ಕನ್ನಡ ಇದು ನಮ್ಮ ಮೂಲ ಆಸ್ತಿ. ಅದು ಕ್ಷೀಣಿಸಬಾರದು :ಇಟಗಿ


Team Udayavani, Feb 14, 2021, 1:20 PM IST

Kannada is our basic asset

ಧಾರವಾಡ: ಕನ್ನಡ ಇದು ನಮ್ಮ ಮೂಲ ಆಸ್ತಿ. ಅದು ಕ್ಷೀಣಿಸಬಾರದು. ಈ ನಿಟ್ಟಿನಲ್ಲಿ ‌ನಮ್ಮ ಪ್ರಯತ್ನ ಇರಬೇಕು. ಕನ್ನಡದ ಬಗೆಗೆ ನಮಗಿರಬೇಕಾದ ನಿಷ್ಠೆ ಬದ್ದತೆ ನಿತ್ಯ ಜೊತೆಗಿರಬೇಕು ಎಂದು ಧಾರವಾಡ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳನಾಧ್ಯಕ್ಷರಾದ ಮಕ್ಕಳ ಸಾಹಿತಿ ಲಿಂಗಣ್ಣ ಕುಂಟಿ ( ಇಟಗಿ)  ಹೇಳಿದರು.

ತಾಲೂಕಿನ ಇಟಿಗಟ್ಟಿ ಗ್ರಾಮದಲ್ಲಿ ಧಾರವಾಡ ತಾಲೂಕು ಕಸಾಪ ಘಟಕದಿಂದ ಹಮ್ಮಿಕೊಂಡಿದ್ದ ಧಾರವಾಡ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಕನ್ನಡವಿದು ನಮ್ಮೆದೆಯ ಭಾಷೆಯಿದು ಎಂಬಂತೆ ನಮ್ಮ ಕನ್ನಡ ಭಾಷೆಯು ನಮ್ಮದೆಯ ಭಾಷೆಯಾಗಬೇಕು. ಮನೆತನದ ಪಾಯವಾಗಬೇಕು. ಈ‌ ನಿಟ್ಟಿನಲ್ಲಿ ಪ್ರಾದೇಶಿಕ ( ಮಾತೃಭಾಷೆ) ಭಾಷೆಯಲ್ಲಿ 1 ರಿಂದ 5ನೇಯ ತರಗತಿವರೆಗಿನ ಮಕ್ಕಳಿಗೆ ಕೊಡುವ ಶಿಕ್ಷಣ ಭದ್ರ ಬುನಾದಿ ನೀಡುತ್ತದೆ‌ ಎಂದರು.

ಇದು ಭಾಷೆಯ ಮೇಲೆ ಪ್ರೀತಿ ಬೆಳೆಸಿಕೊಳ್ಳಲು ಹಾಗೂ ಸಾಹಿತ್ಯದಲ್ಲಿ ಆಸಕ್ತಿ ಮೂಡಿಸಿಕೊಳ್ಳಲು ತುಂಬಾ ಸಹಕಾರಿ. ಬದಲಾವಣೆ ಬೇಕೆನ್ನುವ ಅನಿವಾರ್ಯತೆಯಲ್ಲಿಯೂ ಮಾತೃಭಾಷೆಯನ್ನು ಉಳಿಸಿಕೊಳ್ಳುವ ಪ್ರಯತ್ನ ನಿರಂತರವಾಗಿ ಇರಬೇಕೆನ್ನುವ ಬಗ್ಗೆ ಎಲ್ಲ ರೀತಿಯ ಪ್ರಯತ್ನ ಮಾಡಬೇಕು ಎಂದರು.

ಅಸಂಖ್ಯಾತ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸಂಖ್ಯೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿಲ್ಲ. ಹೀಗಾಗಿ ಶಿಕ್ಷಕರ ನೇಮಕಾತಿ ಚುರುಕುಗೊಳ್ಳಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಕಂಡು ಬರುವ ಕೊರತೆಗಳನ್ನು ನೀಗಿಸಬೇಕು ಎಂದರು.

ಇದನ್ನೂ ಓದಿ:ಕಾಣೆಯಾಗಿದ್ದ ತಾಯಿ, ಇಬ್ಬರು ಮಕ್ಕಳು ನದಿಯಲ್ಲಿ ಹೆಣವಾಗಿ ಪತ್ತೆ

ಶಾಲಾ ಕಟ್ಟಡಕ್ಕೆ ಕೇವಲ ಸುಣ್ಣ ಬಣ್ಣ ಬಳಿದು ಚಂದಗೊಳಿಸಿದರೆ ಸಾಲದು‌. ವರ್ಗದ ಕೋಣೆಗಳಲ್ಲಿಯ ಪ್ರಗತಿ ಹೆಚ್ಚಾಗಬೇಕು. ರಾಷ್ಟ್ರದ ಭವಿಷ್ಯ ಶಾಲಾ ಕೋಣೆಗಳಲ್ಲಿ ರೂಪಿತಗೊಳ್ಳುತ್ತದೆ. ಅದು ರಾಷ್ಟ್ರ ನಿರ್ಮಾಣದಲ್ಲಿ ಸಿಂಹಪಾಲು ಹೊಂದಿರುವ ಶಿಕ್ಷಕರಿಂದ ಮಾತ್ರ ಎನ್ನುವುದನ್ನು ಚೆನ್ನಾಗಿ ಮನಗಾಣಬೇಕು ಎಂದರು.

ಧಾರವಾಡ ತಾಲೂಕು ಸಾಹಿತ್ಯ ಪರಿಷತ್ತು, ಧಾರವಾಡ ಶಹರವನ್ನು ಒಳಗೊಂಡು ಬಹಳ ದೊಡ್ಡ ವ್ಯಾಪ್ತಿ‌ ಹೊಂದಿದೆ. ಆದರೆ ಶಹರದಲ್ಲಿಯೇ ಹೆಚ್ಚು ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯುವುದರಿಂದ ಗ್ರಾಮೀಣ ಭಾಗಕ್ಕೆ ಕೊಡಬೇಕಾದಷ್ಟು ಅವಕಾಶ ಸಿಗುತ್ತಿಲ್ಲ. ಈ ಕಾರಣದಿಂದ ಧಾರವಾಡ ಶಹರವನ್ನು ಒಂದು‌ ಸಾಹಿತ್ಯ ಘಟಕವನ್ನಾಗಿಸಿ ಧಾರವಾಡ ತಾಲೂಕಿನ ಹಳ್ಳಿಗಳಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗುವ ಹಾಗೇ ಕ್ರಮ‌ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನಿರ್ಜೀವ ವಸ್ತುಗಳಿಗೆ ಕೃತಕ ಜೀವ ತುಂಬಿ ಅದರಿಂದ ಭವಿಷ್ಯ ರೂಪಿಸುವುದು ಸದ್ಯದ ಆಘಾತಕಾರಿ ಅಂಶ. ಅಂತರ್ಜಾಲ (ಆನ್ ಲೈನ್) ಶಿಕ್ಷಣದ ತೊಳಲಾಟದಿಂದ ಮಕ್ಕಳನ್ನು ಪಾರು ಮಾಡುವಲ್ಲಿ ಶಿಕ್ಷಣ ತಜ್ಞರು, ಪಾಲಕರು, ಪೋಷಕರು ಚಿಂತನೆ ಮಾಡುವ ಅವಶ್ಯಕ ಎಂದು ನುಡಿದರು.

ಸಮ್ಮೇಳನ ಉದ್ಘಾಟಿಸಿದ ಕಲಬುರ್ಗಿ ಕೇಂದ್ರೀಯ ವಿಶ್ರಾಂತ ಕುಲಪತಿ ಡಾ.ಎಚ್.ಎಂ.ಮಹೇಶ್ವರಯ್ಯ ಮಾತನಾಡಿ, ಕನ್ನಡ ಪ್ರಜ್ಞೆಯನ್ನು ವಿಶ್ವದ ಪ್ರಜ್ಞೆಯನ್ನಾಗಿ ಮಾಡಬೇಕಿದೆ ಎಂದರು‌.

ಸಾವಿರಾರು ಇತಿಹಾಸ ಹೊಂದಿರುವ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ. ಆದರೆ ಅದಕ್ಕೆ ತಕ್ಕಂತೆ ಕೆಲಸ ಆಗುತ್ತಿಲ್ಲ. ವಿಳಂಬ ಆಗುತ್ತಿದೆ. ಅದಕ್ಕಾಗಿ ಕನ್ನಡವನ್ನು ತಂತ್ರಜ್ಞಾನಕ್ಕೆ ಅಳವಡಿಸುವ ಕಾರ್ಯ ಆಗಬೇಕು. ಅದಕ್ಕಾಗಿ ಒಂದು ಸಚಿವಾಲಯ ಮಾಡಬೇಕಿದೆ ಎಂದರು.

ವಿಶ್ವದ ಭೂಪಟದಲ್ಲಿ ಕನ್ನಡ ಗುರುತಿಸುವಂತೆ ಮಾಡಲು ಕನ್ನಡವನ್ನು ಡಿಜಿಟಲೀಕರಣ ಮಾಡಿ ತಂತ್ರಜ್ಞಾನಕ್ಕೆ ಅಳವಡಿಸುವ ತುರ್ತು ಅಗತ್ಯವಿದೆ. ಕನ್ನಡವನ್ನು ವಿಶ್ವದ ಶಕ್ತಿ, ಜ್ಞಾನ ಕೋಶದ‌ ಶ್ರೇಷ್ಠ ಭಾಷೆಯನ್ನಾಗಿ‌ ಮಾಡಲು ಕನ್ನಡಕ್ಕಾಗಿ ಕನ್ನಡಲ್ಲಿಯೇ ಪ್ರತ್ಯೇಕ‌ ವಿಕಿಪೀಡಿಯಾ ರೂಪಿಸುವ ಅಗತ್ಯವಿದೆ ಎಂದರು.

ನಿಕಟಪೂರ್ವ ಅಧ್ಯಕ್ಷರಾದ ಡಾ.ರಾಜೇಶ್ವರಿ ಮಹೇಶ್ವರಯ್ಯ, ಮಾಜಿ ಶಾಸಕಿ ಸೀಮಾ ಮಸೂತಿ, ತಾ.ಪಂ.ಅಧ್ಯಕ್ಷ ರವಿವರ್ಮ ಪಾಟೀಲ, ಕಸಾಪ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ, ತಾಲೂಕಾಧ್ಯಕ್ಷ ಎಫ್.ಬಿ.ಕಣವಿ ಇದ್ದರು. ಇದಕ್ಕೂ ಮುನ್ನ ಗ್ರಾಮದಲ್ಲಿ ಚಕ್ಕಡಿಯಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಜರುಗಿತು. ಈ ಮೆರವಣಿಗೆಯಲ್ಲಿ ಕಲಾತಂಡಗಳು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.