Technology; ಟೈರ್‌ ನಿರ್ವಹಣೆಗೂ ಬರಲಿದೆ ‘ಇಂಟಲಿಜೆಂಟ್‌ ಸಿಸ್ಟಂ’


Team Udayavani, Sep 3, 2024, 6:46 AM IST

1-tyre

ಬೆಂಗಳೂರು: ಸಾಮಾನ್ಯವಾಗಿ ವಾಹನದಲ್ಲಿರುವ ಪೆಟ್ರೋಲ್‌ ಅಥವಾ ಡೀಸೆಲ್‌ ಅಥವಾ ಬ್ಯಾಟರಿ ಚಾರ್ಜ್‌ ಎಷ್ಟು? ಇನ್ನೂ ಎಷ್ಟು ಕಿ.ಮೀ. ಸಂಚರಿಸಬಹುದು ಎಂಬುದು ಡ್ಯಾಶ್‌ಬೋರ್ಡ್‌ನಲ್ಲಿ ಕಾಣುತ್ತದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ವಾಹನದ ಟೈರ್‌ ಇನ್ನೆಷ್ಟು ದಿನ ಬಾಳಿಕೆ ಬರಲಿದೆ? ಉತ್ತಮ ಬಾಳಿಕೆ ಜತೆಗೆ ಸುಧಾರಿತ ರಸ್ತೆ ಯಾವುದು ಎಂಬ ಮಾಹಿತಿಯನ್ನೂ ನೀಡುವ ತಂತ್ರಜ್ಞಾನವೊಂದು ಬಂದಿದೆ.

ಯಾವುದೇ ವಾಹನಗಳ ಟೈರ್‌ಗಳನ್ನು ನಿಯಮಿತವಾಗಿ ನಿರ್ವಹಣೆ ಮಾಡುವ ತಂತ್ರಜ್ಞಾನವನ್ನು ಎಬಿಸಿಆರ್‌ಎಲ್‌ ಎಂಬ ಸ್ಟಾರ್ಟ್‌ಅಪ್‌ ಅಭಿವೃದ್ಧಿಪಡಿಸಿದೆ. ಇದು ಸರಕಾರದ ಸಹಯೋಗದಲ್ಲಿ ಸ್ಥಾಪಿಸಿದ ಸೆಂಟರ್‌ ಆಫ್ ಎಕ್ಸಿಲೆನ್ಸ್‌ ಸೆಮಿಕಂಡಕ್ಟರ್‌ ಫ್ಯಾಬಲೆಸ್‌ ಎಕ್ಸಿಲರೇಟರ್‌ ಲ್ಯಾಬ್‌ (ಎಸ್‌ಎಫ್ಎಎಲ್‌-ಸಫ‌ಲ್‌) ನೆರವಿನಲ್ಲಿ ಅಸ್ತಿತ್ವಕ್ಕೆ ಬಂದ ಸ್ಟಾರ್ಟ್‌ಅಪ್‌ ಆಗಿದ್ದು, “ಟೈರ್‌ಸಿನ್ಯಾಪ್ಸ್‌’ ಚಿಪ್‌ ಹೊರತಂದಿದೆ.

ಈ ಅತ್ಯಾಧುನಿಕ ಇಂಟೆಲಿಜೆಂಟ್‌ ಟೈರ್‌ ನಿರ್ವಹಣ ವ್ಯವಸ್ಥೆ ಅಳವಡಿಕೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಚಿಂತನೆ ನಡೆಸಿದೆ. ಪರೀಕ್ಷಾರ್ಥವಾಗಿ ನಗರದಿಂದ ವಿಮಾನ ನಿಲ್ದಾಣ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವ “ವಾಯುವಜ್ರ’ ವೋಲ್ವೋ ಮತ್ತು ಈಚೆಗೆ ರಸ್ತೆಗಿಳಿದ ವಿದ್ಯುತ್‌ಚಾಲಿತ ಬಸ್‌ಗಳಲ್ಲಿ ಅಳವಡಿಸಲು ಉದ್ದೇಶಿಸಿದೆ. ಇದು ಯಶಸ್ವಿಯಾದರೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲೂ ಅಳವಡಿಸಲು ಚಿಂತನೆ ನಡೆದಿದೆ.

ಟೈರ್‌ ಗುಣಮಟ್ಟ ಕಾಯ್ದುಕೊಳ್ಳಲು ಸಹಕಾರಿ
ಸಾಮಾನ್ಯವಾಗಿ ಒಂದು ಬಸ್‌ನ ಟೈರ್‌ ಅನ್ನು 50 ಸಾವಿರ ಕಿ.ಮೀ. ಅನಂತರ ಬದಲಾಯಿಸಲಾಗುತ್ತದೆ. ಈ ತಂತ್ರಜ್ಞಾನದ ಅಳವಡಿಕೆಯಿಂದ ಟೈರ್‌ಗಳ ಬಾಳಿಕೆ ನಿಖರವಾಗಿ ತಿಳಿಯಬಹುದು. ಜತೆಗೆ ಆ ಟೈರ್‌ಗಳ ಮೇಲೆ ಎಷ್ಟು ಲೋಡ್‌ ಹಾಕಬಹುದು ಮತ್ತು ವಾಹನ ಸಾಗುವ ರಸ್ತೆ ಕಳಪೆ ಗುಣಮಟ್ಟದ್ದಾಗಿದ್ದರೆ ಅದರ ಬಗ್ಗೆಯೂ ಇದು ಮುನ್ಸೂಚನೆ ನೀಡುವುದರೊಂದಿಗೆ ಪರ್ಯಾಯ ರಸ್ತೆಯ ಮಾಹಿತಿಯನ್ನೂ ನೀಡಲಿದೆ. ಅದನ್ನು ಆಧರಿಸಿ ಟೈರ್‌ ಗುಣಮಟ್ಟ ಕಾಯ್ದುಕೊಳ್ಳಬಹುದು ಎಂದು ಎಬಿಸಿಆರ್‌ಎಲ್‌ ಸಹ ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ತುಷಾರ್‌ ಕಾಂತಿ ಭಟ್ಟಾಚಾರ್ಯ ಉದಯವಾಣಿ’ಗೆ ತಿಳಿಸಿದರು.

ಇದನ್ನು ಬಸ್‌ಗಳು ಮಾತ್ರವಲ್ಲ; ದ್ವಿಚಕ್ರ, ನಾಲ್ಕು ಚಕ್ರ ಸೇರಿದಂತೆ ಎಲ್ಲ ಪ್ರಕಾರದ ವಾಹನಗಳ ಟೈರ್‌ ನಿರ್ವಹಣೆಗೂ ಅಳವಡಿಸಬಹುದು. ವಿಶೇಷವಾಗಿ ವಿದ್ಯುತ್‌ಚಾಲಿತ ವಾಹನಗಳಿಗೆ ಈ ಚಿಪ್‌ ಅಳವಡಿಸಿದರೆ, ಟೈರ್‌ಗಳ ನಿರ್ವಹಣೆಯಿಂದ ಕಡಿಮೆ ವಿದ್ಯುತ್‌ನಲ್ಲಿ ಹೆಚ್ಚು ಸಂಚರಿಸಲು ಅನುಕೂಲ ಆಗಲಿದೆ. ಅಷ್ಟೇ ಅಲ್ಲ, ಬ್ಯಾಟರಿ ಮೇಲಿನ ಒತ್ತಡ ಕೂಡ ತಗ್ಗಲಿದೆ ಕಂಪೆನಿಯ ಉತ್ಪನ್ನಗಳು 2025ರ ಅಂತ್ಯಕ್ಕೆ ಅಥವಾ 2026ರ ಆರಂಭದಲ್ಲಿ ಮಾರುಕಟ್ಟೆಗೆ ಬರಲಿವೆ ಎಂದರು.

ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.