Kannada Mandatory; ಕನ್ನಡ ಫ‌ಲಕ ಕಡ್ಡಾಯ: ಹೈಕೋರ್ಟ್‌ ತಾಕೀತು

ಕನ್ನಡ ಬಳಕೆಗೆ ವಿನಾಯಿತಿ ನೀಡಲಾಗದು: ನ್ಯಾಯಪೀಠ ಆದೇಶ

Team Udayavani, Oct 25, 2024, 6:40 AM IST

highcort dharwad

ಬೆಂಗಳೂರು: “ಕರ್ನಾಟಕದಲ್ಲಿ ವ್ಯಾಪಾರ, ವಹಿವಾಟು ನಡೆಸುತ್ತೀರಿ ಎಂದಾದರೆ ಕನ್ನಡ ಫ‌ಲಕ ಬಳಸಲು ಹಿಂದೇಟು ಏಕೆ?’ ಕರ್ನಾಟಕದಲ್ಲಿದ್ದ ಮೇಲೆ ಸೂಚನ ಫ‌ಲಕಗಳು ಕನ್ನಡದಲ್ಲಿ ಇರಲೇಬೇಕು’ ಎಂದು ಹೈಕೋರ್ಟ್‌ ತಾಕೀತು ಮಾಡಿದೆ.

ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಎದುರಿನ ನಾಮಫ‌ಲಕಗಳಲ್ಲಿ ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಇರಬೇಕೆಂಬ ರಾಜ್ಯ ಸರಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಮುಂಬಯಿ ಯಲ್ಲಿ ಕೇಂದ್ರ ಕಚೇರಿ ಹೊಂದಿರುವ ರೀಟೇಲರ್ಸ್‌ ಅಸೋಸಿ ಯೇಶನ್‌ ಆಫ್ ಇಂಡಿಯಾ ಸಹಿತ 24 ಪ್ರತಿಷ್ಠಿತ ಖಾಸಗಿ ವಾಣಿಜ್ಯ ಸಂಸ್ಥೆಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಹೇಮಂತ ಚಂದನ ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೌಖೀಕವಾಗಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ವಿಚಾರಣೆ ವೇಳೆ ಅರ್ಜಿ ದಾರರ ಪರ ವಕೀಲರು ನ. 1ರಂದು ಕನ್ನಡ ರಾಜ್ಯೋತ್ಸವ ಇದೆ, ಅನಂತರ ರಾಜ್ಯದಲ್ಲಿ ಕನ್ನಡ ಅಭಿಯಾನ ಆರಂಭವಾಗಲಿದೆ. ಹಾಗಾಗಿ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಪ್ರಕರಣದ ದಾಖಲೆಗಳನ್ನು ಗಮನಿಸಿದ ನ್ಯಾಯಪೀಠವು ನೀವು ಕ‌ರ್ನಾಟಕದಲ್ಲಿ ವಹಿವಾಟು ನಡೆಸುತ್ತಿರುವುದರಿಂದ ಕನ್ನಡದಲ್ಲಿ ಸೂಚನ ಫ‌ಲಕಗಳನ್ನು ಪ್ರದರ್ಶಿಸಲೇ ಬೇಕು, ವಿನಾಯಿತಿ ಇಲ್ಲ ಎಂದಿತು.

ಅಲ್ಲದೆ ಕನ್ನಡ ಭಾಷಾ ರಕ್ಷಣೆ ಸಂಬಂಧ ಶ್ರಮಿಸುತ್ತಿರುವ ಕನ್ನಡ ರಕ್ಷಣ ವೇದಿಕೆಯ ಹೋರಾಟವನ್ನು ನ್ಯಾಯಪೀಠ ಪ್ರಸ್ತಾವಿಸಿತು.ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂಬ ಅರ್ಜಿದಾರರ ಮನವಿಯನ್ನು ನ್ಯಾಯಪೀಠ ತಳ್ಳಿಹಾಕಿತು. ಆದರೆ ಈ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಕಳೆದ ಮಾರ್ಚ್‌ 18ರಂದು ನೀಡಿದ್ದ ಮಧ್ಯಾಂತರ ಆದೇಶವನ್ನು ಮುಂದುವರಿಸಿ ವಿಚಾರಣೆಯನ್ನು ಮುಂದೂಡಿತು.

ಮಧ್ಯಾಂತರ ಆದೇಶದಲ್ಲೇನಿತ್ತು?
ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಕೂಡ ಕರ್ನಾಟಕದಲ್ಲಿ ವಾಣಿಜ್ಯ ವಹಿವಾಟು ನಡೆಸುವ ಸಂಸ್ಥೆಗಳು ಕನ್ನಡ ಭಾಷೆಯನ್ನು ಪಾಲಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿತ್ತು. ಆದರೆ ಸೂಚನಾ ಫ‌ಲಕಗಳಲ್ಲಿ ಶೇ. 60ರಷ್ಟು ಕನ್ನಡವಿಲ್ಲದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚಿಸುವುದು ಸರಿಯಲ್ಲ. ಮೇಲ್ನೋಟಕ್ಕೆ ಇದನ್ನು ಒಪ್ಪಲಾಗದು, ಸಂಸ್ಥೆಗಳಿಗೆ ಸ್ವಲ್ಪ ಕಾಲಾವಕಾಶ ನೀಡಬೇಕಾಗುತ್ತದೆ ಎಂದು ಹೇಳಿತ್ತು. ಅಲ್ಲದೆ ಸದ್ಯಕ್ಕೆ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಮಾ. 18ರಂದು ಮಧ್ಯಾಂತರ ಆದೇಶ ನೀಡಿತ್ತು.

ಟಾಪ್ ನ್ಯೂಸ್

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

WhatsApp Image 2024-10-25 at 02.11.37

Legislative council bypolls: ಒಬಿಸಿ ಸಮುದಾಯದ ಗೆಲುವು; ಜೆ.ಪಿ.ನಡ್ಡಾ

WhatsApp Image 2024-10-25 at 02.14.40

Dakshina Kannada: ಎಸೆಸೆಲ್ಸಿಯ 4,742 ವಿದ್ಯಾರ್ಥಿಗಳಿಗೆ ‘ದತ್ತಾಂಶ ಸೂತ್ರ’!

WhatsApp Image 2024-10-25 at 02.16.30

Aranthodu: ಕಾಡಾನೆಗಳಿಂದ ಕೃಷಿಗೆ ಹಾನಿ

2-shimogga

Shivamogga: ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ

1

Surathkal: ತುಳುನಾಡಿನ ಆಹಾರ, ಐತಿಹಾಸಿಕ ಪರಂಪರೆ ಮಾಹಿತಿಗೆ ‘ಸೊಲ್ಮೆಲು’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.