Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

ಗರಿಷ್ಠ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸಲು ಸಿಬಿಐ ಮನವಿ; ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ

Team Udayavani, Oct 26, 2024, 6:55 AM IST

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

ಬೆಂಗಳೂರು: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಇತರರ ಶಿಕ್ಷೆಯ ಪ್ರಮಾಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶನಿವಾರಕ್ಕೆ ಕಾಯ್ದಿರಿಸಿದೆ.

ಕಾರವಾರದ ಶಾಸಕ ಸತೀಶ್‌ ಸೈಲ್‌ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್‌ ಬಿಳಿಯ ಸೇರಿ 7 ಮಂದಿ ದೋಷಿಗಳು ಎಂದು ನ್ಯಾ| ಸಂತೋಷ್‌ ಗಜಾನನ ಭಟ್‌ ಗುರುವಾರ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ಶುಕ್ರವಾರ ಪ್ರಕಟಿಸುವುದಾಗಿ ನ್ಯಾಯಾಲಯವು ಹೇಳಿತ್ತು. ಶುಕ್ರವಾರ ಮತ್ತೆ ವಾದ-ಪ್ರತಿವಾದ ನಡೆದ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಶನಿವಾರಕ್ಕೆ ಕಾಯ್ದಿರಿಸಿದೆ.

ವಾದ-ಪ್ರತಿವಾದವೇನು?
ಸಿಬಿಐ ಪರ ಶುಕ್ರವಾರ ಹಿರಿಯ ಸರಕಾರಿ ಅಭಿಯೋಜಕಿ ಕೆ.ಎಸ್‌. ಹೇಮಾ ವಾದ ಮಂಡಿಸಿ, ಆರೋಪಿಗಳು 3,100 ಮೆಟ್ರಿಕ್‌ ಟನ್‌ ಅದಿರು ಕಳ್ಳ ಸಾಗಣೆಯಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸರಕಾರಕ್ಕೆ ಸುಮಾರು 250 ಕೋಟಿ ರೂ.ನಷ್ಟವಾಗಿದೆ. ಪ್ರಕರಣದಲ್ಲಿ ಆರೋಪಿಗಳು ಆರ್ಥಿಕ ಅಪರಾಧ ಎಸಗಿದ್ದಾರೆ. ಹೀಗಾಗಿ ಗರಿಷ್ಠ ಜೈಲು ಶಿಕ್ಷೆಯ ಜತೆಗೆ ದಂಡ ವಿಧಿಸುವಂತೆ ಕೋರ್ಟ್‌ಗೆ ಮನವಿ ಮಾಡಿದರು.

ಶಾಸಕ ಸತೀಶ್‌ ಸೈಲ್‌ ಪರ ವಕೀಲ ರವಿ ಬಿ. ನಾ ಯ ಕ್‌ ವಾದ ಮಂಡಿಸಿ, ಕಳ್ಳತನ, ಭ್ರಷ್ಟಾಚಾರ ಕಾಯ್ದೆಯಡಿ ಗರಿಷ್ಠ ಶಿಕ್ಷೆ 3 ವರ್ಷಗಳಾಗಿದೆ. ಆದ್ದರಿಂದ 3 ವರ್ಷಕ್ಕಿಂತಲೂ ಕನಿಷ್ಠ ಶಿಕ್ಷೆ, ದಂಡ ವಿಧಿಸಬಹುದು. ಇನ್ನು ಸತೀಶ್‌ ಸೈಲ್‌ ಅವರಿಗೆ ಅನಾರೋಗ್ಯದ ಸಮಸ್ಯೆಗಳಿವೆ. ಇದರ ಆಧಾರದ ಮೇಲೆ ಜಾಮೀನು ಪಡೆದುಕೊಂಡಿದ್ದರು ಎಂಬುದನ್ನು ಕೋರ್ಟ್‌ ಗಮನಕ್ಕೆ ತಂದರು.

ಪರಪ್ಪನ ಅಗ್ರಹಾರ
ಜೈಲಿನಲ್ಲಿರುವ ಶಾಸಕ
ಬೇಲೆಕೇರಿ ಅದಿರು ನಾಪತ್ತೆ ಕೇಸ್‌ನಲ್ಲಿ ಶಾಸಕ ಸತೀಶ್‌ ಸೈಲ್‌ ಬೇಲೆಕೇರಿ ಬಂದರಿನ ಉಪ ಸಂರಕ್ಷಣಾಧಿಕಾರಿ (ಡೆಪ್ಯೂಟಿ ಪೋರ್ಟ್‌ ಕನ್ಸ ರ್‌ವೇಟರ್‌) ಮಹೇಶ್‌ ಬಿಳಿಯ, ಲಾಲ್‌ವುಹಲ್‌ ಕಂಪೆನಿಯ ಮಾಲಕ ಪ್ರೇಮ್‌ ಚಂದ್‌ ಗರ್ಗ್‌, ಶ್ರೀಲಕ್ಷಿ$¾à ವೆಂಕಟೇಶ್ವರ ಟ್ರೇಡರ್ಸ್‌ ಮಾಲಕ ಖಾರದಪುಡಿ ಮಹೇಶ್‌, ಸ್ವಸ್ತಿಕ್‌ ಕಂಪೆನಿ ಮಾಲಕ ಕೆ.ವಿ. ನಾಗರಾಜ್‌, ಗೋವಿಂದರಾಜು, ಆಶಾಪುರ ಕಂಪೆನಿ ಮಾಲಕ ಚೇತನ್‌ ಬಂಧನಕ್ಕೊಳಗಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇದೀಗ ಶನಿವಾರ ನ್ಯಾಯಾಲಯವು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದ್ದು, ಎಲ್ಲರ ಚಿತ್ತ ಇದರತ್ತ ಹೊರಳಿದೆ.

6 ಪ್ರಕರಣಗಳಲ್ಲೂ ದೋಷಿ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ಇದೀಗ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಿರುವ ಕೋರ್ಟ್‌, ಶಾಸಕ ಸತೀಶ್‌ ಸೈಲ್‌ ಸೇರಿ ಎಲ್ಲ ಆರೋಪಿಗಳು ದೋಷಿ ಎಂದು ಹೇಳಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿದ್ದ ಐಎಲ್‌ಸಿ ಕಂಪೆನಿಯ ಮಾಲಕ ಸೋಮಶೇಖರ್‌ ಈಗಾಗಲೇ ನಿಧನ ಹೊಂದಿದ್ದಾರೆ.

ಏನಿದು ಪ್ರಕರಣ?
ಅಂಕೋಲಾ ತಾಲೂಕಿನ ಬೇಲೆಕೇರಿ ವ್ಯಾಪ್ತಿಯಲ್ಲಿ 2009- 2010ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿ, 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 11,312 ಮೆಟ್ರಿಕ್‌ ಟನ್‌ ಕಬ್ಬಿಣದ ಅದಿರನ್ನು ಜಪ್ತಿ ಮಾಡಿದ್ದರು. ಈ ಅದಿರನ್ನು ಬೇಲೆಕೇರಿ ಬಂದರಿನ ಅಧಿಕಾರಿ ಮಹೇಶ್‌ ಬಿಳಿಯ ಅವರ ಸುಪರ್ದಿಗೆ ನೀಡಿದ್ದರು. ಆದರೆ ಮಹೇಶ್‌ ಬಿಳಿಯ, ಶಾಸಕ ಸತೀಶ್‌ ಸೈಲ್‌ ಹಾಗೂ ಇತರ ಆರೋಪಿಗಳು ಈ ಅದಿರು ಕಳವು ಮಾಡಲು ಒಳ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪೈಕಿ ಕೆಲವರು ಸತೀಶ್‌ ಸೈಲ್‌ಗೆ ಕಡಿಮೆ ಮೊತ್ತಕ್ಕೆ ಜಪ್ತಿ ಮಾಡಿದ ಅದಿರನ್ನು ಮಾರಾಟ ಮಾಡಿದ್ದರು. ಇನ್ನು ಸತೀಶ್‌ ಸೈಲ್‌ ಪ್ರತ್ಯೇಕವಾಗಿ ತಮ್ಮ ಕಂಪೆನಿಗಳ ಮೂಲಕ ಅದಿರನ್ನು ವಿದೇಶಕ್ಕೆ ರಫ್ತು ಮಾಡಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.