![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 16, 2021, 6:20 AM IST
ಬೆಂಗಳೂರು: ರಾಜ್ಯ ಸರಕಾರ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ವಿಶ್ವ ಬಂಡವಾಳ ಹೂಡಿಕೆ “ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮವನ್ನು 2022ರ ಫೆಬ್ರವರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಈ ಕುರಿತು ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
2022ರ ಫೆಬ್ರವರಿ 9ರಿಂದ 11ರ ವರೆಗೆ ಬೆಂಗಳೂರಿನ ಅರ ಮನೆ ಮೈದಾನದಲ್ಲಿ “ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗುವುದು. ವಿಶ್ವ ಮಟ್ಟದಲ್ಲಿ ಬಂಡವಾಳದಾರರನ್ನು ಸೆಳೆಯಲು ಕೈಗಾರಿಕಾ ಇಲಾಖೆ ರೋಡ್ ಮ್ಯಾಪ್ ಹಾಕಿ ಕೊಂಡಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ರಾಜ್ಯ ಸರಕಾರ ಇತ್ತೀಚೆಗೆ ಜಾರಿಗೆ ತಂದಿರುವ ನೂತನ ಕೈಗಾರಿಕಾ ನೀತಿ 2020- 25ರ ಅನ್ವಯ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಸೌಲಭ್ಯ ಹಾಗೂ ರಿಯಾಯಿತಿಗಳನ್ನು ನೀಡಲಾಗು ವುದು ಎಂದು ಅವರು ಹೇಳಿದರು. ಮಳೆಗಾಲದ ಅಧಿವೇಶನ ಕುರಿತು ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಸಂಪುಟದ ಪ್ರಮುಖ ನಿರ್ಧಾರಗಳು :
ಜೆಒಸಿ-ಪಿಯುಸಿ ತತ್ಸಮಾನ ಕೋರ್ಸ್:
ಜೆಒಸಿ ಕೋರ್ಸ್ ಅನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಬೇಕೆಂಬ ದೀರ್ಘ ಕಾಲದ ಆಗ್ರಹಕ್ಕೆ ಸರಕಾರ ಒಪ್ಪಿಗೆ ಸೂಚಿಸಿದೆ. ಇನ್ನು ಮುಂದೆ ಜೆಒಸಿ ಕೋರ್ಸ್ ಪೂರೈಸಿದವರು ಸರಕಾರಿ ಉದ್ಯೋಗಕ್ಕೆ ಅರ್ಜಿ
ಸಲ್ಲಿಸಲು ಅವಕಾಶ ಸಿಗಲಿದೆ. ವೃತ್ತಿ ಶಿಕ್ಷಣ (ಜಾಬ್ ಓರಿಯೆಂಟೆಡ್ ಕೋರ್ಸ್- ಜೆಒಸಿ) ಎಸೆಸೆಲ್ಸಿ ಬಳಿಕ 2 ವರ್ಷಗಳ ಕೋರ್ಸ್ ಆಗಿತ್ತು. 2010ರಲ್ಲಿ ಸರಕಾರ ಜೆಒಸಿಯನ್ನು ರದ್ದು ಮಾಡಿತ್ತು. ಅದರಂತೆ 2011ರಲ್ಲಿ ಜೆಒಸಿ ಕೋರ್ಸ್ ರಾಜ್ಯದಲ್ಲಿ ಸಂಪೂರ್ಣ ರದ್ದಾ ಗಿತ್ತು. ಪಿಯುಸಿಗೆ ತತ್ಸಮಾನ ಕೋರ್ಸ್ ಎಂದೇ ಕರೆಯಲಾಗುತ್ತಿತ್ತು. ಆದರೂ ಸರಕಾರಿ ಉದ್ಯೋಗಕ್ಕೆ ಜೆಒಸಿ ಅಭ್ಯರ್ಥಿಗಳನ್ನು ಪರಿಗಣಿಸುತ್ತಿರಲಿಲ್ಲ.
ಯೋಜನೆಗಳಿಗೆ ಹಣಕಾಸಿನ ಕೊರತೆ ಇಲ್ಲ :
ಪ್ರತಿ ಸಂಪುಟ ಸಭೆಯಲ್ಲೂ ಸಾವಿರಾರು ಕೋ. ರೂ. ಯೋಜನೆ ಗಳಿಗೆ ಅನುಮತಿ ದೊರೆ ಯುತ್ತಿದೆ. ಸರಕಾರದಲ್ಲಿ ಅಷ್ಟೊಂದು ಹಣ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿ ಯೊಂದು ಯೋಜನೆಯೂ ಸಂಪುಟಕ್ಕೆ ಬರುವ ಮೊದಲು ಹಣಕಾಸು ಇಲಾಖೆಯ ಅನುಮತಿ ಪಡೆದಿರುತ್ತವೆ. ಅಲ್ಲದೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದ ಕೂಡಲೇ ಹಣ ಬಿಡುಗಡೆ ಮಾಡುತ್ತಿಲ್ಲ. ಕಾಮಗಾರಿ ಪೂರ್ಣಗೊಂಡ ಬಳಿಕ ಹಣ ಬಿಡುಗಡೆ ಮಾಡ ಲಾಗುವುದು. ಹೀಗಾಗಿ ಹಣಕಾಸಿನ ಲಭ್ಯತೆ ಆಧಾರದಲ್ಲೇ ಯೋಜನೆಗಳಿಗೆ ಅನುಮತಿ ನೀಡಲಾಗುತ್ತಿದೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.