ಕಾಂಗ್ರೆಸ್ ಬಾಗಿಲನ್ನು ಯಾರು ತಟ್ಟಿದ್ದಾರೆ? ನಾವು ಎಲ್ಲಿಗೂ ಹೋಗುವುದಿಲ್ಲ: ಕೆ.ಗೋಪಾಲಯ್ಯ
Team Udayavani, Feb 24, 2022, 1:29 PM IST
ಬೆಂಗಳೂರು: ಕಾಂಗ್ರೆಸ್ ಬಾಗಿಲನ್ನು ಯಾರು ತಟ್ಟಿದ್ದಾರೆ. ನಾವ್ಯಾರು ಎಲ್ಲಿಗೂ ಹೋಗುವುದಿಲ್ಲ ಎಂದು ವಲಸಿಗ ಸಚಿವರು ಕಾಂಗ್ರೆಸ್ ಸೇರುವ ವದಂತಿ ವಿಚಾರವನ್ನು ಅಬಕಾರಿ ಸಚಿವ ಕೆ.ಗೋಪಾಲಯ್ಯ ತಳ್ಳಿ ಹಾಕಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಬಿಜೆಪಿಯಲ್ಲಿ ಚನ್ನಾಗಿಯೇ ಇದ್ದೇವೆ. ಇಲ್ಲಿ ನಮಗೆ ಯಾವುದೇ ಸಮಸ್ಯೆಯಿಲ್ಲ. ನಮಗೆ ಸಚಿವ ಸ್ಥಾನ ನೀಡಿ ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ. ಹೀಗಿರುವಾಗ ನಾವ್ಯಾಕೆ ಬಿಜೆಪಿ ಬಿಟ್ಟು ಹೋಗಬೇಕು ಎಂದರು.
ಕೆಲವರಿಗೆ ನಿಗಮ, ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ. ಒಂದಿಬ್ಬರಿಗೆ ಸಚಿವ ಸ್ಥಾನ ಸಿಕ್ಕಿಲ್ಲವಷ್ಟೇ, ಆದರೆ ನಾವೆಲ್ಲರೂ ಒಟ್ಟಾಗಿಯೇ ಇದ್ದೇವೆ ಎಂದು ಗೋಪಾಲಯ್ಯ ಹೇಳಿದರು.
ಇದನ್ನೂ ಓದಿ:ಕಲಬುರಗಿ ಪಾಲಿಕೆ ಮೇಯರ್- ಉಪಮೇಯರ್ ಚುನಾವಣೆಗೆ ತಾತ್ಕಾಲಿಕ ತಡೆ
ಮದ್ಯ ಮಾರಾಟ ಸಂಸ್ಥೆಗಳ ಸದಸ್ಯರ ಜೊತೆ ಸಿಎಂ ಸಭೆಯಲ್ಲಿ ಭಾಗಿಯಾದ ಬಳಿಕ ಮಾತನಾಡಿದ ಅವರು, ಮದ್ಯ ಮಾರಾಟದ ಕಮಿಷನ್ ಹೆಚ್ಚಳ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಆರ್ಥಿಕ ಇಲಾಖೆ ಜತೆ ಸಿಎಂ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ. 23,247 ಕೋಟಿ ನಾವು ತೆರಿಗೆ ಸಂಗ್ರಹ ಮಾಡಿದ್ದೇವೆ, ಕೋವಿಡ್ ಸಮಯದಲ್ಲೂ ನಮ್ಮ ಟಾರ್ಗೆಟ್ ಪೂರ್ಣ ಮಾಡಿದ್ದೇವೆ. ಈ ವರ್ಷ ಗುರಿ ಮೀರಿ ತೆರಿಗೆ ಸಂಗ್ರಹವಾಗುತ್ತದೆ ಎಂದರು.
ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿದೆ. ನಾಳೆ ಆರ್ಥಿಕ ಇಲಾಖೆಯ ಅಧಿಕಾರಿಗಳ ಜತೆ ನಮ್ಮ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ಮಾಡುತ್ತಾರೆ. ಸಂಸ್ಥೆಗಳ ಸದಸ್ಯರು ಕೊಟ್ಟ ಸಲಹೆ ಮತ್ತು ಮನವಿಗಳನ್ನು ಸಿಎಂ ಕೇಳಿದ್ದಾರೆ ಎಂದು ಸಚಿವ ಗೋಪಾಲಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು
MUDA Case: ಸಿಎಂ ಸಿದ್ದರಾಮಯ್ಯ 45 ವರ್ಷದ ರಾಜಕೀಯ ಜೀವನ ಅಂತ್ಯ: ಪ್ರತಾಪ್ ಸಿಂಹ
Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ
BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.