![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
ವರ್ಷಕ್ಕೆ 32 ಜಯಂತಿಗಳು; ಕಾರ್ಯಾಂಗದ ಕಾಲುಭಾಗ ಸಭೆಗಳಿಗೇ ವ್ಯಯ
Team Udayavani, Feb 16, 2023, 10:30 PM IST
![tdy-18](https://www.udayavani.com/wp-content/uploads/2023/02/tdy-18-13-620x372.jpg)
ವಿಧಾನ ಪರಿಷತ್ತು: ಸಮುದಾಯಕ್ಕೊಂದು ಸರ್ಕಾರಿ ಜಯಂತಿ ಘೋಷಿಸಿದ್ದರಿಂದ ಅವುಗಳ ಆಚರಣೆ, ಪೂರ್ವಸಿದ್ಧತೆಗಳಿಗಾಗಿಯೇ ಕಾರ್ಯಾಂಗದ ಶೇ. 25ರಷ್ಟು ಶ್ರಮ ವ್ಯಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಯಂತಿಗಳ ಆಚರಣೆ ಬಗ್ಗೆ ಪುನರ್ವಿಮರ್ಶೆ ಅವಶ್ಯಕತೆ ಇದೆ ಎಂದು ಜೆಡಿಎಸ್ನ ಗೋವಿಂದರಾಜು ತಿಳಿಸಿದರು.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಬಹುತೇಕ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನನ್ನ ಮಾಹಿತಿ ಪ್ರಕಾರ ಪ್ರತಿ ಇಲಾಖೆಯಲ್ಲೂ ಶೇ. 50ಕ್ಕಿಂತ ಕಡಿಮೆ ಸಿಬ್ಬಂದಿ ಇದ್ದಾರೆ. ಈ ಮಧ್ಯೆ ವರ್ಷಕ್ಕೆ 32 ವಿವಿಧ ಜಯಂತಿಗಳನ್ನು ಆಚರಿಸಲಾಗುತ್ತದೆ. ಅದಕ್ಕೆ ಸಂಬಂಧಿಸಿದ ಪೂರ್ವಸಿದ್ಧತಾ ಸಭೆಗಳು ನಡೆಯುತ್ತವೆ. ಇದಕ್ಕಾಗಿಯೇ ಕೋಟ್ಯಂತರ ರೂ.ಖರ್ಚಾಗುತ್ತದೆ. ಜತೆಗೆ ಶ್ರಮ ಕೂಡ ವ್ಯಯ ಆಗುತ್ತದೆ. ಹೀಗಾಗಿ ಇಷ್ಟೊಂದು ಜಯಂತಿಗಳನ್ನು ಸರ್ಕಾರದಿಂದ ಆಚರಿಸುವ ಅಗತ್ಯತೆ ಬಗ್ಗೆ ಮತ್ತೂಮ್ಮೆ ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರವು ಜಾತಿ- ಸಮುದಾಯಗಳನ್ನು ತೃಪ್ತಿಪಡಿಸಲು ಹೀಗೆ ಜಯಂತಿಗಳನ್ನು ಆಚರಿಸುತ್ತಿರುವುದು ನೋವಿನ ಸಂಗತಿ ಎಂದ ಅವರು, ಇದಕ್ಕಾಗಿ ನಡೆಯುವ ಪೂರ್ವಭಾವಿ ಸಭೆಗಳಿಗಾಗಿಯೇ ವಾರ್ಷಿಕ ಕೋಟ್ಯಂತರ ರೂಪಾಯಿ ಖರ್ಚಾಗಲಿದೆ ಎಂದರು.
ಈ ಹಿಂದೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಜಯಂತಿಗಳಿಗೆ ಸಂಬಂಧಿಸಿದಂತೆ ಸಮಿತಿಯು ವರದಿಯೊಂದನ್ನು ಸಲ್ಲಿಸಿತ್ತು. ಅದರ ಶಿಫಾರಸುಗಳು ಏನು? ಅದರ ಅನುಷ್ಠಾನ ಮತ್ತಿತರ ವಿಷಯಗಳು ಗೊತ್ತಾಗಲೇ ಇಲ್ಲ. ಈಗ ಅದರ ಮೇಲೆ ಬೆಳಕು ಚೆಲ್ಲಬೇಕು ಎಂದು ಆಗ್ರಹಿಸಿದರು.
ಶಾಸಕನಾಗುವುದು “ಶಾಪ’ವಾಗಿದೆ:
“ನಮ್ಮ ಕ್ಷೇತ್ರದಲ್ಲಿ ಒಂದೇ ಒಂದು ಕೆಲಸಗಳು ಆಗುತ್ತಿಲ್ಲ. ಮೊದಲೆಲ್ಲ ಶಾಸಕನಾಗುವುದು ಪುಣ್ಯ ಎನ್ನಲಾಗುತ್ತಿತ್ತು. ಆದರೆ, ಈಗಿನ ವ್ಯವಸ್ಥೆಯಲ್ಲಿ ಶಾಪ ಅನಿಸುತ್ತಿದೆ’ ಎಂದು ಗೋವಿಂದರಾಜು ಬೇಸರ ವ್ಯಕ್ತಪಡಿಸಿದರು. “ತೋಟಗಾರಿಕೆ ವಲಯದಲ್ಲಿ ಕೋಲಾರ ದೊಡ್ಡ ಕೊಡುಗೆ ನೀಡುತ್ತಿದೆ. ಆದರೆ, ಕಳೆದೆರಡು ವರ್ಷಗಳಿಂದ ತೋಟಗಾರಿಕೆ ಸಚಿವರು ಒಂದು ಸಭೆಯನ್ನೂ ನಡೆಸಿಲ್ಲ. ಇದರಿಂದ ಕೋಲಾರ ರೈತರ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆಯೂ ಆಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.