Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

ಮಾಜಿ ಮುಖ್ಯಮಂತ್ರಿಗೆ ಹೊಸ ಜವಾಬ್ದಾರಿ ವಹಿಸಿದ ಕಾಂಗ್ರೆಸ್‌

Team Udayavani, Sep 29, 2023, 6:55 AM IST

Congress ಜಗದೀಶ್‌ ಶೆಟ್ಟರ್‌ಗೆ ಆಪರೇಷನ್‌ ಹಸ್ತದ ಹೊಣೆ

ಬೆಂಗಳೂರು: ಬಿಜೆಪಿ- ಜೆಡಿಎಸ್‌ ಮೈತ್ರಿಯಿಂದ ಅಸಮಾಧಾನ ಗೊಂಡಿರುವ ಬಿಜೆಪಿಯ ಮಾಜಿ ಶಾಸಕರನ್ನು ಸೆಳೆಯುವುದಕ್ಕೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್‌ ಮುಂದಾಗಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್‌ ಸೂಚನೆ ಮೇರೆಗೆ ಶೆಟ್ಟರ್‌ ಆಪರೇಷನ್‌ ಹಸ್ತಕ್ಕೆ ಹೊರಟಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಕಾರ್ಯಾಚರಣೆ ನಡೆಸುವಂತೆ ಶೆಟ್ಟರ್‌ಗೆ ಸೂಚಿಸಲಾಗಿದೆ. ಶೆಟ್ಟರ್‌ ಮೂಲಕ ಲೋಕಸಭಾ ಚುನಾವಣಾ ಸಂದರ್ಭದಲ್ಲಾದರೂ ಕೆಲವು ಶಾಸಕರು, ಲಿಂಗಾಯತ ಮುಖಂಡರನ್ನು ಸೆಳೆಯಬಹುದು ಎಂಬ ನಿರೀಕ್ಷೆ ಕಾಂಗ್ರೆಸ್‌ನದು.

ಕಮಲ-ದಳ ಮೈತ್ರಿ ಅಂತಿಮಗೊಂಡ ಅನಂತರ ಬಿಜೆಪಿಯ ಹಲವು ಮಾಜಿ ಶಾಸಕರು, ವಿಧಾನಸಭಾ ಚುನಾವಣೆ ವೇಳೆ ವಲಸೆ ಬಂದವರು ಅಸಮಾಧಾನ ಗೊಂಡಿದ್ದಾರೆ. ಅವರನ್ನು ಸೆಳೆಯುವ ಬಗ್ಗೆ ಶಿವಕುಮಾರ್‌ ಹಾಗೂ ಶೆಟ್ಟರ್‌ ಚರ್ಚೆ ನಡೆಸಿದ್ದು, ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ಎಂ.ಪಿ. ಕುಮಾರ ಸ್ವಾಮಿ ಅವರನ್ನು ಡಿಸಿಎಂ ಡಿ.ಕೆ. ಶಿವ ಕುಮಾರ್‌ ಬಳಿಗೆ ಶೆಟ್ಟರ್‌ ಕರೆದೊಯ್ದು ಮಾತುಕತೆ ನಡೆಸಿದ್ದಾರೆ.

ಮಾಜಿ ಸಚಿವ ಶಂಕರ್‌ ಪಾಟೀಲ್‌ ಮುನೇನಕೊಪ್ಪ, ಬೈಲಹೊಂಗಲದ ಮಾಜಿ ಶಾಸಕ ಜಗದೇಶ್‌ ಮೆಟಗುಡ್ಡ, ಬೆಳಗಾವಿ ಮಾಜಿ ಶಾಸಕರಾದ ಅನಿಲ್‌ ಬೆನಕೆ, ಸಂಜಯ್‌ ಪಾಟೀಲ್‌ ಅವರ ಮನವೊಲಿಸಲು ಶೆಟ್ಟರ್‌ ಮುಂದಾಗಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಸುಕುಮಾರ ಶೆಟ್ಟಿ ಪಕ್ಷ ತ್ಯಾಗ ಪ್ರಕರಣದ ಹಿಂದೆಯೂ ಶೆಟ್ಟರ್‌ ಪಾತ್ರವಿತ್ತು ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯ ಅಂತರ ಯಾಕೆ?
ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷದ ಸಂಘಟನ ವ್ಯವಸ್ಥೆ ಹಾಗೂ ಸರಕಾರದ ವಿದ್ಯಮಾನದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಿದ್ದರಾಮಯ್ಯ ಪೂರ್ಣ ಪ್ರಮಾಣದಲ್ಲಿ ಒಪ್ಪಿಗೆ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಶೆಟ್ಟರ್‌ ಪಕ್ಷ ಸೇರ್ಪಡೆ ತರಾತುರಿಯಲ್ಲಿ ಆದ ಕಾರಣ ಪಕ್ಷದಲ್ಲಿ ಅವರ ಪಾತ್ರ ಇನ್ನೂ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಸಿದ್ದರಾಮಯ್ಯ ಜತೆಗೆ ಕಾಂಗ್ರೆಸ್‌ನ ಹಲವು ಲಿಂಗಾಯತ ಮುಖಂಡರೂ ಶೆಟ್ಟರ್‌ ವಿಚಾರದಲ್ಲಿ ಅರೆಮನಸ್ಸು ಹೊಂದಿರುವುದರಿಂದ ಶೆಟ್ಟರ್‌ ಕಾಂಗ್ರೆಸ್‌ನಲ್ಲಿದ್ದರೂ ಸದಾ ಬಿಜೆಪಿ ನಾಯಕತ್ವದ ಬಗ್ಗೆ ಮಾತನಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಬಿಜೆಪಿ-ಜೆಡಿಎಸ್‌ ಮೈತ್ರಿ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಡಿ.ಕೆ. ಶಿವಕುಮಾರ್‌ ಅವರು ಶೆಟ್ಟರ್‌ಗೆ ಹೊಸ ಜವಾಬ್ದಾರಿ ನೀಡಿದ್ದಾರೆ. ಶೆಟ್ಟರ್‌ ಮೂಲಕ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರನ್ನು ಸೆಳೆದು ಸಂಘಟನಾತ್ಮಕವಾಗಿ ಹೊಡೆತ ಕೊಡಬಹುದೆಂಬುದು ಶಿವಕುಮಾರ್‌ ಲೆಕ್ಕಾಚಾರ.

ಕಾಡುತ್ತಿರುವ “ಟೇಕಾಫ್’ ಟೀಕೆ
ಶೆಟ್ಟರ್‌ ಈ ಹಿಂದೆ ವಿಪಕ್ಷ ನಾಯಕರಾಗಿದ್ದ ಅವಧಿಯುದ್ದಕ್ಕೂ “ಸಿದ್ದರಾಮಯ್ಯ ಸರಕಾರ ಟೇಕಾಫ್ ಆಗಿಲ್ಲ’ ಎಂದು ಆರೋಪಿಸುತ್ತಿದ್ದರು. ಇದು ಸಿದ್ದರಾಮಯ್ಯನವರಿಗೆ ಕಿರಿಕಿರಿ ಉಂಟು ಮಾಡಿತ್ತು. ಜತೆಗೆ ಅರ್ಕಾವತಿ ರೀಡು ಪ್ರಕರಣವನ್ನು ಶೆಟ್ಟರ್‌ ಸದನದಲ್ಲಿ ಪ್ರಸ್ತಾವಿಸಿದ್ದು ಸಿದ್ದರಾಮಯ್ಯ ಅವರ ಪಾಲಿಗೆ ಮಾಸದ ಗಾಯವಾಗಿಯೇ ಉಳಿದಿದೆ. ಹೀಗಾಗಿ ಶೆಟ್ಟರ್‌ ಜತೆ ಅವರು ಪ್ರಜ್ಞಾಪೂರ್ವಕ ಅಂತರ ಕಾಯ್ದುಕೊಂಡಿದ್ದಾರೆ. ಆದರೆ ತಮ್ಮ ಜತೆಗೊಬ್ಬ ಪ್ರಬಲ ಲಿಂಗಾಯತ ನಾಯಕ ಇದ್ದಾರೆ ಎಂಬ ಸಂದೇಶ ಸಾರುವುದಕ್ಕಾಗಿ ಡಿ.ಕೆ. ಶಿವಕುಮಾರ್‌ ಅವರು ಶೆಟ್ಟರ್‌ ಅವರಿಗೆ ಆದ್ಯತೆ ಕಲ್ಪಿಸುತ್ತಿದ್ದಾರೆ ಎಂಬುದು ಕಾಂಗ್ರೆಸಿಗರ ಅಂಬೋಣ.

ಮೌನವಾದ ಸುಕುಮಾರ್‌ ಶೆಟ್ಟಿ ?
ಈ ಮಧ್ಯೆ ಬೈಂದೂರಿನ ಮಾಜಿ ಶಾಸಕ ಸುಕುಮಾರ್‌ ಶೆಟ್ಟಿಯವರು ಕಾಂಗ್ರೆಸ್‌ ವಲಸೆಗೆ ತಾತ್ಕಾಲಿಕ ವಿರಾಮ ಹಾಕಿದ್ದಾರೆ ಎನ್ನಲಾಗುತ್ತಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡದ ಬಿಜೆಪಿ ನಿಯೋಗ ಇತ್ತೀಚೆಗೆ ಸುಕುಮಾರ್‌ ಶೆಟ್ಟಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಅವರು ತಟಸ್ಥವಾಗಿ ಉಳಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಬಿಜೆಪಿಯ ಉನ್ನತ ನಾಯಕರೊಬ್ಬರ ಅನಗತ್ಯ ಅನುಮಾನದಿಂದ ತಾನು ಟಿಕೆಟ್‌ ಕಳೆದುಕೊಂಡೆ ಎಂದು ನಿಯೋಗದ ಬಳಿ ಶೆಟ್ಟರು ಬೇಸರ ತೋಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್‌ ಸೇರುವ ಬಗ್ಗೆ ತರಾತುರಿಯ ನಿರ್ಧಾರ ಕೈಗೊಳ್ಳುವುದಿಲ್ಲ ಎಂದಿದ್ದಾರೆ ಎಂದು ತಿಳಿದು ಬಂದಿದೆ.

-ರಾಘವೇಂದ್ರ ಭಟ್‌

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.