![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 5, 2024, 12:37 AM IST
ಬೆಂಗಳೂರು: ಲೋಕಸಭಾ ಚುನಾ ವಣೆಯ ಫಲಿತಾಂಶ ರಾಜ್ಯ ಕಾಂಗ್ರೆಸ್ ಸರಕಾರದ ಮೇಲೆ ಚಾಚಿದ್ದ ಪತನ ಭೀತಿಯನ್ನು ನಿವಾಳಿಸಿ ಹಾಕಿದ್ದು, ಸದ್ಯಕ್ಕೆ ಸೇಫ್ ಝೋನ್ಗೆ ತಂದು ನಿಲ್ಲಿಸಿದೆ. ಆದರೆ ಗ್ಯಾರಂಟಿ ಯಿಂದಲೇ ಎಲ್ಲವನ್ನೂ ಗೆಲ್ಲಬಹು ದೆಂಬ ಭ್ರಮೆಗೆ ಮತದಾರ ಬಲವಾದ ಪೆಟ್ಟು ನೀಡಿದ್ದು ಸರಕಾರ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗಲಿದೆ.
ಒಂದೊಮ್ಮೆ ಬಿಜೆಪಿ ನಿರೀಕ್ಷಿಸಿದಷ್ಟು ಸ್ಥಾನಗಳು ಲೋಕಸಭಾ ಚುನಾವಣೆಯಲ್ಲಿ ದಕ್ಕಿದ್ದರೆ ರಾಜ್ಯ ಸರಕಾರವನ್ನು ಕೆಡಗುವ ಅಥವಾ ಅತಂತ್ರಗೊಳಿಸುವ ಅಥವಾ ಬೇರೆ ಕಾರಣಗಳಿಗಾಗಿ ಕಾಡುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಎನ್ಡಿಎ ಬಲ 300 ತಲುಪದೇ ಇರುವುದರಿಂದ ಯಾವುದೇ ರಾಜ್ಯ ಸರಕಾರವನ್ನು ಪತನಗೊಳಿ ಸುವ ಸಾಹಸಕ್ಕೆ ಬಿಜೆಪಿ ಕೈ ಹಾಕುವ ಸಾಧ್ಯತೆ ಕ್ಷೀಣವಾಗಿದೆ. ಮಹಾರಾಷ್ಟ್ರದ ಪ್ರಯೋಗವನ್ನು ಕರ್ನಾಟಕದಲ್ಲಿ ನಡೆಸುವುದಕ್ಕೆ ಸಂಘ-ಪರಿವಾರದ ಹಿರಿಯರು ಹಾಗೂ ಬಿಜೆಪಿ ವರಿಷ್ಠರು ಇನ್ನು ಮುಂದೆ ಒಪ್ಪಿಗೆ ನೀಡಲಿಕ್ಕಿಲ್ಲ.
ಪಕ್ಷಕ್ಕೆ ಎಚ್ಚರಿಕೆ ಗಂಟೆ
ಹೀಗಾಗಿ ತನ್ನದೇ ಆದ ಸ್ವಯಂಕೃತಾ ಪರಾಧ ಗಳು ಕಾಂಗ್ರೆಸ್ ಸರಕಾರಕ್ಕೆ ಮುಳು ವಾಗಬಹುದೇ ವಿನಾ ಬಿಜೆಪಿಯಿಂದ ಸದ್ಯಕ್ಕಂತೂ ಅಪಾಯ ನಿರೀಕ್ಷೆ ಮಾಡುವಂತಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಮಾಡಿರುವ ಸಾಧನೆ ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷಕ್ಕೆ ಎಚ್ಚರಿಕೆ ಗಂಟೆ. ಒಕ್ಕಲಿಗ ಮತಗಳು ಕಾಂಗ್ರೆಸ್ ತೆಕ್ಕೆಯಿಂದ ಅಲ್ಪಾವಧಿಯಲ್ಲಿ ಜಾರಿದೆ ಎಂಬುದಕ್ಕೆ ಇದು ದೃಷ್ಟಾಂತವಾ ಗಿದ್ದು, ಹೊಸ ಸಮೀಕರಣ ಸಾಧ್ಯತೆಯ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಬೇಕಾಗಲಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 1 ಸ್ಥಾನವನ್ನು ಮಾತ್ರ ಗಳಿಸಿತ್ತು. ಆದರೆ ಆಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿತ್ತು. ಆದರೆ 2014ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದ ಸಂದರ್ಭದಲ್ಲಿ ಕಾಂಗ್ರೆಸ್ 9 ಸ್ಥಾನ ಗಳಿಸಿತ್ತು. ಇಡೀ ದೇಶದಲ್ಲಿ ಕಾಂಗ್ರೆಸ್ಗೆ ಲಭಿಸಿದ ದೊಡ್ಡ ವಿಜಯ ಇದಾಗಿತ್ತು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.