ಖಾಸಗಿ ಸಂಸ್ಥೆಗಳಿಗೆ ಗೋಮಾಳ? ಹೊಸ ನೀತಿ ರೂಪಿಸಲು ಮುಂದಾದ ರಾಜ್ಯ ಸರಕಾರ


Team Udayavani, Jan 30, 2022, 6:45 AM IST

ಖಾಸಗಿ ಸಂಸ್ಥೆಗಳಿಗೆ ಗೋಮಾಳ? ಹೊಸ ನೀತಿ ರೂಪಿಸಲು ಮುಂದಾದ ರಾಜ್ಯ ಸರಕಾರ

ಬೆಂಗಳೂರು: ಗೋಮಾಳ ಸಹಿತ ವಿವಿಧ ಬಗೆಯ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡಲು ನೀತಿಯೊಂದನ್ನು ತರಲು ರಾಜ್ಯ ಸರಕಾರ ಮುಂದಾಗಿದ್ದು, ಅದಕ್ಕಾಗಿ ಸಚಿವ ಸಂಪುಟದ ಉಪ ಸಮಿತಿ ರಚಿಸಿದೆ.

ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತ್ಯಾದಿ ಗ್ರಾಮೀಣ ಸರಕಾರಿ ಜಮೀನುಗಳನ್ನು ಖಾಸಗಿ ಸಂಘ-ಸಂಸ್ಥೆಗಳಿಗೆ ಮಂಜೂರು ಮಾಡುವ ನೀತಿ ರೂಪಿಸಬೇಕಾಗಿದೆ. ಇದಕ್ಕಾಗಿ ಕಂದಾಯ ಸಚಿವ ಆರ್‌. ಅಶೋಕ್‌ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ.

ಸಮಿತಿಯಲ್ಲಿ ಕಾನೂನು ಸಚಿವರಾದ ಜೆ.ಸಿ. ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಪ್ರಭು ಚೌಹಾಣ್‌, ಬಿ.ಸಿ. ಪಾಟೀಲ್‌, ಭೈರತಿ ಬಸವರಾಜ ಸದಸ್ಯರಾಗಿದ್ದಾರೆ. ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಿ ಸರಕಾರದ ಜಂಟಿ ಕಾರ್ಯದರ್ಶಿ ಜ. 29ರಂದು ಆದೇಶ ಹೊರಡಿಸಿದ್ದಾರೆ.

ಖಾಸಗಿ ಸಂಘ-ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿರುವ ಜಮೀನುಗಳನ್ನು ಗುತ್ತಿಗೆ ಪಡೆದ ಸಂಘ-ಸಂಸ್ಥೆಗಳಿಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರಕಾರ 2020ರಲ್ಲಿ ಆದೇಶ ಹೊರಡಿಸಿತ್ತು.

ಈ ಮಧ್ಯೆ ಬಗರ್‌ಹುಕುಂ ರೀತಿಯಲ್ಲಿ ಸರಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿದ್ದ ವ್ಯಕ್ತಿಗಳಿಗೆ ಆ ಜಮೀನು ಮಂಜೂರು ಮಾಡುವ ವಿಷಯ ಬಾಕಿ ಉಳಿದಿದೆ. ಅಲ್ಲದೆ ಹೆಚ್ಚುವರಿ ಗೋಮಾಳ ಇದ್ದ ಕಡೆ ಅಂತಹ ಜಮೀನನ್ನು ಸಾಗುವಳಿ ಮಾಡುತ್ತಿರುವ ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡ ಬಹುದು ಎಂದು ಹೈಕೋರ್ಟ್‌ ಹೇಳಿತ್ತು. ಖಾಸಗಿ ಸಂಘ-ಸಂಸ್ಥೆಗಳಿಗೆ ಗೋಮಾಳ ಮತ್ತಿತರ ಸರಕಾರಿ ಜಮೀನು ಮಂಜೂರು ಮಾಡಲು ನೀತಿ ರೂಪಿಸಲು ಸರಕಾರ ಮುಂದಾಗಿ ರುವುದರಿಂದ ಖಾಸಗಿ ವ್ಯಕ್ತಿಗಳಿಗೆ ಸರಕಾರಿ ಜಮೀನು ಮಂಜೂರು ಮಾಡುವ ಬೇಡಿಕೆ ಮತ್ತೆ ಜೀವ ಪಡೆದುಕೊಳ್ಳಬಹುದು.

ಇದನ್ನೂ ಓದಿ:ಫೆಬ್ರವರಿ ಅಂತ್ಯದೊಳಗೆ ಗ್ರಾಮ ಒನ್‌ ರಾಜ್ಯಾದ್ಯಂತ ವಿಸ್ತರಣೆ: ಸಿಎಂ

ಸಂಪುಟ ಉಪಸಮಿತಿ ರಚನೆ
ಇದೇ ಜ. 6ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದು ಸಚಿವ ಸಂಪುಟದ ಉಪಸಮಿತಿ ರಚಿಸುವ ತೀರ್ಮಾನಕ್ಕೆ ಬರಲಾಗಿತ್ತು. ಅದರಂತೆ ಈಗ ಸಚಿವ ಸಂಪುಟದ ಉಪಸಮಿತಿ ರಚಿಸಲಾಗಿದೆ. ಜ. 6ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಧಾರ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಸಂಘ-ಸಂಸ್ಥೆಗಳಿಗೆ ಸರಕಾರದ ಜಮೀನು ಮಂಜೂರು ಮಾಡುವ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಅಂತಹ ಮಂಜೂರಾತಿಗಳಿಗೆ ನೀತಿ ರೂಪಿಸಲು ಸರಕಾರ ನಿರ್ಧರಿಸಿದೆ.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.