![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 31, 2024, 11:24 PM IST
ಬೆಂಗಳೂರು: ಕೇವಲ 38 ಸ್ಥಾನ ಗೆದ್ದವರಿಗೆ ಐದು ವರ್ಷ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದು ವಿಷವೇ? ಅವರಿಗೆ ಹೆಗಲುಗೊಟ್ಟು ಹಗಲಿರುಳು ಹೋರಾಡಿದ್ದು ವಿಷವೇ? ಅಮೃತ ಕೊಟ್ಟವರಿಗೆ ವಿಷ ಕೊಟ್ಟರು ಎನ್ನುತ್ತಾರೆ. ನಾವೆಲ್ಲಿ ಬೆನ್ನಿಗೆ ಚೂರಿ ಹಾಕಿದ್ದೇವೆ? ನಾನು ಏನು ಮಾಡಿದ್ದೇನೆ ಎಂಬುದು ಜೆಡಿಎಸ್ ಕಾರ್ಯಕರ್ತರಿಗೆ ಗೊತ್ತಿದೆ…
-ಜೆಡಿಎಸ್ ನಾಯಕರ ಬೆನ್ನಿಗೆ ಚೂರಿ ಹಾಕಿದರು ಎಂಬ ಆರೋಪಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ಇದು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರವನ್ನು ಬೀಳಿಸಿದ ಬಿಜೆಪಿ ನಾಯಕರ ಜತೆಗೆ ತಬ್ಟಾಡುತ್ತಿದ್ದಾರೆ. ಇದನ್ನು ಆ ಮತದಾರರೇ ತೀರ್ಮಾನ ಮಾಡಬೇಕು ಎಂದರು.
ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಲ್ಲಿನ ಜನಕ್ಕೆ ಡಿ.ಕೆ.ಸುರೇಶ್ ಏನು ಎಂಬುದು ಗೊತ್ತಿದೆ. ಅಮಿತ್ ಶಾ ಬಂದರೆ ಬಲ ಬರಬಹುದು ಎಂದು ಮಾಡುತ್ತಿದ್ದಾರೆ.
ಇಬ್ಬರೂ ಸೇರಿ ಕಾರ್ಯಕರ್ತರ ಸಭೆ ಯಾಕೆ ಮಾಡಲಿಲ್ಲ? ಇವರಿಬ್ಬರೂ ಒಂದಾದ ತತ್ಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ? ರಾಮನಗರ ಹಾಗೂ ಮಂಡ್ಯ ಜಿಲ್ಲೆ ರಾಜಕಾರಣ ನೋಡಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ ಬಾರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಡಿದ ಮಾತು, ಹೇಳಿದ ವಿಚಾರ, ನಡೆದುಕೊಂಡ ರೀತಿ ನೋಡಿದರೆ ಈಗ ಪರಿಸ್ಥಿತಿ ಬದಲಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ನಿಖೀಲ್ ಪರ ಪ್ರಚಾರ ಮಾಡುವಂತೆ ಚಲುವರಾಯಸ್ವಾಮಿಗೆ ಆಹ್ವಾನ ನೀಡಿ ಎಂದು ಹೇಳಿದೆ. ಅನಿತಾ ಕುಮಾರಸ್ವಾಮಿ ಕೂಡ ಚಲುವರಾಯಸ್ವಾಮಿ ಮನೆಗೆ ಹೋಗಲು ಸಿದ್ಧರಿದ್ದರು. ಆದರೆ ಕುಮಾರಸ್ವಾಮಿ ಅವರು ಚಲುವರಾಯಸ್ವಾಮಿ ಮನೆಗೆ ಹೋಗುವುದು ಬೇಡ ಎಂದಿದ್ದರು. ಈಗ ಕುಮಾರಸ್ವಾಮಿ ಎಲ್ಲರ ಮನೆಗೆ ಹೋಗಲು ಸಿದ್ಧ ಎಂದು ಹೇಳುತ್ತಿದ್ದಾರೆ. ಅವರಲ್ಲಿ ಆಗಿರುವ ಪರಿವರ್ತನೆಯಿಂದ ಬಹಳ ಸಂತೋಷವಾಗಿದೆ ಎಂದು ಹೇಳಿದರು.
ಬಿಜೆಪಿ ದುರ್ಬಲ ತಂತ್ರಗಾರಿಕೆ
ಬಿಜೆಪಿ ಈಗ ಗೊಂದಲದ ಗೂಡಾಗಿದೆ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲು, ಪ್ರತಾಪಸಿಂಹ ಸಹಿತ ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಏಕಾಏಕಿ ಕೈಬಿಟ್ಟಿದ್ದಾರೆ. 40 ವರ್ಷ ರಾಜಕಾರಣ ಮಾಡಿಕೊಂಡು ಬಂದವರನ್ನು ಈ ರೀತಿ ಕೈಬಿಟ್ಟರೆ ಹೇಗೆ? ಬಿಜೆಪಿ ದುರ್ಬಲ ತಂತ್ರಗಾರಿಕೆ ಮಾಡಿದೆ. ನಮ್ಮ ಪಕ್ಷ ಭವಿಷ್ಯದಲ್ಲಿ 30-40 ವರ್ಷಗಳ ಕಾಲ ರಾಜಕಾರಣ ಮಾಡಬಲ್ಲ ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದೇವೆ. ಇವರು ರಾಜಕೀಯವಾಗಿ ಪಕ್ಷಕ್ಕೆ ಅಡಿಪಾಯ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಪ್ಪ-ಮಗಳನ್ನು ದೂರ ಮಾಡಿದ ಅಪವಾದ ಬೇಡ
ನಿಶಾ ಯೋಗೇಶ್ವರ ನಮ್ಮ ಮನೆ ಮಗಳಂತೆ. ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ರಾಜಕೀಯಕ್ಕೆ ಅಪ್ಪ-ಮಗಳನ್ನು ದೂರ ಮಾಡಿದ ಅಪವಾದ ಬೇಡ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಆಕೆ ವಿವಾಹವಾಗಿ ಬೇರೆ ಕುಟುಂಬಕ್ಕೆ ಸೇರಿದ್ದರೆ ನಾವು ಇಷ್ಟು ಆಲೋಚನೆ ಮಾಡುತ್ತಿರಲಿಲ್ಲ. ಹೀಗಾಗಿ ನಾನು, ನನ್ನ ಸಹೋದರ ಈ ವಿಚಾರವಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ. ನಿಶಾ ದೊಡ್ಡ ಧೈರ್ಯ ಮಾಡಿರುವಂತೆ ಕಾಣು
ತ್ತಿದೆ. ಕಾಂಗ್ರೆಸ್ನಲ್ಲೇ ಕೆಲಸ ಮಾಡುತ್ತೇನೆ ಎಂದು ಆಕೆ ತೀರ್ಮಾನಿಸಿದರೆ ಆಕೆಯನ್ನು ಹೊರದಬ್ಬಲು ಆಗುವುದಿಲ್ಲ. ಹೀಗಾಗಿ ಸ್ಥಳೀಯ ನಾಯಕರ ಜತೆ ಚರ್ಚಿಸುತ್ತೇನೆ ಎಂದು ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.