ಜಲ್ಲಿಕಟ್ಟು ಬಗ್ಗೆ ಸುಪ್ರೀಂ ತೀರ್ಪು ನೀಡಿದ ನಂತರ ಕಂಬಳದ ಬಗ್ಗೆ ಆದೇಶ
Team Udayavani, Jan 30, 2017, 3:07 PM IST

ಬೆಂಗಳೂರು : ಕರ್ನಾಟಕದ ಸಾಂಪ್ರದಾಯಿಕ ಕಂಬಳ ಕ್ರೀಡೆಯ ಮೇಲಿನ ನಿಷೇಧದ ಕುರಿತಾದ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಇಂದು ಸೋಮವಾರ, ಎರಡು ವಾರಗಳ ಮಟ್ಟಿಗೆ ಮುಂದೂಡಿದೆ.
‘ಜಲ್ಲಿಕಟ್ಟು ಕುರಿತಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಬಳಿಕ ಮರಳಿ ಕೋರ್ಟಿಗೆ ಬನ್ನಿ’ ಎಂದು ರಾಜ್ಯ ಹೈಕೋರ್ಟ್ ಅರ್ಜಿದಾರರಿಗೆ ಹೇಳಿರುವುದಾಗಿ ವರದಿಗಳು ತಿಳಿಸಿವೆ.
ನೆರೆಯ ತಮಿಳು ನಾಡಿನಲ್ಲಿ ಜಲ್ಲಿಕಟ್ಟು ನಿಷೇಧದ ತೆರವಿಗೆ ನಡೆದಿದ್ದ ಬೃಹತ್ ಜನಾಂದೋಲನದ ರೀತಿಯಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯಲ್ಲಿ ಕಳೆದ ಶನಿವಾರ ಕಂಬಳ ಕ್ರೀಡೆಯ ಮೇಲಿನ ನಿಷೇಧದ ತೆರವಿಗಾಗಿ ಬೃಹತ್ ಪ್ರತಿಭಟನೆ ನಡೆದಿತ್ತು. ಪ್ರತಿಭಟನಕಾರರು ಮೂಡಬಿದಿರೆಯಲ್ಲಿ ಕಂಬಳ ಮೇಲಿನ ನಿಷೇಧದ ಶಾಶ್ವತ ತೆರವು ಆಗ್ರಹಿಸಿ ಬೃಹತ್ ಮೆರವಣಿಗೆಯನ್ನು ನಡೆಸಿದ್ದರು.
ಮೂಡಬಿದಿರೆಯ ಸ್ವರಾಜ್ಯ ಮೈದಾನದಿಂದ ಕಡಲಕರೆ ಪ್ರದೇಶದ ವರೆಗೆ ಒಂದು ಕಿ.ಮೀ. ಉದ್ದ ಕಂಬಳ ಗದ್ದೆಯಲ್ಲಿ ಪ್ರತಿಭಟನಕಾರರು ಸುಮಾರು 50 ಜೋಡಿ ಕೋಣಗಳನ್ನು ಪ್ರದರ್ಶಿಸಿದ್ದರು.
ಪೇಟಾ ಹೂಡಿದ್ದ ದಾವೆಯ ವಿಚಾರಣೆಯನ್ನು ನಡೆಸಿದ್ದ ರಾಜ್ಯ ಹೈಕೋರ್ಟ್ ಕಳೆದ ನವೆಂಬರ್ನಲ್ಲಿ ತಾತ್ಕಾಲಿಕ ಆದೇಶವನ್ನು ಹೊರಡಿಸುವ ಮೂಲಕ ಕಂಬಳ ಕ್ರೀಡೆಯ ಮೇಲೆ ನಿಷೇಧ ಹೇರಿತ್ತು. ಈಗಿನ್ನು ಮುಂದಿನ ಸೋಮವಾರ ಹೈಕೋರ್ಟ್ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ

Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ

Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.