Karnataka Govt.,: ಮೈಕ್ರೋಫೈನಾನ್ಸ್‌ ಕಿರುಕುಳ ತಡೆಗೆ ಇಂದು ಅಧ್ಯಾದೇಶ?

ಇಂದಿನ ಸಂಪುಟ ಸಭೆಯಲ್ಲಿ ಅಧ್ಯಾದೇಶ ಮಂಡನೆ: ಸಚಿವರು

Team Udayavani, Jan 30, 2025, 7:20 AM IST

Karnataka Govt.,: ಮೈಕ್ರೋಫೈನಾನ್ಸ್‌ ಕಿರುಕುಳ ತಡೆಗೆ ಇಂದು ಅಧ್ಯಾದೇಶ?

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಹಾಗೂ ಲೇವಾ ದೇವಿದಾರರ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರಕಾರ ಸಿದ್ಧಪಡಿಸಿರುವ ಅಧ್ಯಾದೇಶ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.

ಕರಡು ಸಿದ್ಧತೆಗೆ ಸಂಬಂಧಪಟ್ಟಂತೆ ವಿವಿಧ ಇಲಾಖೆಗಳ ಜತೆಗೆ ಸುದೀರ್ಘ‌ ಸಭೆ ನಡೆಸಿದ ಕಾನೂನು-ಸಂಸದೀಯ ವ್ಯವಹಾರ ಸಚಿವ ಎಚ್‌.ಕೆ. ಪಾಟೀಲ್‌ ಹಾಗೂ ಗೃಹಸಚಿವ ಡಾ| ಜಿ. ಪರಮೇಶ್ವರ್‌ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಹಾಗೂ ಲೇವಾದೇವಿದಾರ ರಿಗೆ ಕಡಿವಾಣ ಹಾಕಲು ಸಿದ್ಧಪಡಿಸಿದ ಕರಡು ಮಸೂದೆ ಯನ್ನು ಗುರುವಾರ ಮಂಡಿಸಲಾಗುವುದು.

ಈ ಸಂಬಂಧ ಗೃಹ ಇಲಾಖೆ, ಕಂದಾಯ, ಶಾಸನ ರಚನೆ, ಕಾನೂನು, ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ್ದೇವೆ. ಬುಧವಾರವೇ ಮುಖ್ಯಮಂತ್ರಿಗಳಿಗೆ ಕರಡು ಸಲ್ಲಿಸುತ್ತೇವೆ. ಗುರುವಾರದ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

ಸಚಿವ ಎಚ್‌.ಕೆ. ಪಾಟೀಲ್‌ ಮಾತನಾಡಿ, ಕಿರುಸಾಲ ನೀಡುವ ಹಣಕಾಸು ಸಂಸ್ಥೆಗಳ ಆರ್ಥಿಕ ವ್ಯವಹಾರಗಳಿಗೆ ಹೊಸ ಕಾನೂನು ಕಡಿವಾಣ ಹಾಕುವುದಿಲ್ಲ. ಸಾಲ ಇಷ್ಟೇ ಕೊಡಬೇಕು ಎಂಬ ನಿರ್ಬಂಧವನ್ನೂ ಹೇರುವುದಿಲ್ಲ. ನಿಯಮ ಬಾಹಿರ, ಬಲವಂತದ ಸಾಲ ವಸೂಲಾತಿಗೆ ತಡೆ ಹಾಕಲಾಗುವುದು. ಅಧಿವೇಶನದವರೆಗೂ ಕಾಯದೆ ತತ್‌ಕ್ಷಣ ಅಧ್ಯಾದೇಶ ಹೊರಡಿಸಲಾಗುತ್ತಿದೆ ಎಂದರು.

ಜಿ. ಪರಮೇಶ್ವರ್‌ ಮಾತನಾಡಿ, ಸಮಾಜದಲ್ಲಿ ಬಡವರೇ ಅಧಿಕ ಸಂಖ್ಯೆಯಲ್ಲಿ ಕಿರುಸಾಲ ತೆಗೆದುಕೊಳ್ಳುತ್ತಾರೆ. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ತೊಂದರೆಗೆ ಒಳಗಾದವರು ದೂರು ನೀಡದಿದ್ದರೂ ಸ್ಥಳೀಯರ ಅಭಿಪ್ರಾಯ ಪಡೆದು, ಸಾಕ್ಷಿಗಳನ್ನು ಪರಿಗಣಿಸಿ ಸ್ವಯಂ ದೂರು ದಾಖಲಿಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು. ಇದೇ ವೇಳೆ ಜನರಲ್ಲೂ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಏಕೆ ಅಧ್ಯಾದೇಶ?
-ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಳ
-ಕಿರುಕುಳ ತಾಳಲಾರದೇ ಹಲವರು ಆತ್ಮಹತ್ಯೆಗೆ ಶರಣು
-ಸಾಲಗಾರರ ಕಾಟಕ್ಕೆ ಬೆದರಿ ಗ್ರಾಮಗಳನ್ನೇ ತೊರೆದ ಹಲವರು
-ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದ ಮುಖ್ಯಮಂತ್ರಿ
-ಅಧ್ಯಾದೇಶ ಮೂಲಕ ಕಿರುಕುಳಕ್ಕೆ ಕಡಿವಾಣ ಹಾಕಲು ನಿರ್ಧಾರ

ಟಾಪ್ ನ್ಯೂಸ್

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

13-uv-fusion

UV Fusion: ತೆರೆಯಲು ಬಯಸದ ಮನದ ಪುಟ!

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Belagavi: Massive explosion of gelatin stick in stone quarry

Belagavi: ಕಲ್ಲಿನ ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಭಾರೀ ಪ್ರಮಾಣದ ಸ್ಪೋಟ; ಆತಂಕದಲ್ಲಿ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್

Belagavi: Massive explosion of gelatin stick in stone quarry

Belagavi: ಕಲ್ಲಿನ ಕ್ವಾರಿಯಲ್ಲಿ ಜಿಲೆಟಿನ್ ಕಡ್ಡಿ ಭಾರೀ ಪ್ರಮಾಣದ ಸ್ಪೋಟ; ಆತಂಕದಲ್ಲಿ ಜನ

Maha Kumbh 2025: Minister Prahlad Joshi takes holy dip at Triveni Sangam

Maha kumbh 2025: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಸಚಿವ ಪ್ರಹ್ಲಾದ ಜೋಶಿ

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

15-yellapur

Yellapur: ಕಂದಕಕ್ಕೆ ಬಿದ್ದ ಸರಕು ತುಂಬಿದ ಲಾರಿ; ಚಾಲಕ ಹಾಗೂ ನಿರ್ವಾಹಕ ಪಾರು

Manipal: ಫೆ.21, 22ರಂದು 6 ನೇ ರಾಷ್ಟ್ರೀಯ ಸಮ್ಮೇಳನ

Manipal: ಮಾಹೆ; ಆಧುನಿಕ ಗ್ರಂಥಾಲಯಗಳ ನಿರ್ವಹಣೆ: ಫೆ. 21, 22: 6ನೇ ರಾಷ್ಟ್ರೀಯ ಸಮ್ಮೇಳನ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.