Karnataka ಕಾಂತರಾಜ್‌ ವರದಿ ಬಿಡುಗಡೆಗೆ ಸಂಘರ್ಷಕ್ಕೂ ಸಿದ್ಧ

ಶೀಘ್ರ ವರದಿ ಬಿಡುಗಡೆ ಮಾಡುವಂತೆ ಹಿಂದುಳಿದ ಜಾತಿಗಳ ಒಕ್ಕೂಟ ಒತ್ತಾಯ

Team Udayavani, Nov 8, 2023, 8:40 PM IST

Karnataka ಕಾಂತರಾಜ್‌ ವರದಿ ಬಿಡುಗಡೆಗೆ ಸಂಘರ್ಷಕ್ಕೂ ಸಿದ್ಧ

ಬೆಂಗಳೂರು: “ಜಾತಿ ಗಣತಿ ವರದಿಯು ಶೋಷಿತ ಸಮುದಾಯಗಳ ಪಾಲಿಗೆ ಬೈಬಲ್‌ ಇದ್ದಂತೆ. ಈ ವರದಿ ಬಿಡುಗಡೆ ವಿಚಾರದಲ್ಲಿ ಯಾವ ಹಂತದ ಹೋರಾಟಗಳಿಗೂ ಸಿದ್ಧ.

ಅಗತ್ಯಬಿದ್ದರೆ ಸಂಘರ್ಷಕ್ಕೂ ನಾವು ರೆಡಿ’ ಎಂದು ಎಚ್ಚರಿಸಿರುವ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ, “ಆದಷ್ಟು ಶೀಘ್ರ ವರದಿ ಬಿಡುಗಡೆ ಮಾಡುವುದರ ಜತೆಗೆ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಸುದೀರ್ಘ‌ ಚರ್ಚೆಗೆ ವೇದಿಕೆ ಕಲ್ಪಿಸಬೇಕು’ ಎಂದು ಒತ್ತಾಯಿಸಿವೆ.

“ನೂರಾರು ವರ್ಷಗಳಿಂದ ಶೋಷಣೆ ಅನುಭವಿಸಿಕೊಂಡು ಬಂದಿದ್ದೇವೆ. ಈಗ ಸಮೀಕ್ಷೆಯಿಂದ ವಿವಿಧ ಜಾತಿಗಳ ನಿಖರ ಜನಸಂಖ್ಯೆ ತಿಳಿಯುವುದರ ಜತೆಗೆ ಯಾವ ಕ್ಷೇತ್ರದಲ್ಲಿ ಯಾವ ಸಮುದಾಯ ಮುಂದುವರಿದಿದೆ ಎಂಬುದೂ ಗೊತ್ತಾಗುತ್ತದೆ. ಆದ್ದರಿಂದ ವರದಿಯು ಮಹತ್ವ ಪಡೆದುಕೊಂಡಿದೆ. ಯಾವುದೇ ಪ್ರಬಲ ಸಮುದಾಯಗಳ ಬೆದರಿಕೆಗೆ ಬಗ್ಗುವ ಪ್ರಶ್ನೆಯೇ ಇಲ್ಲ. ಅಗತ್ಯಬಿದ್ದರೆ ಸಂಘರ್ಷಕ್ಕೂ ನಾವು ಸಿದ್ಧ’ ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಪದಾಧಿಕಾರಿಗಳು ಒತ್ತಾಯಿಸಿದರು.

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿರುವುದೇ ಶೋಷಿತ ಸಮುದಾಯಗಳ ಬೆಂಬಲದಿಂದ. ಈಗ ಅದೇ ಸರ್ಕಾರದಲ್ಲಿದ್ದು ಜಾತಿ ಗಣತಿ ವರದಿ ವಿರೋಧಿಸುವವರು ನೆನಪಿಟ್ಟುಕೊಳ್ಳಬೇಕು ಎಂದ ಅವರು, “ವರದಿ ಬಿಡುಗಡೆಗೆ ಸ್ವತಃ ಮುಖ್ಯಮಂತ್ರಿ ಹಿಂದೇಟು ಹಾಕಿದರೆ, ಅವರ ವಿರುದ್ಧವೂ ಹೋರಾಟ ನಡೆಸಲಾಗುವುದು. ಯಾಕೆಂದರೆ, ಈ ವರದಿಯೇ ನಮ್ಮಂತಹ ಶೋಷಿತ ಸಮುದಾಯಗಳಿಗೆ ಬೈಬಲ್‌ ಇದ್ದಂತೆ’ ಎಂದು ಹೇಳಿದರು.

ವರದಿ ಬಿಡುಗಡೆಗೆ ಪ್ರತಿರೋಧ ವ್ಯಕ್ತಪಡಿಸುತ್ತಿರುವವರ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಅದಕ್ಕೆ ಪೂರ್ವಭಾವಿಯಾಗಿ ಬೆಂಗಳೂರಿನಲ್ಲಿ ಶೋಷಿತ ಸಮುದಾಯಗಳ ದೊಡ್ಡ ಸಮಾವೇಶ ಆಯೋಜಿಸಲಾಗುವುದು. ಇದರಲ್ಲಿ ಸುಮಾರು ಹತ್ತು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದ ಅವರು, ಈಗಾಗಲೇ ವರದಿ ಬಿಡುಗಡೆಗೆ ಆಗ್ರಹಿಸಿ 22 ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ಮುಂದಿನ ಹೋರಾಟ ತೀವ್ರವಾಗಿ ಇರಲಿದೆ ಎಂದರು.

ಈ ಹಿಂದೆ ಕೆ.ಎಸ್‌. ಈಶ್ವರಪ್ಪ ಸಚಿವರಾಗಿದ್ದಾಗ, ವರದಿಯನ್ನು ತಾವು ಒಪ್ಪಿಕೊಳ್ಳುವುದಾಗಿ ಹೇಳಿದ್ದರಲ್ಲದೆ, ಈ ಸಂಬಂಧ ಅಂದು ಸರ್ಕಾರದ ಮೇಲೆ ಒತ್ತಡ ತರೋಣ ಎಂದೂ ತಿಳಿಸಿದ್ದರು. ಈಗ ಆ ವರದಿಯ ಪ್ರತಿಯನ್ನೇ ಸುಟ್ಟುಹಾಕಬೇಕು ಎಂದು ಹೇಳುತ್ತಿದ್ದಾರೆ. ಈ ದ್ವಂದ್ವನೀತಿ ಯಾಕೆ? ವರದಿ ಒಪ್ಪಿಕೊಳ್ಳುವುದು ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು. ಆದರೆ, ಅದಕ್ಕಿಂತ ಮುಖ್ಯವಾಗಿ ಅದರಲ್ಲಿ ಏನಿದೆ ಎಂಬುದು ತಿಳಿಯಬೇಕು. ನಂತರ ಅದರ ಬಗ್ಗೆ ಸುದೀರ್ಘ‌ ಚರ್ಚೆಯಾಗಲಿ. ಅದಾದ ಮೇಲೆ ಸ್ವೀಕರಿಸಲಿ’ ಎಂದು ತಿಳಿಸಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕ ಮಾವಳ್ಳಿ ಶಂಕರ್‌, ಬಿಹಾರ ಈಗಾಗಲೇ ಜಾತಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನೂ ಬಿಡುಗಡೆ ಮಾಡಿದೆ. ಕರ್ನಾಟಕ ಕೂಡ ಈ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌, ಒಕ್ಕೂಟದ ಸದಸ್ಯರಾದ ಜಿ.ಡಿ. ಗೋಪಾಲ್‌, ಪ್ರೊ.ಎಂ.ವಿ. ನರಸಿಂಹಯ್ಯ ಮತ್ತಿತರರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಒಂದೆಡೆ ಜಾತಿ ಗಣತಿಯು ದೇಶವನ್ನು ಒಡೆಯುವ ಪ್ರಯತ್ನ ಎಂದು ಆರೋಪಿಸುತ್ತಾರೆ. ಮತ್ತೂಂದೆಡೆ ತಾವೊಬ್ಬ ಹಿಂದುಳಿದ ಸಮುದಾಯಕ್ಕೆ ಸೇರಿದವರು ಅಂತ ಬಿಂಬಿಸಿಕೊಳ್ಳಲು ಯತ್ನಿಸುತ್ತಾರೆ. ಈ ದ್ವಂದ್ವ ಯಾಕೆ? ಸಂವಿಧಾನದ ಪ್ರಕಾರ ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕಾದರೆ, ದೇಶಾದ್ಯಂತ ಜಾತಿ ಸಮೀಕ್ಷೆ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.