Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ
ಸಿಎಂ, ಡಿಸಿಎಂಗೆ ಸನ್ಮಾನ: ಸಚಿವ ಶಿವರಾಜ್ ತಂಗಡಗಿ
Team Udayavani, Jul 2, 2024, 9:33 PM IST
ಬೆಂಗಳೂರು: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷೆ ಸ್ವೀಕರಿಸಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭೋವಿ ಸಮುದಾಯ ಜು.20ರಂದು ದೀಕ್ಷಾ ರಜತ ಮಹೋತ್ಸವವನ್ನು ಹಮ್ಮಿಕೊಂಡಿದೆ.
ಅಂದು ಬೆಳಗ್ಗೆ 11ಕ್ಕೆ ಚಿತ್ರದುರ್ಗದಲ್ಲಿ ಈ ರಜತ ಮಹೋತ್ಸವವನ್ನು ಆಯೋಜಿಸಲಾಗಿದೆ. ಮಂತ್ರಾಲಯದ ಸುಭುದೇಂದ್ರ ತೀರ್ಥರು ಆಶೀರ್ವಚನ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಲ ಗ್ರಂಥಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಚಿವ ಶಿವರಾಜ ತಂಗಡಗಿ ಮಾತನಾಡಿ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ಕ್ಕೆ ಮೊದಲ ಬಾರಿ ಸಮಾಜದಿಂದ ಓರ್ವರನ್ನು ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೆ, ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಲಾಗುವುದುಎಂದರು. ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ಮಾಜಿ ಶಾಸಕ ನಾಗರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.