ಮಣಿಪುರ ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲು ಮುಂದಾದ ಕನೇರಿ ಮಠ

ಖುದ್ದಾಗಿ ಮಣಿಪುರಕ್ಕೆ ತೆರಳಲಿರುವ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

Team Udayavani, Aug 5, 2023, 7:55 PM IST

1-asdasd

ಹುಬ್ಬಳ್ಳಿ: ಮಣಿಪುರದ ಗಲಭೆ ಹಿನ್ನೆಲೆಯಲ್ಲಿ ಸಂತ್ರಸ್ತರಾದ ಜನರಿಗೆ ಆಹಾರ ಸಾಮಗ್ರಿ ಇನ್ನಿತರ ನಿತ್ಯಾವಶ್ಯಕ ವಸ್ತುಗಳನ್ನು ಮನೆಮನೆಗೆ ತಲುಪಿಸಲು ಮಹಾರಾಷ್ಟ್ರದ ಕನೇರಿ ಮಠ ಮುಂದಾಗಿದ್ದು, ಇದಕ್ಕಾಗಿ ಕರ್ನಾಟಕದ ದಾನಿಗಳಿಂದ ಆರ್ಥಿಕ ನೆರವನ್ನು ಕೇಳಿದೆ.
ಕನೇರಿಯ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರು ಆಗಸ್ಟ್ 9 ಇಲ್ಲವೇ 10 ಖುದ್ದಾಗಿ ಮಣಿಪುರಕ್ಕೆ ತೆರಳಲ್ಲಿದ್ದು ಅಲ್ಲಿನ ಸಂತ್ರಸ್ತರಿಗೆ ನೆರವು ನೀಡುವ ಕಾರ್ಯ ಮಾಡಲಿದ್ದಾರೆ.

ಮಣಿಪುರದ ಗಲಭೆ ಹಿನ್ನೆಲೆಯಲ್ಲಿ ಸುಮಾರು 80 ಹಳ್ಳಿಗಳು ಸಂಪೂರ್ಣವಾಗಿ ಬೆಂಕಿಗೆಹುತಿಯಾಗಿದ್ದು ಅಲ್ಲಿನ ಸಾವಿರಾರು ಜನರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಕನಿಷ್ಠ ಊಟ ಮಾಡುವುದಕ್ಕೂ ಆಹಾರ ಧಾನ್ಯಗಳಿಲ್ಲದ ದಯನೀಯ ಸ್ಥಿತಿಯಲ್ಲಿ ದಿನದೊಡುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸ್ವಾಮೀಜಿಯವರು ಸಂತ್ರಸ್ತರಿಗೆ ನೆರವು ನೀಡಲು ಮುಂದಾಗಿದ್ದಾರೆ.

ಮಣಿಪುರದ ಸಂತ್ರಸ್ತರಿಗೆ ಕನಿಷ್ಠ ಒಂದು ತಿಂಗಳ ಆಹಾರ ಧಾನ್ಯ ಹಾಗೂ ನಿತ್ಯಾವಶ್ಯಕ ವಸ್ತುಗಳನ್ನು ನೀಡಲು ನಿರ್ಧರಿಸಲಾಗಿದ್ದು ಆಹಾರಧಾನ್ಯಗಳನ್ನು ದೇಣಿಗೆ ಮೂಲಕ ಪಡೆದು ಇಲ್ಲಿಂದ ಅಲ್ಲಿಗೆ ತೆಗೆದುಕೊಂಡು ಹೋಗಲು ಕಷ್ಟದಾಯಕವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ದಾನಿಗಳು, ಶ್ರೀಮಠದ ಭಕ್ತರು ಕನಿಷ್ಠ 5 ರಿಂದ 6 ಸಾವಿರ ರೂಗಳನ್ನು ನೀಡಿದಲ್ಲಿ ಒಂದು ಕುಟುಂಬಕ್ಕೆ ಬೇಕಾದ ಆಹಾರ ಧಾನ್ಯಗಳನ್ನು ಕೊಡಿಸುವದಾಗಿ ಸ್ವಾಮೀಜಿಯವರು ತಿಳಿಸಿದ್ದಾರೆ.

ಮಣಿಪುರದಲ್ಲಿ ಸುಮಾರು 80 ಗ್ರಾಮಗಳು ಬಹುತೇಕವಾಗಿ ಸುತ್ತು ಹೋಗಿರುವ ಹಿನ್ನೆಲೆಯಲ್ಲಿ ಅಂದಾಜು 60,000ಕ್ಕೂ ಅಧಿಕ ಜನ ವಿವಿಧ ಕಡೆಯ ನಿರಾಶ್ರಿತ ಕ್ಯಾಂಪ್ ಗಳಲ್ಲಿ ಉಳಿದುಕೊಂಡಿದ್ದು ಇನ್ನೂ ಅನೇಕರಿಗೆ ಆ ಸೌಲಭ್ಯವು ಇಲ್ಲವಾಗಿದೆ.

ಸಂತ್ರಸ್ತರಿಗೆ ಕನಿಷ್ಠ ಒಂದು ತಿಂಗಳಿಗೆ ಆಗುವಷ್ಟು ಆಹಾರ ಪದಾರ್ಥಗಳು ಹಾಗೂ ನಿತ್ಯಾವಶ್ಯಕ ವಸ್ತುಗಳನ್ನು ನೀಡುವ ನಿಟ್ಟಿನಲ್ಲಿ ಶ್ರೀ ಅದೃಶ್ಯ ಕಾಣಿಸಿದ್ದೇಶ್ವರ ಸ್ವಾಮೀಜಿ ಅವರು ಸುಮಾರು ಏಳು ಎಂಟು ಜನ ಮಠಾಧೀಶರೊಂದಿಗೆ ಅಲ್ಲಿಗೆ ತೆರಳಲು ಮುಂದಾಗಿದ್ದಾರೆ.
ಮಣಿಪುರದ ಸಂತ್ರಸ್ತರಿಗೆ ನೆರವು ದೊರೆ ದೊರಕುವ ನಿಟ್ಟಿನಲ್ಲಿ ದಾನಿಗಳು ಶ್ರೀ ಮಠಕ್ಕೆ ಹಣದ ರೂಪದಲ್ಲಿ ಅದನ್ನು ಪೂರ್ಣ ಪ್ರಮಾಣದಲ್ಲಿ ಸಂತ್ರಸ್ತರಿಗೆ ತಲುಪಿಸಲಾಗುತ್ತದೆ.

ಈ ಹಿಂದೆ ನೇಪಾಳ,ಕೇರಳ, ಕರ್ನಾಟಕ, ಮಹಾರಾಷ್ಟ್ರ ಇನ್ನಿತರ ಕಡೆ ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಶ್ರೀಮಠದಿಂದ ನೆರವು ಕಲ್ಪಿಸುವ ಕಾರ್ಯವನ್ನು ಖುದ್ದಾಗಿ ಕೈಗೊಂಡಿದ್ದರು ಇದೀಗ ಮಣಿಪುರದ ಸಂತ್ರಸ್ತರ ನೆರವಿಗೂ ಮುಂದಾಗಿದ್ದಾರೆ ದಾನಿಗಳು ಇದಕ್ಕೆ ಕೈಜೋಡಿಸಬೇಕಾಗಿದೆ.

ಮಣಿಪುರದ ಸಂತ್ರಸ್ತರ ಸಂಕಷ್ಟ ಸ್ಥಿತಿಯನ್ನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸ್ಥಿತಿ ಇದ್ದು ಅಲ್ಲಿಗೆ ತುರ್ತು ನೆರವಿನ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ನೆರವು ನೀಡುವ ಹಾಗೂ ಪರಿಹಾರ ಸಾಮಗ್ರಿಗಳು ಸಮರ್ಪಕವಾಗಿ ತಲುಪುವಂತಾಗುವ ನಿಟ್ಟಿನಲ್ಲಿ ಏಳೆಂಟು ಜನ ಮಠಾಧೀಶರು ಅಲ್ಲಿಗೆ ತೆರಳಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಸುತ್ತೂರು ಸ್ವಾಮೀಜಿಯವರು ಆದಿಚುಂಚನಗಿರಿ ಸ್ವಾಮೀಜಿಯವರು ಸೇರಿದಂತೆ ವಿವಿಧ ಮಠಾಧೀಶರ ಸಂಪರ್ಕ ಕಾರ್ಯವನ್ನು ಕೈಗೊಂಡಿರುವದಾಗಿ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಯವರು ತಿಳಿಸಿದ್ದಾರೆ.

ದಾನಿಗಳು ಕನೇರಿಮಠದ ಖಾತೆಗೆ ಹಣ ನೀಡಬಹುದಾಗಿದೆ.
Account Name SIDDHAGIRI GURUKUL FOUNDATION
C/A NO – 6134137407
IFSC CODE IDIB000K737
BR – SHAHUPURI STATION ROAD KOLHAPUR

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.