Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್
ಸಿಎಂ, ಗೃಹ ಸಚಿವರ ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧಾರ
Team Udayavani, Sep 20, 2024, 11:43 PM IST
ಬೆಂಗಳೂರು: ಬಿಜೆಪಿ ಅವಧಿಯಲ್ಲಿ ನಡೆದ ಅಕ್ರಮಗಳ ತನಿಖೆ ನಡೆಸುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳಿಗೆ ಪೂರಕವಾಗಿ ಈ ಹಿಂದೆ ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಅವಧಿಯಲ್ಲಿನ ಹಗರಣಗಳ ತನಿಖೆ ನಡೆಸುವಂತೆ ಒತ್ತಾಯಿಸಿರುವ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಈ ಸಂಬಂಧ ಖುದ್ದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ| ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಮುಂದಾಗಿದ್ದಾರೆ.
ಆರಗ ಜ್ಞಾನೇಂದ್ರ ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ನಡೆದಿವೆ. ಪಿಎಸ್ಐ ನೇಮಕಾತಿ ಹಗರಣದಿಂದ, ಬಿಟ್ ಕಾಯಿನ್ ಹಗರಣದಿಂದ ಹಿಡಿದು ಕಳಪೆ ಕಟ್ಟಡ ಕಾಮಗಾರಿಗಳವರೆಗೂ ಇವು ನಡೆದಿವೆ. ಈ ವಿಚಾರಗಳನ್ನು ಮುಖ್ಯಮಂತ್ರಿ, ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ, ಗಮನ ಸೆಳೆಯಲಾಗುವುದು ಎಂದು ಕಿಮ್ಮನೆ ರತ್ನಾಕರ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪಿಎಸ್ಐ ಹಗರಣದ ತನಿಖೆ ವೇಳೆ ಏಕೆ ಇವರನ್ನು ವಿಚಾರಣೆ ಮಾಡಿಲ್ಲ ಎನ್ನುವುದೇ ಆಶ್ಚರ್ಯ. ಅಲ್ಲದೆ ಸ್ಯಾಂಟ್ರೋ ರವಿ, ದಿವ್ಯಾ ಹಾಗರಗಿ ಸೇರಿ ಹಗರಣದ ಪ್ರಮುಖ ಆರೋಪಿಗಳು ತೀರ್ಥಹಳ್ಳಿಗೆ ಬಂದುಹೋಗಿದ್ದಾರೆ ಎನ್ನುವ ಮಾಹಿತಿ ಇದೆ. ಇದರ ಬಗ್ಗೆಯೂ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.