BJP ಬಿಡುವುದಿಲ್ಲ: ಮುನಿರತ್ನ
ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ್ದು ನಿಜ
Team Udayavani, Aug 16, 2023, 11:34 PM IST
ಬೆಂಗಳೂರು: ಕ್ಷೇತ್ರದ ವಿಚಾರದ ಬಗ್ಗೆ ಮಾತನಾಡಲು ನಾನು ಉಪ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದು ನಿಜ. ನಾನೇನು ಕದ್ದುಮುಚ್ಚಿ ಭೇಟಿಯಾದದ್ದಲ್ಲ. ಈ ವಿಚಾರವನ್ನು ಶಿವಕುಮಾರ್ ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುವುದು ಬೇಡ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ಬೇಕಾದರೂ ಪಡೆದೇನು. ಆದರೆ ಮರಳಿ ಕಾಂಗ್ರೆಸ್ಗೆ ಹೋಗುವುದಿಲ್ಲ. ನಮ್ಮ ಜತೆ ಬಂದವರು ಯಾರೂ ಹೋಗುತ್ತಾರೋ ಇಲ್ಲವೋ ನನಗೆ ಗೊತ್ತಿಲ್ಲ ಎಂದರು.
ಡಿ.ಕೆ.ಶಿವಕುಮಾರ್ ಅವರು ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳವ ಅಗತ್ಯವಿಲ್ಲ. ಅವರು ನನ್ನ ಸ್ಪಷ್ಟನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಉತ್ತರ ಕೊಡುತ್ತಾರಾ? ಅಥವಾ ಬೆಂಗಳೂರು ನಗರದ ಉಸ್ತುವಾರಿಯಾಗಿ ಉತ್ತರ ಕೊಡುತ್ತಾರಾ ಎಂಬುದನ್ನು ಮೊದಲು ಹೇಳಲಿ. ಬಿಜೆಪಿ ಶಾಸಕರಿಗೆ ಅನುದಾನ ಕೊಡುವುದನ್ನು ಇತ್ಯರ್ಥ ಮಾಡುವುದಕ್ಕೆ ಮುನ್ನ ಕಾಂಗ್ರೆಸ್ನ 12 ಜನರು ಬೆಂಗಳೂರಿನಲ್ಲಿ ಗೆದ್ದಿದ್ದಾರೆ. ಅವರಿಗೆ ಅನುದಾನ ನೀಡಲಿ ಎಂದು ಸವಾಲು ಹಾಕಿದರು.
ಎಸ್.ಟಿ.ಸೋಮಶೇಖರ್ಗೆ ಶಿವಕುಮಾರ್ ರಾಜಕೀಯ ಗುರುವಾಗಿರಬಹುದು. ನನಗೆ ರಾಜಕೀಯ ಗುರು ಬಿ.ಕೆ. ಹರಿಪ್ರಸಾದ್. ಕೇವಲ ರಾಜಕೀಯ ಗುರು ಮಾತ್ರ ಅಲ್ಲ. ನನಗೆ ಎಲ್ಲವೂ ಬಿ.ಕೆ.ಹರಿಪ್ರಸಾದ್ ಅವರೇ ಎಂದರು. ಕಾಂಗ್ರೆಸ್ ಸರಕಾರ ಬಂದ ಬಳಿಕ ರಾಜರಾಜೇಶ್ವರಿ ನಗರ ಹಾಗೂ ಮಲ್ಲೇಶ್ವರಂ ಕ್ಷೇತ್ರಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದರಲ್ಲಿ ಅನುಮಾನ ಇಲ್ಲ. ಶಿವಕುಮಾರ್ ಡಿಸಿಎಂ ಆದ ಬಳಿಕ 14 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಾಜರಾಜೇಶ್ವರಿನಗರ ಕ್ಷೇತ್ರದ ಅಭಿವೃದ್ಧಿಗಾಗಿ ನಾನು ಜೈಲಿಗೆ ಹೋಗುವುದಕ್ಕೂ ಸಿದ್ಧ ಎಂದು ಮುನಿರತ್ನ ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್ ಆಧಾರಿತ ಹಾಜರಾತಿ?
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.