Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

ಸಿದ್ದರಾಮಯ್ಯ ರೀಡು ಪ್ರಕರಣ ಕೆದಕಿದ ರಾಜ್ಯಪಾಲ ಗೆಹ್ಲೋಟ್‌; ಸರಕಾರಕ್ಕೆ ಪತ್ರ ರವಾನೆ

Team Udayavani, Sep 22, 2024, 6:55 AM IST

Thavar chand gehlot

ಬೆಂಗಳೂರು: ರಾಜ್ಯಪಾಲರು ಹಾಗೂ ರಾಜ್ಯ ಸರಕಾರದ ನಡುವೆ ನಡೆ ಯುತ್ತಿರುವ ಕಾಳಗ ಈಗ ಮತ್ತೊಂದು ಸುತ್ತಿಗೆ ವಿಸ್ತರಣೆಯಾಗಿದೆ. ಸಿಎಂ ಸಿದ್ದರಾಮಯ್ಯ ಮೊದಲ ಅವಧಿಗೆ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ನಡೆದಿದ್ದ ಅರ್ಕಾವತಿ ಡಿನೋಟಿಫಿಕೇಶನ್‌ ಪ್ರಕರಣದ ತನಿಖೆಗೆ ನೇಮಿಸಿದ್ದ ನ್ಯಾ| ಕೆಂಪಣ್ಣ ಆಯೋಗದ ವರದಿ ಹಾಗೂ ದಾಖಲೆ ನೀಡುವಂತೆ ರಾಜ್ಯಪಾಲರು ಸರಕಾರಕ್ಕೆ ಪತ್ರ ಬರೆದಿರುವ ವಿಷಯ ಈಗ ಬೆಳಕಿಗೆ ಬಂದಿದೆ.

ಈ ತಿಂಗಳಿನ ಮೊದಲ ವಾರದಲ್ಲೇ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದು ಕೆಂಪಣ್ಣ ಆಯೋಗದ ವರದಿ ಹಾಗೂ ದಾಖಲೆ ಬಗ್ಗೆ ಮಾಹಿತಿ ಕೇಳಿದ್ದಾರೆ. ಇದಾಗುತ್ತಿದ್ದಂತೆ ರಾಜ್ಯದಲ್ಲಿ ಡಿನೋಟಿಫಿಕೇಶನ್‌ ಹಗರಣಗಳ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾಜಿ ಸಿಎಂಗಳಾದ ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಕಾಲದ ಡಿನೋಟಿಫಿಕೇಶನ್‌ ಪ್ರಕರಣಗಳನ್ನು ಸರಕಾರ ಝಳಪಿಸುವುದಕ್ಕೆ ಮುಂದಾಗಿದೆ. ಹೀಗಾಗಿ ಮುಡಾ ಜತೆಯಲ್ಲಿ ಅರ್ಕಾವತಿ ವಿವಾದವೂ ಜಟಾಪಟಿಗೆ ಕಾರಣ ವಾಗುವ ಸಾಧ್ಯತೆ ಇದೆ.

ಡಿಸಿಎಂಗೆ ಸಲ್ಲಿಕೆ?
ರಾಜ್ಯಪಾಲರು ಬರೆದಿರುವ ಪತ್ರ ಆಧರಿಸಿ ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಬೆಂಗಳೂರು ಅಭಿವೃದ್ಧಿ ಸಚಿವರ ಪ್ರಧಾನ ಕಾರ್ಯದರ್ಶಿ ಹಾಗೂ ಆಪ್ತ ಕಾರ್ಯದರ್ಶಿಗೆ ಪತ್ರ ಬರೆದು ವರದಿ ಹಾಗೂ ದಾಖಲೆ ಕೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಐದು ಪರಿಚ್ಛೇದ ಹಾಗೂ ದಾಖಲೆಗಳ ಅನುಬಂಧವನ್ನು ಒಳಗೊಂಡ ಸಂಪುಟವನ್ನು ಕಳುಹಿಸಿ ಕೊಡ ಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ನಗರಾಭಿವೃದ್ಧಿ ಇಲಾಖೆಗೆ ರವಾನೆ ಮಾಡಿದ ಅನಧಿಕೃತ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.

ಸೆ. 20ರಂದು ಈ ಪತ್ರ ವ್ಯವಹಾರ ನಡೆದಿದೆ ಎಂದು ಸರಕಾರದ ಅಧಿಕೃತ ಮೂಲಗಳು ಸ್ಪಷ್ಟಪಡಿಸಿವೆ.

ರಾಜ್ಯಪಾಲರಿಂದ ಇಕ್ಕಟ್ಟು
ಈ ಮಧ್ಯೆ ಮುಡಾ ವಿವಾದ ರಾಜಭವನ ಹಾಗೂ ಸರಕಾರದ ಮಧ್ಯೆ ಜಂಗೀ ಕುಸ್ತಿ ಸೃಷ್ಟಿಸಿತ್ತು. ರಾಜ್ಯಪಾಲರಿಗೆ ಸರಕಾರ ಆಗಾಗ ನೀಡುವ ಸಲಹೆಗಳು ಕಿರಿಕಿರಿ ಸೃಷ್ಟಿಸುತ್ತಿದ್ದಂತೆ ಮಾಹಿತಿ ಕೋರಿ ರಾಜ್ಯಪಾಲರು ಸರಕಾರಕ್ಕೆ ಇಕ್ಕಟ್ಟು ಸೃಷ್ಟಿಸಲಾರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿದ ಬಳಿಕ ಎರಡು ಸಾಂವಿಧಾನಿಕ ಸಂಸ್ಥೆಗಳ ಮಧ್ಯೆ ತಿಕ್ಕಾಟ ಆರಂಭವಾಗಿದ್ದು, ಮಾಜಿ ರಾಜ್ಯಪಾಲ ಹಂಸರಾಜ್‌ ಭಾರದ್ವಾಜ್‌ ಹಾಗೂ ಯಡಿಯೂರಪ್ಪ ಸರಕಾರದ ಕಾಲಾವಧಿಯ ವಾತಾವರಣ ಪುನರ್‌ನಿರ್ಮಾಣಗೊಂಡಿದೆ.

ವರದಿಯಲ್ಲಿ ಏನಿದೆ?
ಅರ್ಕಾವತಿ ಡಿನೋಟಿಫಿಕೇಶನ್‌ ಪ್ರಕರಣದ ಬಗ್ಗೆ 2014 ರಲ್ಲೇ ನ್ಯಾ| ಕೆಂಪಣ್ಣ ಅವರು ವಿಚಾರಣೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆದರೆ ಅಂದು ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ಅವರಾಗಲಿ, ಆ ಬಳಿಕ ಅಧಿಕಾರಕ್ಕೆ ಬಂದ ಎಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರಾಗಲಿ ಕ್ರಮ ತೆಗೆದುಕೊಂಡಿರಲಿಲ್ಲ. ವರದಿಯನ್ನು ಸರಕಾರ ಸ್ವೀಕರಿಸಿ ದೆಯೇ, ಇಲ್ಲವೇ ಎಂಬ ಸ್ಪಷ್ಟತೆಯನ್ನೂ ನೀಡದೆ ಕತ್ತಲೆಯಲ್ಲಿ ಇಡಲಾಗಿತ್ತು. ಬಿಜೆಪಿ ಸರಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಆರೋಪ ಬಂದ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಸದನದಲ್ಲಿ ಈ ವಿಷಯವನ್ನು ಪ್ರಸ್ತಾವಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿದ್ದರೂ ಅದು ಅಲ್ಲಿಯೇ ತಟಸ್ಥವಾಗಿತ್ತು. ಕಾಂಗ್ರೆಸ್‌ ಸರಕಾರ ಬಂದ ಅನಂತರ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಯೋಗಗಳ ತನಿಖಾ ವರದಿಗಳು ಸಾರ್ವಜನಿಕ ದಾಖಲೆಗಳಾಗಿದ್ದು, ಅವುಗಳನ್ನು ಬಹಿರಂಗಪಡಿಸುವಂತೆ ಆಗ್ರಹಿಸಿದ್ದರು.

ಟಾಪ್ ನ್ಯೂಸ್

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.