Karnataka election 2023; ಪ್ರಧಾನಿ ಮೋದಿ ಹುಲಿ ಸಫಾರಿ ಬಳಿಕವೇ ಬಿಜೆಪಿ ಪಟ್ಟಿ
Team Udayavani, Apr 6, 2023, 7:15 AM IST
ಬೆಂಗಳೂರು:ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದ್ದು, ಪ್ರಧಾನಿ ನರೇಂದ್ರ ಮೋದಿಯವರ “ಹುಲಿ ಸಫಾರಿ’ಯ ಬಳಿಕವೇ ಸಂಸದೀಯ ಮಂಡಳಿ ಸಭೆ ನಡೆಯಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕಳೆದೆರಡು ದಿನಗಳಿಂದ ನಡೆದ ಬಿಜೆಪಿ ಚುನಾವಣಾ ಸಮಿತಿ ಸಭೆ ಬುಧವಾರ ಮುಕ್ತಾಯಗೊಂಡಿದ್ದು, ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಲಾ ಮೂವರು ಆಕಾಂಕ್ಷಿಗಳ ಹೆಸರನ್ನು ನಮೂದಿಸಲಾಗಿದೆ. ನಿರೀಕ್ಷೆಯಂತೆ ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರ ಹೆಸರನ್ನು ಕೈ ಬಿಡಲಾಗಿದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿದ್ದು, ಚುನಾವಣಾ ಸಮಿತಿ ಅಂತಿಮಗೊಳಿಸಿದ ಪಟ್ಟಿ ಗುರುವಾರ ದೆಹಲಿಗೆ ರವಾನೆಯಾಗಲಿದೆ.ಒಟ್ಟು ಮೂರು ಹಂತದಲ್ಲಿ ಬಿಜೆಪಿ ಪಟ್ಟಿ ಸಂಸ್ಕರಣೆಗೊಂಡಿದೆ.
ಜಿಲ್ಲಾ ಕೋರ್ ಕಮಿಟಿಯಿಂದ ಶಿಫಾರಸುಗೊಂಡ ಹೆಸರುಗಳನ್ನು ಜಿಲ್ಲಾವಾರು ಪ್ರಮುಖರ ನೇತೃತ್ವದಲ್ಲಿ ಏ.1 ಹಾಗೂ 2ರಂದು ಎರಡು ದಿನಗಳ ಕಾಲ ಸಂಸ್ಕರಣೆಗೆ ಒಳಪಡಿಸಲಾಗಿತ್ತು. ಇದಾದ ಬಳಿಕ ಕೋರ್ ಕಮಿಟಿ ಹಾಗೂ ಚುನಾವಣಾ ಸಮಿತಿ ಸಭೆ ನಡೆಸಿ ಪ್ರತಿ ಕ್ಷೇತ್ರದ ಬಗ್ಗೆಯೂ ಕೂಲಂಕಶ ಚರ್ಚೆ ನಡೆಸಿ ಸಂಭಾವ್ಯರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪ್ರತಿ ಕ್ಷೇತ್ರದಲ್ಲೂ ಮೂವರ ಹೆಸರಿದೆ. ಈ ಪೈಕಿ ಪಕ್ಷಕ್ಕಾಗಿ ದುಡಿದ ಹಳೆಯ ಕಾರ್ಯಕರ್ತರು ಹಾಗೂ ಮುಖಂಡರ ಹೆಸರನ್ನು ಸೇರಿಸಲಾಗಿದೆ. ಸಾಮಾನ್ಯ ಕಾರ್ಯಕರ್ತರನ್ನೂ ಪಕ್ಷ ಗುರುತಿಸುತ್ತದೆ ಎಂಬ ಸಂದೇಶ ರವಾನಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇಂದು ಸಿಎಂ ದೆಹಲಿಗೆ:
ಇದೆಲ್ಲದರ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಹುಬ್ಬಳ್ಳಿಯಿಂದ ದಿಲ್ಲಿ ಪ್ರಯಾಣಕ್ಕೆ ಕಾರ್ಯಕ್ರಮ ಪಟ್ಟಿ ಸಿದ್ಧಗೊಂಡಿದೆಯಾದರೂ, ಏ.7ರ ಕಾರ್ಯಕ್ರಮ ಏನು ಎಂಬುದು ನಮೂದಾಗಿಲ್ಲ. ಹೀಗಾಗಿ ಅಂದು ಸಂಸದೀಯ ಮಂಡಳಿ ಸಭೆ ನಡೆಯುವುದು ಅನುಮಾನ. ಎಲ್ಲಕ್ಕಿಂತ ಹೆಚ್ಚಾಗಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶನಿವಾರ ದೆಹಲಿಗೆ ತೆರಳಬಹುದು ಎನ್ನಲಾಗಿದೆ.
ಇದೆಲ್ಲದರ ಮಧ್ಯೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ ರಾಜ್ಯಕ್ಕೆ ಆಗಮಿಸಲಿದ್ದು, ಭಾನುವಾರ ಬಂಡಿಪುರದಲ್ಲಿ ಹುಲಿ ಸಫಾರಿ ವೀಕ್ಷಣೆ ಮಾಡಲಿದ್ದಾರೆ. ಹೀಗಾಗಿ ಶನಿವಾರ ಅಥವಾ ಭಾನುವಾರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆ ನಡೆಯುವುದು ಅನುಮಾನ. ಹೀಗಾಗಿ ಪ್ರಧಾನಿ ಭೇಟಿಯ ಬಳಿಕವೇ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.