ಕನ್ನಡ ಕೇವಲ ಭಾಷೆಯಾಗದೆ ನಮ್ಮ ಬದುಕಾಗಬೇಕು: ಸಿಎಂ ಬೊಮ್ಮಾಯಿ
Team Udayavani, Nov 1, 2022, 11:32 AM IST
ಬೆಂಗಳೂರು: ಕನ್ನಡ ಕೇವಲ ಭಾಷೆಯಾಗದೆ ಅದು ನಮ್ಮ ಬದುಕಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಮಂಗಳವಾರ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 67ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಕನ್ನಡದ ಸ್ವಾಭಿಮಾನ ಮತ್ತು ಆಸ್ಮಿತೆಯನ್ನು ಪ್ರತಿಯೊಬ್ಬರು ಎತ್ತಿಹಿಡಿಯಬೇಕು ಎಂದರು.
ನಾವೆಲ್ಲರೂ ಕನ್ನಡಿಗರು ಎಂದು ಹೇಳಬೇಕು. ಹೆಮ್ಮೆಯಿಂದ ಮುನ್ನುಗ್ಗಬೇಕು. ನಡೆ ಮುಂದೆ ನಡೆ ಮುಂದೆ, ನುಗ್ಗಿ ನಡೆ ಮುಂದೆ ಎಂಬುವುದು ನಮ್ಮ ಮಂತ್ರ ಆಗಬೇಕು ಎಂದರು.
ಕರ್ನಾಟಕಕ್ಕಾಗಿ ಕಲಿಯುತ್ತೇವೆ. ಕರ್ನಾಟಕ್ಕಾಗಿ ದುಡಿಯುತ್ತೇವೆ ಕರ್ನಾಟಕಕ್ಕಾಗಿ ಬದುಕುತ್ತೇಲೆ ಎಂಬುವುದು ನಮ್ಮ ಸಂಕಲ್ಪ ಆಗಬೇಕು ಎಂದರು.
ಇದನ್ನೂ ಓದಿ:ಕುಷ್ಟಗಿ: ಕನ್ನಡ ಭಾಷೆಯ ಅಭಿಮಾನ ಮರೆಯದೇ ಮೆರೆಯಬೇಕು; ಶಾಸಕ ಅಮರೇಗೌಡ ಪಾಟೀಲ
ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡಿನ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಿದ್ದಾರೆ. ಎಲ್ಲ ಭಾಷೆಗಳು ಮಾತೃಭಾಷೆ ಮತ್ತು ರಾಷ್ಟ್ರ ಭಾಷೆ ಎಂದು ಹೇಳಿದ್ದಾರೆ. ಹೀಗಾಗಿ ಕನ್ನಡ ಮಾತೃಭಾಷೆ ಕೂಡ ಹೌದು ರಾಷ್ಟ್ರ ಭಾಷೆ ಕೂಡ ಆಗಿದೆ ಎಂದು ತಿಳಿಸಿದರು.
ಈಗಾಗಲೇ ಕನ್ನಡಕ್ಕೆ ಮತ್ತಷ್ಟು ಗಟ್ಟಿತನ ಕೊಡುವ ನಿಟ್ಟಿನಲ್ಲಿ ಕನ್ನಡ ಭಾಷೆ ಸಮಗ್ರ ವಿಧೇಯಕವನ್ನು ಡಿಸೆಂಬರ್ ನಲ್ಲಿ ಮಂಡನೆ ಮಾಡಲಾಗುವುದು. ಈಗಾಗಲೇ ವಿಧೇಯಕದ ಕುರಿತಂತೆ ಸಾರ್ವಜನಿಕ ಚರ್ಚೆ ಆರಂಭವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.