Congress ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಜಂಗಲ್ ರಾಜ್ಯ ಸೃಷ್ಟಿ: ಬೊಮ್ಮಾಯಿ
Team Udayavani, Jul 12, 2023, 3:10 PM IST
ಬೆಂಗಳೂರು: ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಜಂಗಲ್ ರಾಜ್ಯ ಸೃಷ್ಟಿಯಾಗಿದೆ. ಜನ ನಿರ್ಭೀತಿಯಿಂದ ಓಡಾಡಲಾಗುತ್ತಿಲ್ಲ. ಸಾಧು ಸಂತರನ್ನು ಕೊಲ್ಲಲಾಗುತ್ತಿದೆ, ನಮ್ಮ ಕಾರ್ಯಕರ್ತರು, ಟೆಕ್ಕಿಗಳು, ಜನ ಸಾಮಾನ್ಯರನ್ನು ಬಿಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತಂಕ ವ್ಯಕ್ತಪಡಿಸಿದ್ದಾರೆ.
ಕೊಂದವರು ಇನ್ಸ್ಟಾಗ್ರಾಮ್ ಸ್ಟೇಟಸ್ ಹಾಕ್ಕೊಂಡು ಇರುತ್ತಾರೆ. ಭಯ ಇಲ್ಲ. ಮರಳು ಮಾಫಿಯಾ ತಡೆಯಲು ಹೋದ ಪೊಲೀಸರ ಹತ್ಯೆ ನಡೆಯುತ್ತದೆ. ಪೊಲೀಸರ ನೈತಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತಬಿಖೆಗೆ ವಹಿಸಿ ಎಂದರೆ ದಪ್ಪಚರ್ಮದ ಸರ್ಕಾರ ಹಠಮಾರಿತನ ಮಾಡುತ್ತಿದೆ. ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ಕಾನೂನು ಸುವ್ಯವಸ್ಥೆ ಹದ್ದುಬಸ್ತಿನಲ್ಲಿಟ್ಟು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದೇವೆ. ಕೇಂದ್ರ ಸರ್ಕಾರಕ್ಕೂ ವರದಿ ನೀಡುವಂತೆ ಮನವಿ ಮಾಡಿದ್ದೇವೆ. ಸರ್ಕಾರ ಕ್ರಮ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆ, ತಾಲೂಕಿನಾದ್ಯಂತ ಹೋರಾಟ ಒಯ್ಯುತ್ತೇವೆ ಎಂದು ಹೇಳಿದರು.
ದೇಶದ ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ನೆಹರು ಗಾಂಧಿ ಕುಟುಂಬ ಕಾನೂನು ಮೀರಿದ ಕುಟುಂಬ ಎಂದುಕೊಂಡಿದ್ದಾರೆ. ಗುಜರಾತ್ ಹೈಕೋರ್ಟ್ ತೀರ್ಪಿನ ವಿರುದ್ಧ ಹೋರಾಡುವ ಇವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಕೇವಲ ಒಂದು ಕುಟುಂಬದ ಪರವಾದ ಹೋರಾಟ ಇವರದ್ದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.