2022 ಫೆಬ್ರವರಿಯಲ್ಲಿ “ಇನ್ವೆಸ್ಟ್‌  ಕರ್ನಾಟಕ’


Team Udayavani, Jul 16, 2021, 6:20 AM IST

Untitled-1

ಬೆಂಗಳೂರು:  ರಾಜ್ಯ ಸರಕಾರ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ವಿಶ್ವ ಬಂಡವಾಳ ಹೂಡಿಕೆ “ಇನ್ವೆಸ್ಟ್‌ ಕರ್ನಾಟಕ’ ಕಾರ್ಯಕ್ರಮವನ್ನು  2022ರ ಫೆಬ್ರವರಿಯಲ್ಲಿ  ನಡೆಸಲು  ನಿರ್ಧರಿಸಲಾಗಿದೆ.

ಈ ಕುರಿತು ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

2022ರ ಫೆಬ್ರವರಿ 9ರಿಂದ 11ರ ವರೆಗೆ ಬೆಂಗಳೂರಿನ ಅರ ಮನೆ ಮೈದಾನದಲ್ಲಿ “ಇನ್ವೆಸ್ಟ್‌ ಕರ್ನಾಟಕ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗುವುದು. ವಿಶ್ವ ಮಟ್ಟದಲ್ಲಿ ಬಂಡವಾಳದಾರರನ್ನು ಸೆಳೆಯಲು ಕೈಗಾರಿಕಾ ಇಲಾಖೆ ರೋಡ್‌ ಮ್ಯಾಪ್‌ ಹಾಕಿ ಕೊಂಡಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ರಾಜ್ಯ ಸರಕಾರ ಇತ್ತೀಚೆಗೆ ಜಾರಿಗೆ ತಂದಿರುವ ನೂತನ ಕೈಗಾರಿಕಾ ನೀತಿ 2020- 25ರ ಅನ್ವಯ ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಸೌಲಭ್ಯ ಹಾಗೂ ರಿಯಾಯಿತಿಗಳನ್ನು ನೀಡಲಾಗು ವುದು ಎಂದು ಅವರು ಹೇಳಿದರು.  ಮಳೆಗಾಲದ ಅಧಿವೇಶನ  ಕುರಿತು ಮುಂದಿನ ದಿನಗಳಲ್ಲಿ  ಚರ್ಚೆ ನಡೆಸಲಾಗುವುದು ಎಂದರು.

ಸಂಪುಟದ ಪ್ರಮುಖ ನಿರ್ಧಾರಗಳು :

  • ಕೌಶಲ ಅಭಿವೃದ್ಧಿ ಅಡಿಯಲ್ಲಿ ಜರ್ಮನ್‌ ಟೆಕ್ನಾಲಜಿ ಟ್ರೈನಿಂಗ್‌ ಇನ್‌ಸ್ಟಿಟ್ಯೂಟ್‌ಗೆ ಕಟ್ಟಡ ನಿರ್ಮಾಣಕ್ಕೆ ಮಂಗಳೂರಿನಲ್ಲಿ23 ಕೋಟಿ  ಮತ್ತು ಬೆಳಗಾವಿಯಲ್ಲಿ  16 ಕೋ.ರೂ. ವೆಚ್ಚದಲ್ಲಿ  ಕಟ್ಟಡ ನಿರ್ಮಾಣಕ್ಕೆ ಒಪ್ಪಿಗೆ.
  • ನೇತ್ರಾವತಿಗೆ ಅಡ್ಡಲಾಗಿ ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಬ್ರಿಡ್ಜ್  ಕಂ ಬ್ಯಾರೇಜ್‌ ನಿರ್ಮಾಣಕ್ಕೆ 66 ಕೋ. ರೂ.ಗೆ ಅನುಮೋದನೆ.
  • ಗದಗ ಪಶು ಸಂಗೋಪನ ಕಾಲೇಜಿನ ಎರಡನೇ ಹಂತ ಕಾಮಗಾರಿಗೆ 30 ಕೋ.ರೂ. ಹೆಚ್ಚುವರಿ ಅನುದಾನಕ್ಕೆ ಒಪ್ಪಿಗೆ.
  • ದೇವದುರ್ಗ ಎಂಜನಿಯರಿಂಗ್‌ ಕಾಲೇಜಿಗೆ 58 ಕೋ. ರೂ. ಬಿಡುಗಡೆಗೆ ತೀರ್ಮಾನ.
  • ಕೆ.ಎಸ್‌.ಎಫ್.ಸಿ. ಕಟ್‌ ಬಾಕಿ ಆಗಿರುವವರಿಗೆ ಅನುಕೂಲ ಕಲ್ಪಿಸಲು ಕ್ರಮ.
  • ಕಾರಾಗೃಹ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ತೀರ್ಮಾನ.
  • 139 ಕೈದಿಗಳನ್ನು ಸನ್ನಡತೆ ಅಧಾರದ ಮೇಲೆ ಬಿಡುಗಡೆಗೆ ಶಿಫಾರಸು ಮಾಡಲು ಒಪ್ಪಿಗೆ.
  • 2019ರಲ್ಲಿ ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಪರಿ ಹಾರ ನೀಡಲು ಅನುಮೋದನೆ.
  • ಕಂದಾಯ ಇಲಾಖೆಯಲ್ಲಿ ವಿವಿಧ ವೃಂದದ  ಸಿಬಂದಿಗೆ ಸಾಮಾನ್ಯ ಹಿರಿತನ ಆಧಾರದಲ್ಲಿ ಭಡ್ತಿ ನೀಡಲು ಅನುಮತಿ. 3,059 ಎಸ್‌ಡಿಎ, 9,843 ವಿಎ ಹಾಗೂ 2,450 ಎಫ್ಡಿಎ ಹುದ್ದೆಗಳಿವೆ.
  • ಬಳ್ಳಾರಿಯ ಶಿರಗುಪ್ಪ  ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲು46 ಕೋ.ರೂ. ಬಿಡುಗಡೆ.
  • ರಾಣೆಬೆನ್ನೂರಿನ 18 ಕೆರೆಗಳನ್ನು ತುಂಬಿಸಲು 206 ಕೋ.ರೂ. ಯೋಜನೆಗೆ ಒಪ್ಪಿಗೆ.

 ಜೆಒಸಿ-ಪಿಯುಸಿ ತತ್ಸಮಾನ ಕೋರ್ಸ್‌:

ಜೆಒಸಿ ಕೋರ್ಸ್‌ ಅನ್ನು ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಬೇಕೆಂಬ ದೀರ್ಘ‌ ಕಾಲದ ಆಗ್ರಹಕ್ಕೆ ಸರಕಾರ ಒಪ್ಪಿಗೆ ಸೂಚಿಸಿದೆ.  ಇನ್ನು ಮುಂದೆ ಜೆಒಸಿ ಕೋರ್ಸ್‌ ಪೂರೈಸಿದವರು  ಸರಕಾರಿ ಉದ್ಯೋಗಕ್ಕೆ ಅರ್ಜಿ

ಸಲ್ಲಿಸಲು ಅವಕಾಶ ಸಿಗಲಿದೆ.  ವೃತ್ತಿ ಶಿಕ್ಷಣ (ಜಾಬ್‌ ಓರಿಯೆಂಟೆಡ್‌ ಕೋರ್ಸ್‌- ಜೆಒಸಿ) ಎಸೆಸೆಲ್ಸಿ ಬಳಿಕ 2 ವರ್ಷಗಳ ಕೋರ್ಸ್‌ ಆಗಿತ್ತು. 2010ರಲ್ಲಿ  ಸರಕಾರ ಜೆಒಸಿಯನ್ನು ರದ್ದು ಮಾಡಿತ್ತು. ಅದರಂತೆ 2011ರಲ್ಲಿ ಜೆಒಸಿ ಕೋರ್ಸ್‌ ರಾಜ್ಯದಲ್ಲಿ ಸಂಪೂರ್ಣ ರದ್ದಾ ಗಿತ್ತು.  ಪಿಯುಸಿಗೆ ತತ್ಸಮಾನ ಕೋರ್ಸ್‌ ಎಂದೇ ಕರೆಯಲಾಗುತ್ತಿತ್ತು. ಆದರೂ ಸರಕಾರಿ ಉದ್ಯೋಗಕ್ಕೆ  ಜೆಒಸಿ  ಅಭ್ಯರ್ಥಿಗಳನ್ನು ಪರಿಗಣಿಸುತ್ತಿರಲಿಲ್ಲ.

ಯೋಜನೆಗಳಿಗೆ ಹಣಕಾಸಿನ ಕೊರತೆ ಇಲ್ಲ :

ಪ್ರತಿ ಸಂಪುಟ ಸಭೆಯಲ್ಲೂ ಸಾವಿರಾರು ಕೋ. ರೂ. ಯೋಜನೆ ಗಳಿಗೆ  ಅನುಮತಿ ದೊರೆ ಯುತ್ತಿದೆ.  ಸರಕಾರದಲ್ಲಿ ಅಷ್ಟೊಂದು ಹಣ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿ ಯೊಂದು ಯೋಜನೆಯೂ ಸಂಪುಟಕ್ಕೆ ಬರುವ ಮೊದಲು ಹಣಕಾಸು ಇಲಾಖೆಯ ಅನುಮತಿ ಪಡೆದಿರುತ್ತವೆ. ಅಲ್ಲದೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಿದ ಕೂಡಲೇ ಹಣ ಬಿಡುಗಡೆ ಮಾಡುತ್ತಿಲ್ಲ. ಕಾಮಗಾರಿ ಪೂರ್ಣಗೊಂಡ ಬಳಿಕ ಹಣ ಬಿಡುಗಡೆ ಮಾಡ ಲಾಗುವುದು. ಹೀಗಾಗಿ ಹಣಕಾಸಿನ ಲಭ್ಯತೆ ಆಧಾರದಲ್ಲೇ ಯೋಜನೆಗಳಿಗೆ ಅನುಮತಿ ನೀಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.