ವಿದ್ಯಾರ್ಥಿನಿಯರ ಹಿಂದೆ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆ ಕೈವಾಡದೆ: ರೇಣುಕಾಚಾರ್ಯ
Team Udayavani, Feb 10, 2022, 2:12 PM IST
ಬೆಂಗಳೂರು: ಅಮಾಯಕ ವಿದ್ಯಾರ್ಥಿನಿಯರ ಹಿಂದೆ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಸ್ಥೆಗಳ ಕೈವಾಡವಿದೆ. ಇದರ ಜೊತೆಗೆ ಕಾಂಗ್ರೆಸ್ ಕೈವಾಡ ಇದೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ದೊಡ್ಡವರು. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ತಿಹಾರ್ ಜೈಲಿಗೆ ಹೋಗಿ ಬಂದವರು. ಅವರ ಬಗ್ಗೆ ಮಾತಾಡಲು ನಾನು ಸಣ್ಣವನು, ಕನಕಪುರದ ಬಂಡೆ ಒಡೆದು ಸಾಗಿಸಿ ಭಷ್ಟಾಚಾರ ಮಾಡಿದವರ ಬಗ್ಗೆ ಮಾತಾಡುವಷ್ಟು ನಾನು ದೊಡ್ಡವನಲ್ಲ. ನಾನು ಹಳ್ಳಿ ಹೈದ ಎಂದು ತಿರುಗೇಟು ನೀಡಿದರು.
ನಾನು ಅಲ್ಪಸಂಖ್ಯಾತ ವಿರೋಧಿ ಅಲ್ಲ. ಬಿಜೆಪಿ ಮತ್ತು ಸರ್ಕಾರದ ವರ್ಚಸ್ಸು ಹಾಳು ಮಾಡಲು ಹಿಜಾಬ್ ವಿಚಾರ ತೆಗೆದುಕೊಂಡು ಮುಗ್ದ ವಿದ್ಯಾರ್ಥಿಗಳ ಮನಸ್ಸನ್ನು ಹಾಳು ಮಾಡಲಾಗಿದೆ ಎಂದರು.
ಈಗ ಜಮೀರ್, ಖಾದರ್, ತನ್ವೀರ್ ಸೇಠ್ ಎಲ್ಲರೂ ಮಾತನಾಡುತ್ತಾರೆ. ಹಿಂದೆ ತನ್ವೀರ್ ಸೇಠ್ ತಂದೆ ಅಜೀಜ್ ಸೇಠ್ ಕೋಮು ಗಲಭೆ ಸೃಷ್ಟಿ ಮಾಡಿಸಿ ಅವರ ಪಕ್ಷದ ಸಿಎಂ ಅನ್ನೇ ಕೆಳಗಿಳಿಸಿದರು. ಡಿ.ಕೆ. ಶಿವಕುಮಾರ್ ಗೆ ನನ್ನ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಮಾತಾಡಿದರೆ ಅದಕ್ಕೆ ಏನು ಮಾತಾಡಬೇಕು ಅಂತಾ ನನಗೆ ಚೆನ್ನಾಗಿ ಗೊತ್ತಿದೆ. ವೈಯಕ್ತಿಕ ಟೀಕೆ ಮಾಡಿದರೆ ನಾನು ನನ್ನದೇ ಭಾಷೆಯಲ್ಲಿ ಉತ್ತರ. ಶಿವಕುಮಾರ್ ಭ್ರಮಾಲೋಕದಲ್ಲಿ ಇರುವುದು ಬೇಡ ಎಂದರು.
ಸಮವಸ್ತ್ರ ಮೊದಲಿನಿಂದಲೂ ಇದೆ. ಕೇಸರಿ ಶಾಲು ಖರೀದಿ ಮಾಡುವುದು, ಕೊಡುವುದು ನಮ್ಮ ವೈಯಕ್ತಿಕ ವಿಚಾರ ಕಾಂಗ್ರೆಸ್ ದೇಶ ವಿರೋಧಿಗಳ ಪರವೋ ಅಲ್ಲವೋ ಎಂದು ಡಿಕೆ ಶಿವಕುಮಾರ್ ಸ್ಪಷ್ಟೀಕರಣ ಕೊಡಲಿ ಆಗ್ರಹಿಸಿದರು.
ಇದನ್ನೂ ಓದಿ:ಹೈಕೋರ್ಟ್ ಮೊದಲು ನಿರ್ಧರಿಸಲಿ; ಹಿಜಾಬ್ ಕೇಸ್ ಪ್ರವೇಶಕ್ಕೆ ನಿರಾಕರಿಸಿದ ಸುಪ್ರೀಂ
ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸಿದರೆಂದು ಕಾಂಗ್ರೆಸ್ ಹಸಿ ಸುಳ್ಳು ಹೇಳಿತು. ಸಾಂದರ್ಭಿಕವಾಗಿ ಮುಗ್ಧ ವಿದ್ಯಾರ್ಥಿಗಳು ಕೇಸರಿ ಧ್ವಜ ಹಾರಿಸಿದ್ದಾರೆ ದೇಶಪ್ರೇಮದಿಂದ ಕೇಸರಿ ಧ್ವಜ ಹಾರಿಸಿರಬಹುದು. ಮಕ್ಕಳಿಗೆ ಅರ್ಥ ಆಗಿಲ್ಲ. ಖಾಲಿ ಕಂಬಕ್ಕೆ ಕೇಸರಿ ಧ್ವಜ ಹಾರಿಸಿದ್ದಾರೆ. ಅದು ತಪ್ಪು ಅಂತಾ ನಾನು ಹೇಳಲಾಗದು. ರಾಷ್ಟ್ರ ಧ್ವಜದ ಗೌರವವನ್ನು ವಿದ್ಯಾರ್ಥಿಗಳು ಕಡಿಮೆ ಮಾಡಿಲ್ಲ. ಮುಗ್ಧ ಮಕ್ಕಳು ಏನೂ ಅರಿವಾಗದೇ ಕೇಸರಿ ಧ್ವಜ ಹಾರಿಸಿದ್ದಾರೆ. ಅದು ತಪ್ಪು ಸರಿಯೆಂದು ಹೇಳಲಾಗಲ್ಲ. ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಮುಗ್ಧರು. ಅಮಾಯಕ ವಿದ್ಯಾರ್ಥಿಗಳ ಶಿಕ್ಷಣ ಹಾಳಾಗಬಾರದು, ಸಮವಸ್ತ್ರ ಧರಿಸಿ ಶಾಲೆಗೆ ಬನ್ನಿ ಎಂದರು.
ಸಚಿವ ಸ್ಥಾನದ ವಿಚಾರದ ಬಗ್ಗೆ ಮಾತನಾಡಿದ ಅವರು, ಕಾದು ನೋಡೋಣ. ನಮ್ಮ ನಾಯಕರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮಾತಾಡಿದ್ದೇನೆ. ನಾಲ್ಕು ಗೋಡೆಯ ನಡುವಿನ ಮಾತುಕತೆ ಬಹಿರಂಗವಾಗಿ ಹೇಳಲ್ಲ ಎಂದರು.
ಪ್ರಿಯಾಂಕಾ ಗಾಂಧಿ ಬಿಕಿನಿ ಎಂದು ಮಾತನಾಡಿದ್ದು ತಪ್ಪು, ಅದರ ಬಗ್ಗೆ ಮಾತಾಡಿದ್ದೇನೆ. ಉಡುಪು ಮಹಿಳೆಯರ ವೈಯಕ್ತಿಕ ವಿಚಾರ, ಅದರ ಬಗ್ಗೆ ಮಾತನಾಡುವುದಿಲ್ಲ. ನಿನ್ನೆ ಮಾತಾಡುವಾಗ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದೇನೆ. ಸ್ತ್ರೀಯರ ಬಗ್ಗೆ ಬಿಜೆಪಿಗೆ, ಸರ್ಕಾರಕ್ಕೆ, ನನಗೆ ಅಪಾರ ಗೌರವ ಇದೆ ಎಂದು ರೇಣುಕಾಚಾರ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.