Karnataka Govt ಎನ್ಇಪಿ ಪರ “ಎಕ್ಸ್’ ನಲ್ಲಿ ಅಭಿಯಾನ
Team Udayavani, Nov 20, 2023, 10:43 PM IST
ಬೆಂಗಳೂರು: ರಾಜ್ಯದಲ್ಲಿ ಜಾರಿಯಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯನ್ನು ಹಿಂಪಡೆಯಬಾರದು ಎಂದು ಸಾಮಾಜಿಕ ಜಾಲತಾಣ “ಎಕ್ಸ್’ನಲ್ಲಿ ಭಾರೀ ಆಗ್ರಹ ವ್ಯಕ್ತವಾಗಿದೆ. ಸೋಮವಾರ ಸ್ವಲ್ಪ ಹೊತ್ತು “ಎನ್ಇಪಿ ಬೇಕು’ ಎಂಬ ಹ್ಯಾಷ್ಟ್ಯಾಗ್ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿ ಟ್ರೆಂಡ್ ಕೂಡ ಆಗಿದೆ.
ಎನ್ಇಪಿ ರದ್ದು ಮಾಡುವ ಸರಕಾರದ ನಡೆಯನ್ನು ಬಿಜೆಪಿ, ಎಬಿವಿಪಿ ಸಹಿತ ಹಲವು ಸಂಘಟನೆಗಳು ವಿರೋಧಿಸುತ್ತಿದ್ದು, ಒಂದು ಕೋಟಿ ಸಹಿ ಸಂಗ್ರಹ ಅಭಿಯಾನವನ್ನು ಆರಂಭಿಸಿವೆ. ಈ ನಿಟ್ಟಿನಲ್ಲಿ ಸೋಮವಾರ ಎಕ್ಸ್ ಮೂಲಕ ನಡೆದ ಎನ್ಇಪಿ ಬೇಕು ಅಭಿಯಾನದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಉನ್ನತ ಶಿಕ್ಷಣ ಸಚಿವ ಡಾ| ಸಿ. ಎನ್. ಅಶ್ವತ್ಥನಾರಾಯಣ, ಪ್ರಮುಖರಾದ ಸಿ. ಟಿ.ರವಿ, ಪಿ. ಸಿ. ಮೋಹನ್, ಬಸನಗೌಡ ಪಾಟೀಲ್ ಯತ್ನಾಳ್, ಉದಯ ಗರುಡಾಚಾರ್, ಅರುಣ್ ಶಹಾಪುರ ಸಹಿತ ಹಲವರು ಈ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಎಬಿವಿಪಿ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಸಂಘ, ವಿದ್ಯಾಭಾರತಿ, ಭಾರತೀಯ ಶಿಕ್ಷಣ ಮಂಡಲ, ಸಂಸ್ಕೃತ ಭಾರತೀ, ಗುರುಕುಲ, ಜನಸೇವಾ ಸೇವಾ ಕೇಂದ್ರ, ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ಪೀಪಲ್ಸ್ ಫಾರಂ ಫಾರ್ ಕರ್ನಾಟಕ ಎಜುಕೇಷನ್ ಮುಂತಾದ ಸಂಘಟನೆಗಳು ಈ ಅಭಿಯಾನದಲ್ಲಿ ಭಾಗಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.