ಆಂಗ್ಲ ಭಾಷೆಯಲ್ಲಿ ಸುತ್ತೋಲೆ: ಕ್ರಮಕ್ಕೆ ಶಿಫಾರಸು
Team Udayavani, Jan 19, 2021, 7:00 AM IST
ಬೆಂಗಳೂರು: ಸರಕಾರಿ ಅಧಿಕಾರಿಗಳು ಆಂಗ್ಲ ಭಾಷೆಯಲ್ಲಿ ಸುತ್ತೋಲೆ ಹಾಗೂ ಆದೇಶಗಳನ್ನು ಹೊರಡಿಸುತ್ತಿದ್ದು, ಅಂತಹ 114 ಪ್ರಮುಖ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಅನುಷ್ಠಾನ ಸಮಿತಿ ಹಾಗೂ ಸರಕಾರಕ್ಕೆ ಶಿಫಾರಸು ಮಾಡಿದೆ.
ಕನ್ನಡವನ್ನು ಆಡಳಿತದ ಎಲ್ಲ ಮಟ್ಟದಲ್ಲೂ ಅನುಷ್ಠಾನ ಮಾಡಬೇಕು. ಸರಕಾರ ಮತ್ತು ಸ್ಥಳೀಯ ಸಂಸ್ಥೆಗಳು ಅಧಿಕಾರಿಗಳು ಆಡಳಿತದಲ್ಲಿ ಕನ್ನಡ ಬಳಕೆ ಮತ್ತು ಅನುಷ್ಠಾನದ ಲೋಪವೆಸಗಿದರೆ, “ಕರ್ತವ್ಯ ಲೋಪ’ ಎಂದು ಪರಿಗಣಿಸಲು ಅವಕಾಶವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಚ್ಚರಿಸಿದೆ.
ಎರಡು ವರ್ಷದಿಂದ ಸಭೆ ನಡೆಸಿಲ್ಲ! :
ಅಧಿಕಾರಿ ಮಟ್ಟದಲ್ಲಿ ಕನ್ನಡ ಬಳಕೆ ಯನ್ನು ನಿರ್ಲಕ್ಷಿಸುವವರ ಮೇಲೆ ಕನ್ನಡ ಅನುಷ್ಠಾನ ಸಮಿತಿ ಕ್ರಮ ಕೈಗೊಳ್ಳಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರವೂ ಈ ಸಮಿತಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತದೆ. ಆದರೆ, ಕನ್ನಡ ಅನುಷ್ಠಾನ ಸಮಿತಿಯೂ ಸಕ್ರಿಯವಾಗದಿರುವುದು ಬೆಳಕಿಗೆ ಬಂದಿದೆ. ಈ ಸಮಿತಿ ಕೊನೆಯ ಸಭೆ ನಡೆಸಿರುವುದು 2018ರಲ್ಲಿ ಎನ್ನಲಾಗಿದೆ.
ನಿಯಮ ಉಲ್ಲಂಘಿಸಿದ ಪ್ರಮುಖರು :
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಅಧೀನ ಕಾರ್ಯದರ್ಶಿ ಸಿಬಂದಿ ಮತ್ತು ಆಡಳಿತ ಸುಧಾರಣೆ, ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ನಿರ್ದೇಶಕ, ಹಿಂದುಸ್ಥಾನ್ ಏರೋನಾಟಿಕಲ್ ಜಿಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೈಸೂರು ಹಾಗೂ ಭಾರತೀಯ ಭಾಷಾ ಸಂಸ್ಥಾನ (ಮೈಸೂರು) ನಿರ್ದೇಶಕರು.
114 ಜನರಿಗೆ ನೋಟಿಸ್ ಜಾರಿ :
ಸರಕಾರದ ಮಟ್ಟದಿಂದ ಸ್ಥಳೀಯ ಮಟ್ಟದ ಅಧಿಕಾರಿಗಳವರೆಗೆ ಆಡಳಿತದಲ್ಲಿ ಕನ್ನಡ ಬಳಸದೆ, ಆಂಗ್ಲ ಭಾಷೆಯಲ್ಲಿ ಆದೇಶ, ಸುತ್ತೋಲೆ ಹಾಗೂ ಮಾರ್ಗಸೂಚಿ ಸೇರಿ ಆಡಳಿತಾತ್ಮಕ ನಿರ್ಧಾರಗಳನ್ನು ತಿಳಿಸಲು ಆಂಗ್ಲ ಭಾಷೆ ಬಳಸಿದ ಆರೋಪದ ಮೇಲೆ 114 ಜನರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಕೆಲವರು ಕ್ಷಮಾಪಣ ಪತ್ರ ಸಲ್ಲಿಸಿರುವುದರಿಂದ ನಿರ್ದಿಷ್ಟ ಪ್ರಕರಣಗಳನ್ನು ಪ್ರಾಧಿಕಾರ ಕೈಬಿಟ್ಟಿದೆ.
ಕನ್ನಡ ಬಳಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಅವರ ವೃತ್ತಿ ಪ್ರಮಾಣ ಪತ್ರಗಳಲ್ಲಿ ಈ ತಪ್ಪನ್ನು ಉಲ್ಲೇಖ ಮಾಡಬೇಕು. ಜತೆಗೆ ಕನ್ನಡ ಅನುಷ್ಠಾನ ಸಮಿತಿ ಸಭೆ ನಡೆಸುವಂತೆ ಸರಕಾರಕ್ಕೆ ಕೋರಲಾಗಿದೆ. ಸಭೆಯಲ್ಲಿ ಎಲ್ಲ ವಿಷಯಗಳನ್ನು ವಿವರಿಸಲಾಗುವುದು. – ಟಿ.ಎಸ್. ನಾಗಾಭರಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಹಿತೇಶ್ ವೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.