Technology; ಟೈರ್‌ ನಿರ್ವಹಣೆಗೂ ಬರಲಿದೆ ‘ಇಂಟಲಿಜೆಂಟ್‌ ಸಿಸ್ಟಂ’


Team Udayavani, Sep 3, 2024, 6:46 AM IST

1-tyre

ಬೆಂಗಳೂರು: ಸಾಮಾನ್ಯವಾಗಿ ವಾಹನದಲ್ಲಿರುವ ಪೆಟ್ರೋಲ್‌ ಅಥವಾ ಡೀಸೆಲ್‌ ಅಥವಾ ಬ್ಯಾಟರಿ ಚಾರ್ಜ್‌ ಎಷ್ಟು? ಇನ್ನೂ ಎಷ್ಟು ಕಿ.ಮೀ. ಸಂಚರಿಸಬಹುದು ಎಂಬುದು ಡ್ಯಾಶ್‌ಬೋರ್ಡ್‌ನಲ್ಲಿ ಕಾಣುತ್ತದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ವಾಹನದ ಟೈರ್‌ ಇನ್ನೆಷ್ಟು ದಿನ ಬಾಳಿಕೆ ಬರಲಿದೆ? ಉತ್ತಮ ಬಾಳಿಕೆ ಜತೆಗೆ ಸುಧಾರಿತ ರಸ್ತೆ ಯಾವುದು ಎಂಬ ಮಾಹಿತಿಯನ್ನೂ ನೀಡುವ ತಂತ್ರಜ್ಞಾನವೊಂದು ಬಂದಿದೆ.

ಯಾವುದೇ ವಾಹನಗಳ ಟೈರ್‌ಗಳನ್ನು ನಿಯಮಿತವಾಗಿ ನಿರ್ವಹಣೆ ಮಾಡುವ ತಂತ್ರಜ್ಞಾನವನ್ನು ಎಬಿಸಿಆರ್‌ಎಲ್‌ ಎಂಬ ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದೆ. ಇದು ಸರಕಾರದ ಸಹಯೋಗದಲ್ಲಿ ಸ್ಥಾಪಿಸಿದ ಸೆಂಟರ್‌ ಆಫ್ ಎಕ್ಸಿಲೆನ್ಸ್‌ ಸೆಮಿಕಂಡಕ್ಟರ್‌ ಫ್ಯಾಬಲೆಸ್‌ ಎಕ್ಸಿಲರೇಟರ್‌ ಲ್ಯಾಬ್‌ (ಎಸ್‌ಎಫ್ಎಎಲ್‌-ಸಫ‌ಲ್‌) ನೆರವಿನಲ್ಲಿ ಅಸ್ತಿತ್ವಕ್ಕೆ ಬಂದ ಸ್ಟಾರ್ಟ್‌ಅಪ್‌ ಆಗಿದ್ದು, “ಟೈರ್‌ಸಿನ್ಯಾಪ್ಸ್‌’ ಚಿಪ್‌ ಹೊರತಂದಿದೆ.

ಈ ಅತ್ಯಾಧುನಿಕ ಇಂಟೆಲಿಜೆಂಟ್‌ ಟೈರ್‌ ನಿರ್ವಹಣ ವ್ಯವಸ್ಥೆ ಅಳವಡಿಕೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಚಿಂತನೆ ನಡೆಸಿದೆ. ಪರೀಕ್ಷಾರ್ಥವಾಗಿ ನಗರದಿಂದ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವ “ವಾಯುವಜ್ರ’ ವೋಲ್ವೋ ಮತ್ತು ಈಚೆಗೆ ರಸ್ತೆಗಿಳಿದ ವಿದ್ಯುತ್‌ಚಾಲಿತ ಬಸ್‌ಗಳಲ್ಲಿ ಅಳವಡಿಸಲು ಉದ್ದೇಶಿಸಿದೆ. ಇದು ಯಶಸ್ವಿಯಾದರೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲೂ ಅಳವಡಿಸಲು ಚಿಂತನೆ ನಡೆದಿದೆ.

ಟೈರ್‌ ಗುಣಮಟ್ಟ ಕಾಯ್ದುಕೊಳ್ಳಲು ಸಹಕಾರಿ
ಸಾಮಾನ್ಯವಾಗಿ ಒಂದು ಬಸ್‌ನ ಟೈರ್‌ ಅನ್ನು 50 ಸಾವಿರ ಕಿ.ಮೀ. ಅನಂತರ ಬದಲಾಯಿಸಲಾಗುತ್ತದೆ. ಈ ತಂತ್ರಜ್ಞಾನದ ಅಳವಡಿಕೆಯಿಂದ ಟೈರ್‌ಗಳ ಬಾಳಿಕೆ ನಿಖರವಾಗಿ ತಿಳಿಯಬಹುದು. ಜತೆಗೆ ಆ ಟೈರ್‌ಗಳ ಮೇಲೆ ಎಷ್ಟು ಲೋಡ್‌ ಹಾಕಬಹುದು ಮತ್ತು ವಾಹನ ಸಾಗುವ ರಸ್ತೆ ಕಳಪೆ ಗುಣಮಟ್ಟದ್ದಾಗಿದ್ದರೆ ಅದರ ಬಗ್ಗೆಯೂ ಇದು ಮುನ್ಸೂಚನೆ ನೀಡುವುದರೊಂದಿಗೆ ಪರ್ಯಾಯ ರಸ್ತೆಯ ಮಾಹಿತಿಯನ್ನೂ ನೀಡಲಿದೆ. ಅದನ್ನು ಆಧರಿಸಿ ಟೈರ್‌ ಗುಣಮಟ್ಟ ಕಾಯ್ದುಕೊಳ್ಳಬಹುದು ಎಂದು ಎಬಿಸಿಆರ್‌ಎಲ್‌ ಸಹ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ತುಷಾರ್‌ ಕಾಂತಿ ಭಟ್ಟಾಚಾರ್ಯ ಉದಯವಾಣಿ’ಗೆ ತಿಳಿಸಿದರು.

ಇದನ್ನು ಬಸ್‌ಗಳು ಮಾತ್ರವಲ್ಲ; ದ್ವಿಚಕ್ರ, ನಾಲ್ಕು ಚಕ್ರ ಸೇರಿದಂತೆ ಎಲ್ಲ ಪ್ರಕಾರದ ವಾಹನಗಳ ಟೈರ್‌ ನಿರ್ವಹಣೆಗೂ ಅಳವಡಿಸಬಹುದು. ವಿಶೇಷವಾಗಿ ವಿದ್ಯುತ್‌ಚಾಲಿತ ವಾಹನಗಳಿಗೆ ಈ ಚಿಪ್‌ ಅಳವಡಿಸಿದರೆ, ಟೈರ್‌ಗಳ ನಿರ್ವಹಣೆಯಿಂದ ಕಡಿಮೆ ವಿದ್ಯುತ್‌ನಲ್ಲಿ ಹೆಚ್ಚು ಸಂಚರಿಸಲು ಅನುಕೂಲ ಆಗಲಿದೆ. ಅಷ್ಟೇ ಅಲ್ಲ, ಬ್ಯಾಟರಿ ಮೇಲಿನ ಒತ್ತಡ ಕೂಡ ತಗ್ಗಲಿದೆ ಕಂಪೆನಿಯ ಉತ್ಪನ್ನಗಳು 2025ರ ಅಂತ್ಯಕ್ಕೆ ಅಥವಾ 2026ರ ಆರಂಭದಲ್ಲಿ ಮಾರುಕಟ್ಟೆಗೆ ಬರಲಿವೆ ಎಂದರು.

ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.