಿಟರಿ ಉಪಯೋಗಕ್ಕಾಗಿ ಖಾಸಗಿ ಸಂಸ್ಥೆಯಿಂದ ಸರಕು ಸಾಗಣೆ ವಿಮಾನ ನಿರ್ಮಾಣ.
– 2026 ಸೆಪ್ಟೆಂಬರ್‌ ವೇಳೆಗೆ ದೇಶದಲ್ಲಿ ಸಿದ್ಧಗೊಳಿಸಿದ ಸಿ-296 ವಿಮಾನ ಸೇವೆಗೆ ಲಭ್ಯ.
– ಐರೋಪ್ಯ ಒಕ್ಕೂಟದಿಂದ ಹೊರಭಾಗದಲ್ಲಿ ಮೊದಲ ಬಾರಿಗೆ ಈ ವಿಮಾನ ಉತ್ಪಾದನೆ.
– 05ರಿಂದ 09 ಟನ್‌ ಭಾರ ಹೊರುವ ಸಾಮರ್ಥ್ಯ
– ಭಾರತ್‌ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಮತ್ತು ಭಾರತ್‌ ಡೈನಾಮಿಕ್ಸ್‌ ಲಿಮಿಟೆಡ್‌ನ‌ ಉತ್ಪನ್ನಗಳ ಬಳಕೆ
– ಹೊಸ ವಿಮಾನಗಳಿಂದ ಸರಕು ಸಾಗಣೆ ಮಾಡುವ ಐಎಎಫ್ ಸಾಮರ್ಥ್ಯ ವೃದ್ಧಿಸಲಿದೆ.

ಯಾವುದರ ಬದಲು?
– ಐಎಎಫ್ ಈಗ ಆ್ಯವ್ರೋ748 ವಿಮಾನಗಳನ್ನು ಸರಕು ಸಾಗಣೆಗೆ ಬಳಸುತ್ತದೆ. ಉತ್ಪಾದನೆಯಾಗಲಿರುವ ಹೊಸ ವಿಮಾನಗಳು ಆ್ಯವ್ರೋ ಜಾಗವನ್ನು ತುಂಬಲಿವೆ.
35- ಜಗತ್ತಿನಲ್ಲಿ ಹೊಸ ವಿಮಾನ ಬಳಕೆ ಮಾಡಲಿರುವ ದೇಶ ಭಾರತ

ರಕ್ಷಣಾ ವ್ಯವಸ್ಥೆಯಲ್ಲಿ ಸ್ವಾವಲಂಬನೆ ಸಾಧಿಸಬೇಕು ಎಂಬ ಮನೋಭಾವನೆ ಹೊಂದಿರುವ ದೇಶಕ್ಕೆ ಈ ಹೊತ್ತು ಅಮೋಘವಾದದ್ದು.
-ರಾಜನಾಥ್‌ ಸಿಂಗ್‌, ರಕ್ಷಣಾ ಸಚಿವ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.