ಅಂಗಾಂಗ ದಾನಕ್ಕೆ 36,343 ಮಂದಿ ನೋಂದಣಿ


Team Udayavani, Aug 3, 2023, 3:05 PM IST

ಅಂಗಾಂಗ ದಾನಕ್ಕೆ 36,343 ಮಂದಿ ನೋಂದಣಿ

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಅಂಗಾಂಗ ದಾನದ ಬಗ್ಗೆ ಜನರಲ್ಲಿ ತಕ್ಕಮಟ್ಟಿಗೆ ಅರಿವು ಮೂಡುತ್ತಿದ್ದು, ಇದರ ಫ‌ಲವಾಗಿ ರಾಜ್ಯದಲ್ಲಿ ಸ್ವಯಂಪ್ರೇರಿತವಾಗಿ ಹೆಸರು ನೋಂದಾಯಿಸಿಕೊಳ್ಳುತ್ತಿರುವವರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆದರೆ, ಮೆದುಳು ನಿಷ್ಕ್ರಿಯಗೊಂಡ ನಂತರವೂ ಕುಟುಂಬಗಳು ಅಸಮ್ಮತಿಯಿಂದ ಅಂಗಾಂಗಗಳು ವ್ಯರ್ಥ ವಾಗುತ್ತಿರುವ ಪ್ರಕರಣಗಳು ಮುಂದುವರಿದಿವೆ.

ಅಂಗಾಂಗ ದಾನಕ್ಕೆ ಇದುವರೆಗೆ 36,343 ಮಂದಿ ಸ್ವಯಂ ಪ್ರೇರಿತವಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಸಾಮಾನ್ಯವಾಗಿ ಅಂಗಾಂಗಗಳು ಪಡೆಯುವ ಸಂದರ್ಭದಲ್ಲಿ ಕುಟುಂಬಸ್ಥರನ್ನು ವಿವಿಧ ಹಂತದಲ್ಲಿ ಸಮಾಲೋಚನೆಗೆ ಒಳಪಡಿಸಿ, ಮೆದುಳು ನಿಷ್ಕ್ರಿಯಗೊಂಡ 8ರಿಂದ 10 ಗಂಟೆಯೊಳಗೆ ಅಂಗಾಂಗಗಳನ್ನು ತೆಗೆದು ಅಗತ್ಯವಿರುವವರಿಗೆ ಕಸಿ ಮಾಡಬೇಕು. ಆದರೆ, ಇಂತಹ ಸಂದರ್ಭದಲ್ಲಿ ಕೆಲವು ಪ್ರಕರಣಗಳಲ್ಲಿ ಸಹಕಾರ ಸಿಗುತ್ತಿಲ್ಲ. ಪರಿಣಾಮ ವ್ಯರ್ಥವಾಗಿ ಹೋಗುತ್ತಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.

ರಾಜ್ಯಾದ್ಯಂತ ರಸ್ತೆ ಅಪಘಾತ ಸೇರಿದಂತೆ ವಿವಿಧ ಕಾರಣಗಳಿಂದ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಮನೆಯವರು ಬದುಕಬಹುದು ಎನ್ನುವ ಹುಸಿ ನಿರೀಕ್ಷೆ ಹಾಗೂ ದೇಹದ ಅಂಗಾಂಗಳನ್ನು ತೆಗೆದರೆ ಮುಕ್ತಿ ದೊರೆಯದು ಎಂಬ ಮೂಢನಂಬಿಕೆ ನೀರಸ ಸ್ಪಂದನೆಗೆ ಪ್ರಮುಖ ಕಾರಣ. ಇದರಿಂದ ಮರುಜೀವದ ನಿರೀಕ್ಷೆಯಲ್ಲಿ ರೋಗಿಗಳು ಅಗತ್ಯವಿರುವ ಅಂಗಾಂಗಗಳು ಸಿಗದೆ ಪರದಾಡುತ್ತಿದ್ದಾರೆ.

7,502 ಮಂದಿ ನಿರೀಕ್ಷೆ: ರಾಜ್ಯದಲ್ಲಿ ಇದುವರೆಗೆ 7,502 ಮಂದಿ ಅಂಗಾಂಗಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಪ್ರಸ್ತುತ ಮೂತ್ರಪಿಂಡ ಕಸಿಗೆ ಸಂಬಂಧಿಸಿದಂತೆ 5,288 ಮಂದಿ ದಾನಿಗಳ ನಿರೀಕ್ಷೆಯಲ್ಲಿದ್ದಾರೆ. ಯಕೃತ್‌ 1886, ಹೃದಯ 181, ಶಾಸ್ವಕೋಶ 68, ಹೃದಯ ಮತ್ತು ಶ್ವಾಸಕೋಶಗಳು 28, ಯಕೃತ್‌ ಮತ್ತು ಮೂತ್ರಪಿಂಡ 45, ಮೂತ್ರಪಿಂಡ ಮತ್ತು ಮೇದೋಜೀರಕಗ್ರಂಥಿ 23, ಹೃದಯ 2, ಸಣ್ಣ ಕರುಳಿಗಾಗಿ ಓರ್ವ ರೋಗಿ ಅಂಗಾಂಗಗಳ ದಾನಿಗಳ ನಿರೀಕ್ಷೆಯಲ್ಲಿದ್ದಾರೆ.

4,143 ಮಂದಿಗೆ ಮರುಜೀವ: ಕಳೆದ 17 ವರ್ಷದಿಂದ ಮೆದುಳು ನಿಷ್ಕ್ರಿಯಗೊಂಡ 856 ದಾನಿಗಳಿಂದ 4,143 ಮಂದಿ ಮರುಜೀವ ಸಿಕ್ಕಿದೆ. 2023ರ ಜನವರಿ- ಜುಲೈವರೆಗೆ ಮೆದುಳು ನಿಷ್ಕ್ರಿಯಗೊಂಡ 92 ಮಂದಿಯ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಅದರಲ್ಲಿ 134 ಫ‌ಲಾನುಭವಿಗಳಿಗೆ ಮೂತ್ರಪಿಂಡ, ಯಕೃತ್‌ 74, ಹೃದಯ 13, ಮೂತ್ರಪಿಂಡ ಮತ್ತು ಮೇದೋಜೀರಕ ಗ್ರಂಥಿ 2, ಸಣ್ಣ ಕರಳು 1, ಶ್ವಾಸಕೋಶ 8, ಯಕೃತ್‌ ಮತ್ತು ಮೇದೋಜೀರಕ ಗ್ರಂಥಿ 5, ಹೃದಯ ಕವಾಟ 5, ಕಣ್ಣಿ ಕಾರ್ನಿಯಾ 182, ಚರ್ಮ 13 ರೋಗಿಗಳಿಗೆ ಸೇರಿದಂತೆ ಒಟ್ಟು 437 ಮಂದಿಗೆ ಜೀವ ದಾನವಾಗಿದೆ.

ಎಂಟು ಜನರಿಗೆ ಮರು ಜೀವ: ಒಬ್ಬ ವ್ಯಕ್ತಿ 8 ಜನರಿಗೆ ಮರುಜೀವ ನೀಡಬಹುದು. ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಕಾರ್ನಿಯಾ, ಹೃದಯ, ಹೃದಯ ಕವಾಟ, ಯಕೃತ್‌, ಮೂತ್ರಪಿಂಡ, ಚರ್ಮ, ಅಸ್ತಿಮಜ್ಜೆ, ಶ್ವಾಸಕೋಶ, ಕರುಳು ಸೇರಿದಂತೆ 25 ಕ್ಕೂ ಅಧಿಕ ಅಂಗಾಂಗಗಳನ್ನು ತೆಗೆದು ಬೇರೆಯವರಿಗೆ ಕಸಿ ಮಾಡಬಹುದು.

ಅಂಗಾಂಗ ದಾನಕ್ಕೆ ಯಾವುದೇ ವಯೋಮಿತಿ ಇಲ್ಲ. ಸಾವಿನ ಸಮಯದಲ್ಲಿ ವೈದ್ಯಕೀಯ ಹಿಸ್ಟರಿ ನೋಡಿ, ಅಂಗಗಳ ಕಾರ್ಯಕ್ಷಮತೆ ಪರಿಗಣಿಸಿ ಪಡೆಯಲಾಗುತ್ತದೆ. ಅಂಗಾಂಗ ಕಸಿ ಬೇಡಿಕೆ ಕಡಿಮೆಗೊಳಿಸಲು ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಉತ್ತೇಜಿಸಲಾಗುತ್ತಿದೆ. ಅಂಗಾಂಗ ದಾನ ಬಗ್ಗೆ ವ್ಯಾಪಕವಾಗಿ ಜಾಗೃತಿ ಮೂಡಿಸಲಾಗುತ್ತಿದೆ. – ಡಾ.ರಜಿನಿ ಎಂ.. ಜಂಟಿ ನಿರ್ದೇಶಕಿ (ವೈದ್ಯಕೀಯ) ಸದಸ್ಯ ಕಾರ್ಯದರ್ಶಿ ಜೀವ ಸಾರ್ಥಕತೆ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.